<p><strong>ಪಟ್ನಾ:</strong> ಜನ ಸುರಾಜ್ ಪಕ್ಷದ ಮೂವರು ಅಭ್ಯರ್ಥಿಗಳು ಚುನಾವಣೆ ಕಣದಿಂದ ಹಿಂದೆ ಸರಿದಿರುವುದಕ್ಕೆ ಬಿಜೆಪಿ ಕಾರಣ ಎಂದು ಪಕ್ಷದ ವರಿಷ್ಠ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ.</p><p>ಚುನಾವಣಾ ತಂತ್ರಜ್ಞ ಎಂದೇ ಖ್ಯಾತರಾಗಿದ್ದ ಪ್ರಶಾಂತ್ ಕಿಶೋರ್ ಹೊಸ ಪಕ್ಷ ಕಟ್ಟುವ ಮೂಲಕ ರಾಜಕಾರಣಿಯಾಗಿದ್ದಾರೆ. ಬಿಹಾರದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುಲಿರುವ ವಿಧಾನಸಭಾ ಚುನಾವಣೆಗೆ ಅವರ ಪಕ್ಷ ಸ್ಪರ್ಧೆ ಮಾಡುತ್ತಿದ್ದೆ.</p><p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಬಿಜೆಪಿ ಒತ್ತಡದ ಹಿನ್ನೆಲೆಯಲ್ಲಿ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ ಎಂದರು.</p><p>ಚುನಾವಣೆಯಲ್ಲಿ ಸೋಲುವ ಭಯದಿಂದ ಆಡಳಿತಾರೂಢ ಎನ್ಡಿಎ ವಿರೋಧ ಪಕ್ಷದ ಅಭ್ಯರ್ಥಿಗಳಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದರು.</p><p>ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ, ಇಲ್ಲಿಯವರೆಗೂ ದೇಶದಲ್ಲಿ ಇಂತಹ ಘಟನೆಗಳು ನಡೆದ ಉದಾಹರಣೆ ಇಲ್ಲ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗವು ಅಭ್ಯರ್ಥಿಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p><p>ತಮ್ಮ ಪಕ್ಷ 243 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಈ ಪೈಕಿ ದಾನಾಪುರ, ಬ್ರಹ್ಮಪುರ ಮತ್ತು ಗೋಪಾಲಗಂಜ್ ವಿಧಾನಸಭಾ ಕ್ಷೇತ್ರಗಳಿಂದ ತಮ್ಮ ಅಭ್ಯರ್ಥಿಗಳು ಹಿಂದೆಸರಿದಿದ್ದಾರೆ. ಇದರಿಂದ 240 ಕ್ಷೇತ್ರಗಳಲ್ಲಿ ಮಾತ್ರ ಪಕ್ಷದ ಸ್ಪರ್ಧೆ ಇರಲಿದೆ ಎಂದರು.</p>.ಜನ ಸುರಾಜ್ ಪಾರ್ಟಿಗೆ ಸೇರಿದ ಆರ್ಜೆಡಿ ನಾಯಕ.ಬಿಹಾರದಲ್ಲಿ ಪಾನ ನಿಷೇಧ ವಾಪಸ್: ಜನ ಸುರಾಜ್ ಪಾರ್ಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಜನ ಸುರಾಜ್ ಪಕ್ಷದ ಮೂವರು ಅಭ್ಯರ್ಥಿಗಳು ಚುನಾವಣೆ ಕಣದಿಂದ ಹಿಂದೆ ಸರಿದಿರುವುದಕ್ಕೆ ಬಿಜೆಪಿ ಕಾರಣ ಎಂದು ಪಕ್ಷದ ವರಿಷ್ಠ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ.</p><p>ಚುನಾವಣಾ ತಂತ್ರಜ್ಞ ಎಂದೇ ಖ್ಯಾತರಾಗಿದ್ದ ಪ್ರಶಾಂತ್ ಕಿಶೋರ್ ಹೊಸ ಪಕ್ಷ ಕಟ್ಟುವ ಮೂಲಕ ರಾಜಕಾರಣಿಯಾಗಿದ್ದಾರೆ. ಬಿಹಾರದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುಲಿರುವ ವಿಧಾನಸಭಾ ಚುನಾವಣೆಗೆ ಅವರ ಪಕ್ಷ ಸ್ಪರ್ಧೆ ಮಾಡುತ್ತಿದ್ದೆ.</p><p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಬಿಜೆಪಿ ಒತ್ತಡದ ಹಿನ್ನೆಲೆಯಲ್ಲಿ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ ಎಂದರು.</p><p>ಚುನಾವಣೆಯಲ್ಲಿ ಸೋಲುವ ಭಯದಿಂದ ಆಡಳಿತಾರೂಢ ಎನ್ಡಿಎ ವಿರೋಧ ಪಕ್ಷದ ಅಭ್ಯರ್ಥಿಗಳಿಗೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದರು.</p><p>ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ, ಇಲ್ಲಿಯವರೆಗೂ ದೇಶದಲ್ಲಿ ಇಂತಹ ಘಟನೆಗಳು ನಡೆದ ಉದಾಹರಣೆ ಇಲ್ಲ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗವು ಅಭ್ಯರ್ಥಿಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p><p>ತಮ್ಮ ಪಕ್ಷ 243 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಈ ಪೈಕಿ ದಾನಾಪುರ, ಬ್ರಹ್ಮಪುರ ಮತ್ತು ಗೋಪಾಲಗಂಜ್ ವಿಧಾನಸಭಾ ಕ್ಷೇತ್ರಗಳಿಂದ ತಮ್ಮ ಅಭ್ಯರ್ಥಿಗಳು ಹಿಂದೆಸರಿದಿದ್ದಾರೆ. ಇದರಿಂದ 240 ಕ್ಷೇತ್ರಗಳಲ್ಲಿ ಮಾತ್ರ ಪಕ್ಷದ ಸ್ಪರ್ಧೆ ಇರಲಿದೆ ಎಂದರು.</p>.ಜನ ಸುರಾಜ್ ಪಾರ್ಟಿಗೆ ಸೇರಿದ ಆರ್ಜೆಡಿ ನಾಯಕ.ಬಿಹಾರದಲ್ಲಿ ಪಾನ ನಿಷೇಧ ವಾಪಸ್: ಜನ ಸುರಾಜ್ ಪಾರ್ಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>