<p><strong>ಭುವನೇಶ್ವರ:</strong> ಮಹಾರಾಷ್ಟ್ರದಲ್ಲಿ ಮಾಡಿದಂತೆ ಮುಂಬರುವ ಬಿಹಾರ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ.</p><p>ನಗರದಲ್ಲಿ ನಡೆದ 'ಸಂವಿಧಾನ್ ಬಚಾವೋ ಸಮಾವೇಶ'ವನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ 'ಹೈಜಾಕ್' ಮಾಡುವುದನ್ನು ತಡೆಯಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು ರಾಹುಲ್ ತಿಳಿಸಿದ್ದಾರೆ.</p><p>'ಮಹಾರಾಷ್ಟ್ರದಂತೆಯೇ, ಬಿಹಾರದಲ್ಲೂ ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಈ ಮೂಲಕ ಬಿಜೆಪಿ ಚುನಾವಣೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ. ದೇಶಾದ್ಯಂತ ಬಿಜೆಪಿ ನಮ್ಮ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ' ಎಂದು ರಾಹುಲ್ ಗಂಭೀರವಾಗಿ ಆರೋಪಿಸಿದ್ದಾರೆ.</p>.ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್ಪ್ರೆಸ್ಗೆ ಶೀಘ್ರ ನಾಮಕರಣ: ಸೋಮಣ್ಣ.ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ. <p>ಭಾರತದ ಚುನಾವಣಾ ಆಯೋಗವು ತನ್ನ ಕರ್ತವ್ಯವನ್ನು ಮಾಡದೆ ಬಿಜೆಪಿಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಐವರು ಬಂಡವಾಳಶಾಹಿಗಳಿಗಾಗಿ ಬಿಜೆಪಿ ಸರ್ಕಾರವನ್ನು ನಡೆಸುತ್ತಿದೆಯೇ ಹೊರತು ದೇಶದ ಸಾಮಾನ್ಯ ಜನರಿಗೆ ಅಲ್ಲ ಎಂದು ರಾಹುಲ್ ಕಿಡಿಕಾರಿದ್ದಾರೆ.</p><p>'ಜಲ್, ಜಂಗಲ್, ಜಮೀನ್' (ನೀರು, ಅರಣ್ಯ ಮತ್ತು ಭೂಮಿ) ಬುಡಕಟ್ಟು ಜನಾಂಗಕ್ಕೆ ಸೇರಿದ್ದು. ಅವರಿಗಾಗಿಯೇ ಉಳಿಯಬೇಕು. ಒಡಿಶಾದಲ್ಲಿ ಬಿಜೆಪಿ ಸರ್ಕಾರವು 1996ರ ಪಂಚಾಯತ್ ಕಾಯ್ದೆಯನ್ನು ಅನುಷ್ಠಾನಗೊಳಿಸಿಲ್ಲ. ಬಿಜೆಡಿ ತನ್ನ ಅಧಿಕಾರಾವಧಿಯಲ್ಲಿ ಮಾಡಿದ್ದಂತೆಯೇ ಒಡಿಶಾವನ್ನು ಬಿಜೆಪಿ ಸರ್ಕಾರ ಲೂಟಿ ಮಾಡುತ್ತಿದೆ ಎಂದು ರಾಹುಲ್ ಹೇಳಿದ್ದಾರೆ.</p><p>ಕಾಂಗ್ರೆಸ್ ಪೆಸಾ ಮತ್ತು ಬುಡಕಟ್ಟು ಮಸೂದೆಯನ್ನು ತಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬುಡಕಟ್ಟು ಜನಾಂಗದವರಿಗೆ ಅವರ ಭೂಮಿ ಸಿಗುವಂತೆ ಮಾಡುತ್ತದೆ ಎಂದು ಗಾಂಧಿ ತಿಳಿಸಿದ್ದಾರೆ.</p>.ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ.ಐದು ವರ್ಷ ನಾನೇ CM: ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ.ಟಿಟಿಡಿಯಲ್ಲಿ 1,000 ಹಿಂದೂಯೇತರ ಸಿಬ್ಬಂದಿ, ತನಿಖೆಯಾಗಬೇಕು: ಕೇಂದ್ರ ಸಚಿವ.ದೆಹಲಿಯ ಬಡಾ ಹಿಂದೂ ರಾವ್ ಪ್ರದೇಶದಲ್ಲಿ ಕುಸಿದ ಮೂರು ಮಹಡಿಗಳ ಕಟ್ಟಡ: ಒಂದು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಮಹಾರಾಷ್ಟ್ರದಲ್ಲಿ ಮಾಡಿದಂತೆ ಮುಂಬರುವ ಬಿಹಾರ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ.