<p><strong>ಪಟ್ನಾ(ಬಿಹಾರ):</strong> ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷ ಸಿಪಿಐ(ಎಂಎಲ್) ಲಿಬರೇಶನ್, 20 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ತನ್ನ ಎಲ್ಲಾ 12 ಹಾಲಿ ಶಾಸಕರನ್ನು ಮತ್ತೆ ಕಣಕ್ಕಿಳಿಸಿದೆ.</p><p>2020ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸಿರುವ ಪಕ್ಷವು, ಆ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಿದೆ. ಕಳೆದ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 12 ಕ್ಷೇತ್ರಗಳನ್ನು ಗೆದ್ದಿತ್ತು.</p><p>ಶಾಸಕರಾದ ಅಮರ್ಜೀತ್ ಕುಶ್ವಾಹ, ಸತ್ಯದೇವ್ ರಾಮ್, ಗೋಪಾಲ್ ರವಿ ದಾಸ್, ಸಂದೀಪ್ ಸೌರವ್, ಶಿವಪ್ರಕಾಶ್ ರಣಜ್, ಅಜೀತ್ ಕುಮಾರ್ ಸಿಂಗ್, ಬೀರೇಂದ್ರ ಪ್ರಸಾದ್ ಮತ್ತು ಮಹಬೂಬ್ ಆಲಂಗೆ ಮತ್ತೆ ಟಿಕೆಟ್ ನೀಡಿದೆ.</p><p>‘ಈ ಬಾರಿ 24 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಾವು ಬಯಸಿದ್ದೆವು. ಅಂತಿಮವಾಗಿ ನಮಗೆ 20 ವಿಧಾನಸಭಾ ಕ್ಷೇತ್ರಗಳು ಸಿಕ್ಕಿವೆ. ‘ಮಹಾಘಟಬಂಧನ್’ ಭಾರಿ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜನರು ಎನ್ಡಿಎ ಸರ್ಕಾರದಿಂದ ಬೇಸತ್ತಿದ್ದಾರೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ ಭಟ್ಟಾಚಾರ್ಯ ಹೇಳಿದ್ದಾರೆ.</p><p>243 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ(ಬಿಹಾರ):</strong> ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷ ಸಿಪಿಐ(ಎಂಎಲ್) ಲಿಬರೇಶನ್, 20 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ತನ್ನ ಎಲ್ಲಾ 12 ಹಾಲಿ ಶಾಸಕರನ್ನು ಮತ್ತೆ ಕಣಕ್ಕಿಳಿಸಿದೆ.</p><p>2020ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸಿರುವ ಪಕ್ಷವು, ಆ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಿದೆ. ಕಳೆದ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿ, 12 ಕ್ಷೇತ್ರಗಳನ್ನು ಗೆದ್ದಿತ್ತು.</p><p>ಶಾಸಕರಾದ ಅಮರ್ಜೀತ್ ಕುಶ್ವಾಹ, ಸತ್ಯದೇವ್ ರಾಮ್, ಗೋಪಾಲ್ ರವಿ ದಾಸ್, ಸಂದೀಪ್ ಸೌರವ್, ಶಿವಪ್ರಕಾಶ್ ರಣಜ್, ಅಜೀತ್ ಕುಮಾರ್ ಸಿಂಗ್, ಬೀರೇಂದ್ರ ಪ್ರಸಾದ್ ಮತ್ತು ಮಹಬೂಬ್ ಆಲಂಗೆ ಮತ್ತೆ ಟಿಕೆಟ್ ನೀಡಿದೆ.</p><p>‘ಈ ಬಾರಿ 24 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಾವು ಬಯಸಿದ್ದೆವು. ಅಂತಿಮವಾಗಿ ನಮಗೆ 20 ವಿಧಾನಸಭಾ ಕ್ಷೇತ್ರಗಳು ಸಿಕ್ಕಿವೆ. ‘ಮಹಾಘಟಬಂಧನ್’ ಭಾರಿ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ಜನರು ಎನ್ಡಿಎ ಸರ್ಕಾರದಿಂದ ಬೇಸತ್ತಿದ್ದಾರೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಂಕರ ಭಟ್ಟಾಚಾರ್ಯ ಹೇಳಿದ್ದಾರೆ.</p><p>243 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>