<p><strong>ಪಟ್ನಾ:</strong> ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಪಾತಕಿ ಅನಂತ್ ಕುಮಾರ್ ಸಿಂಗ್ ಶುಕ್ರವಾರ ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.</p><p>ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಅನಂತ್ ಕುಮಾರ್ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.</p><p>ಆರ್ಜೆಡಿ ಅಭ್ಯರ್ಥಿ ವೀಣಾ ಸಿಂಗ್ ಅವರ ವಿರುದ್ಧ 28,206 ಮತಗಳಿಂದ ಜೆಡಿಯು ಪಕ್ಷದ ಅನಂತ್ ಕುಮಾರ್ ಜಯ ಸಾಧಿಸಿದ್ದಾರೆ. ಇವರು ಒಟ್ಟು 91,416 ಮತಗಳನ್ನು ಪಡೆದಿದ್ದಾರೆ. ಆರ್ಜೆಡಿ ಅಭ್ಯರ್ಥಿ 63,210 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. </p><p>ಮತದಾನ ನಡೆಯುವ ಕೆಲವೇ ದಿನಗಳ ಮೊದಲು ಕೊಲೆ ನಡೆದಿದ್ದು, ಚುನಾವಣಾ ಪ್ರಚಾರದ ನಡುವೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.</p><p>2022 ರಲ್ಲಿ ಯುಎಪಿಎ ಪ್ರಕರಣದಲ್ಲಿ ಅನಂತ್ ಕುಮಾರ್ ಸಿಂಗ್ ಶಿಕ್ಷೆಗೆ ಒಳಗಾಗಿದ್ದರು. ಆ ಸಂದರ್ಭದಲ್ಲಿ ಪತ್ನಿ ನೀಲಂ ದೇವಿಗೆ ಅಧಿಕಾರ ಹಸ್ತಾಂತರಿಸಿದ್ದರು ಇತ್ತೀಚೆಗೆ ಪಟ್ನಾ ಹೈಕೋರ್ಟ್ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಆ ಬಳಿಕ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಪಾತಕಿ ಅನಂತ್ ಕುಮಾರ್ ಸಿಂಗ್ ಶುಕ್ರವಾರ ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.</p><p>ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಅನಂತ್ ಕುಮಾರ್ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.</p><p>ಆರ್ಜೆಡಿ ಅಭ್ಯರ್ಥಿ ವೀಣಾ ಸಿಂಗ್ ಅವರ ವಿರುದ್ಧ 28,206 ಮತಗಳಿಂದ ಜೆಡಿಯು ಪಕ್ಷದ ಅನಂತ್ ಕುಮಾರ್ ಜಯ ಸಾಧಿಸಿದ್ದಾರೆ. ಇವರು ಒಟ್ಟು 91,416 ಮತಗಳನ್ನು ಪಡೆದಿದ್ದಾರೆ. ಆರ್ಜೆಡಿ ಅಭ್ಯರ್ಥಿ 63,210 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. </p><p>ಮತದಾನ ನಡೆಯುವ ಕೆಲವೇ ದಿನಗಳ ಮೊದಲು ಕೊಲೆ ನಡೆದಿದ್ದು, ಚುನಾವಣಾ ಪ್ರಚಾರದ ನಡುವೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.</p><p>2022 ರಲ್ಲಿ ಯುಎಪಿಎ ಪ್ರಕರಣದಲ್ಲಿ ಅನಂತ್ ಕುಮಾರ್ ಸಿಂಗ್ ಶಿಕ್ಷೆಗೆ ಒಳಗಾಗಿದ್ದರು. ಆ ಸಂದರ್ಭದಲ್ಲಿ ಪತ್ನಿ ನೀಲಂ ದೇವಿಗೆ ಅಧಿಕಾರ ಹಸ್ತಾಂತರಿಸಿದ್ದರು ಇತ್ತೀಚೆಗೆ ಪಟ್ನಾ ಹೈಕೋರ್ಟ್ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಆ ಬಳಿಕ ಜೆಡಿಯು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>