</p><p>ನಗರದಲ್ಲಿ ನಡೆದ 'ಸಂವಿಧಾನ್ ಬಚಾವೋ ಸಮಾವೇಶ'ವನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಬಿಜೆಪಿ 'ಹೈಜಾಕ್' ಮಾಡುವುದನ್ನು ತಡೆಯಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು ರಾಹುಲ್ ತಿಳಿಸಿದ್ದಾರೆ.</p><p>'ಮಹಾರಾಷ್ಟ್ರದಂತೆಯೇ, ಬಿಹಾರದಲ್ಲೂ ಚುನಾವಣೆಯನ್ನು ಹೈಜಾಕ್ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಈ ಮೂಲಕ ಬಿಜೆಪಿ ಚುನಾವಣೆಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಗೆಲುವು ಸಾಧಿಸಲು ಪ್ರಯತ್ನಿಸುತ್ತಿದೆ. ದೇಶಾದ್ಯಂತ ಬಿಜೆಪಿ ನಮ್ಮ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ' ಎಂದು ರಾಹುಲ್ ಗಂಭೀರವಾಗಿ ಆರೋಪಿಸಿದ್ದಾರೆ.</p>.ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್ಪ್ರೆಸ್ಗೆ ಶೀಘ್ರ ನಾಮಕರಣ: ಸೋಮಣ್ಣ.ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ. <p>ಭಾರತದ ಚುನಾವಣಾ ಆಯೋಗವು ತನ್ನ ಕರ್ತವ್ಯವನ್ನು ಮಾಡದೆ ಬಿಜೆಪಿಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಐವರು ಬಂಡವಾಳಶಾಹಿಗಳಿಗಾಗಿ ಬಿಜೆಪಿ ಸರ್ಕಾರವನ್ನು ನಡೆಸುತ್ತಿದೆಯೇ ಹೊರತು ದೇಶದ ಸಾಮಾನ್ಯ ಜನರಿಗೆ ಅಲ್ಲ ಎಂದು ರಾಹುಲ್ ಕಿಡಿಕಾರಿದ್ದಾರೆ.</p><p>'ಜಲ್, ಜಂಗಲ್, ಜಮೀನ್' (ನೀರು, ಅರಣ್ಯ ಮತ್ತು ಭೂಮಿ) ಬುಡಕಟ್ಟು ಜನಾಂಗಕ್ಕೆ ಸೇರಿದ್ದು. ಅವರಿಗಾಗಿಯೇ ಉಳಿಯಬೇಕು. ಒಡಿಶಾದಲ್ಲಿ ಬಿಜೆಪಿ ಸರ್ಕಾರವು 1996ರ ಪಂಚಾಯತ್ ಕಾಯ್ದೆಯನ್ನು ಅನುಷ್ಠಾನಗೊಳಿಸಿಲ್ಲ. ಬಿಜೆಡಿ ತನ್ನ ಅಧಿಕಾರಾವಧಿಯಲ್ಲಿ ಮಾಡಿದ್ದಂತೆಯೇ ಒಡಿಶಾವನ್ನು ಬಿಜೆಪಿ ಸರ್ಕಾರ ಲೂಟಿ ಮಾಡುತ್ತಿದೆ ಎಂದು ರಾಹುಲ್ ಹೇಳಿದ್ದಾರೆ.</p><p>ಕಾಂಗ್ರೆಸ್ ಪೆಸಾ ಮತ್ತು ಬುಡಕಟ್ಟು ಮಸೂದೆಯನ್ನು ತಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬುಡಕಟ್ಟು ಜನಾಂಗದವರಿಗೆ ಅವರ ಭೂಮಿ ಸಿಗುವಂತೆ ಮಾಡುತ್ತದೆ ಎಂದು ಗಾಂಧಿ ತಿಳಿಸಿದ್ದಾರೆ.</p>.ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ.ಐದು ವರ್ಷ ನಾನೇ CM: ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ.ಟಿಟಿಡಿಯಲ್ಲಿ 1,000 ಹಿಂದೂಯೇತರ ಸಿಬ್ಬಂದಿ, ತನಿಖೆಯಾಗಬೇಕು: ಕೇಂದ್ರ ಸಚಿವ.ದೆಹಲಿಯ ಬಡಾ ಹಿಂದೂ ರಾವ್ ಪ್ರದೇಶದಲ್ಲಿ ಕುಸಿದ ಮೂರು ಮಹಡಿಗಳ ಕಟ್ಟಡ: ಒಂದು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>