<p><strong>ಬೆಂಗಳೂರು:</strong> ‘ಬಿಹಾರ ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರಾಗಿದ್ದ ಕಾರಣಕ್ಕೆ ಮುಜರಾಯಿ ಇಲಾಖೆ ಆಯುಕ್ತ ಎಂ.ವಿ. ವೆಂಕಟೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವ ಪ್ರಕರಣ ಕೇಂದ್ರೀಯ ಆಡಳಿತ ನ್ಯಾಯಮಂಡಳಿಯಲ್ಲೇ (ಸಿಎಟಿ) ಇತ್ಯರ್ಥವಾಗಲಿ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದ ಸಿಎಟಿ ಕ್ರಮವನ್ನು ಪ್ರಶ್ನಿಸಿ ಎಂ.ವಿ.ವೆಂಕಟೇಶ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p><p>ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಈಗಾಗಲೇ ಪ್ರಕರಣದ ವಿಚಾರಣೆ ನಡೆಸಿರುವ ಸಿಎಟಿ, ಅರ್ಜಿದಾರರ ಮನವಿ ಪರಿಗಣಿಸಲಾಗುವುದು ಎಂದು ನವೆಂಬರ್ 4ರ ಆದೇಶದಲ್ಲಿ ತಿಳಿಸಿದೆ. ಹೀಗಿರುವಾಗ ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಕಾಣಿಸುತ್ತಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ‘ಪ್ರಕರಣವನ್ನು ಸಿಎಟಿಯೇ ಪರಿಶೀಲಿಸಲಿ. ಅರ್ಜಿದಾರರು ತಮ್ಮ ವಾದ, ಸಮರ್ಥನೆ, ಆಕ್ಷೇಪಣೆಗಳೇನೇ ಇದ್ದರೂ ಸಿಎಟಿ ಮುಂದೆಯೇ ಮಂಡಿಸಲಿ’ ಎಂದು ಹೇಳಿ ಅರ್ಜಿ ವಿಲೇವಾರಿ ಮಾಡಿತು.</p><p>ಬಿಹಾರ ಚುನಾವಣೆಯ ಸಾಮಾನ್ಯ ವೀಕ್ಷಕರನ್ನಾಗಿ ಎಂ.ವಿ.ವೆಂಕಟೇಶ್ ಅವರನ್ನು ನಿಯೋಜಿಸಲಾಗಿತ್ತು. ಅವರು ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಚುನಾವಣೆ ಆಯೋಗದ ನಿರ್ದೇಶನದ ಮೇರೆಗೆ, ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಅಕ್ಟೋಬರ್ 30ರಂದು ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಿಹಾರ ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರಾಗಿದ್ದ ಕಾರಣಕ್ಕೆ ಮುಜರಾಯಿ ಇಲಾಖೆ ಆಯುಕ್ತ ಎಂ.ವಿ. ವೆಂಕಟೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವ ಪ್ರಕರಣ ಕೇಂದ್ರೀಯ ಆಡಳಿತ ನ್ಯಾಯಮಂಡಳಿಯಲ್ಲೇ (ಸಿಎಟಿ) ಇತ್ಯರ್ಥವಾಗಲಿ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದ ಸಿಎಟಿ ಕ್ರಮವನ್ನು ಪ್ರಶ್ನಿಸಿ ಎಂ.ವಿ.ವೆಂಕಟೇಶ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p><p>ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಈಗಾಗಲೇ ಪ್ರಕರಣದ ವಿಚಾರಣೆ ನಡೆಸಿರುವ ಸಿಎಟಿ, ಅರ್ಜಿದಾರರ ಮನವಿ ಪರಿಗಣಿಸಲಾಗುವುದು ಎಂದು ನವೆಂಬರ್ 4ರ ಆದೇಶದಲ್ಲಿ ತಿಳಿಸಿದೆ. ಹೀಗಿರುವಾಗ ಈ ಹಂತದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಕಾಣಿಸುತ್ತಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ‘ಪ್ರಕರಣವನ್ನು ಸಿಎಟಿಯೇ ಪರಿಶೀಲಿಸಲಿ. ಅರ್ಜಿದಾರರು ತಮ್ಮ ವಾದ, ಸಮರ್ಥನೆ, ಆಕ್ಷೇಪಣೆಗಳೇನೇ ಇದ್ದರೂ ಸಿಎಟಿ ಮುಂದೆಯೇ ಮಂಡಿಸಲಿ’ ಎಂದು ಹೇಳಿ ಅರ್ಜಿ ವಿಲೇವಾರಿ ಮಾಡಿತು.</p><p>ಬಿಹಾರ ಚುನಾವಣೆಯ ಸಾಮಾನ್ಯ ವೀಕ್ಷಕರನ್ನಾಗಿ ಎಂ.ವಿ.ವೆಂಕಟೇಶ್ ಅವರನ್ನು ನಿಯೋಜಿಸಲಾಗಿತ್ತು. ಅವರು ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಚುನಾವಣೆ ಆಯೋಗದ ನಿರ್ದೇಶನದ ಮೇರೆಗೆ, ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಅಕ್ಟೋಬರ್ 30ರಂದು ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>