<p><strong>ಪಟ್ನಾ:</strong> 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ನನ್ನ ನಿರ್ಧಾರವು ತಪ್ಪು ಎಂದು ಪರಿಗಣಿಸಬಹುದು' ಎಂದು ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಇಂದು (ಬುಧವಾರ) ಹೇಳಿದ್ದಾರೆ. </p><p>'ಬಿಹಾರ ಚುನಾವಣೆಯಲ್ಲಿ ಶೇ 4ಕ್ಕಿಂತ ಕಡಿಮೆ ಮತ ಗಳಿಸುವುದಾಗಿ ಎಂದೂ ನಿರೀಕ್ಷೆ ಮಾಡಿರಲಿಲ್ಲ' ಎಂದು ಅವರು ಹೇಳಿದ್ದಾರೆ. </p><p>'ಚುನಾವಣೆಯಲ್ಲಿ ಸ್ಪರ್ಧಿಸದಿರುವ ನನ್ನ ನಿರ್ಧಾರ ತಪ್ಪಾಗಿತ್ತು ಎಂದು ಪರಿಗಣಿಸಬಹುದು. ಪಕ್ಷ ಉತ್ತಮ ಸಾಧನೆ ಮಾಡಲು ಇನ್ನು ಬಹಳಷ್ಟು ಪರಿಶ್ರಮಪಡಬೇಕಿದೆ' ಎಂದು ಹೇಳಿದ್ದಾರೆ. </p><p>'ಬಿಹಾರದಲ್ಲಿ ಗೆಲ್ಲದ ಹೊರತು ನಾನು ಹಿಂದೆ ಸರಿಯುವುದಿಲ್ಲ. ಅದಕ್ಕಾಗಿ ಎಷ್ಟು ಸಮಯ ಬೇಕೆಂಬುದು ನನಗೆ ತಿಳಿದಿಲ್ಲ' ಎಂದು ಹೇಳಿದ್ದಾರೆ. </p><p>'ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿ ಕ್ಷೇತ್ರದ ಆರು ಸಾವಿರ ಫಲಾನುಭವಿಗಳಿಗೆ ₹10 ಸಾವಿರ ನೀಡದಿದ್ದರೆ ಮತ್ತು ಸ್ವ–ಉದ್ಯೋಗ ಯೋಜನೆಯಡಿ 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ಆರ್ಥಿಕ ನೆರವು ನೀಡುವ ಭರವಸೆ ನೀಡಿರದಿದ್ದರೆ ಜೆಡಿಯು ಕೇವಲ 25 ಸ್ಥಾನಗಳಿಗೆ ಸೀಮಿತವಾಗುತ್ತಿತ್ತು' ಎಂದು ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಮಂಗಳವಾರ ಹೇಳಿಕೆ ನೀಡಿದ್ದರು. </p><p>ಇತ್ತೀಚೆಗೆ ಅಂತ್ಯಗೊಂಡ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. </p>.ಮಹಿಳೆಯರಿಗೆ ಹಣ ನೀಡಿ ಗೆಲುವು ಸಾಧಿಸಿದ ಜೆಡಿಯು: ಪ್ರಶಾಂತ್ ಕಿಶೋರ್.Bihar Results: ಸೊನ್ನೆ ಸುತ್ತಿದ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ನನ್ನ ನಿರ್ಧಾರವು ತಪ್ಪು ಎಂದು ಪರಿಗಣಿಸಬಹುದು' ಎಂದು ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಇಂದು (ಬುಧವಾರ) ಹೇಳಿದ್ದಾರೆ. </p><p>'ಬಿಹಾರ ಚುನಾವಣೆಯಲ್ಲಿ ಶೇ 4ಕ್ಕಿಂತ ಕಡಿಮೆ ಮತ ಗಳಿಸುವುದಾಗಿ ಎಂದೂ ನಿರೀಕ್ಷೆ ಮಾಡಿರಲಿಲ್ಲ' ಎಂದು ಅವರು ಹೇಳಿದ್ದಾರೆ. </p><p>'ಚುನಾವಣೆಯಲ್ಲಿ ಸ್ಪರ್ಧಿಸದಿರುವ ನನ್ನ ನಿರ್ಧಾರ ತಪ್ಪಾಗಿತ್ತು ಎಂದು ಪರಿಗಣಿಸಬಹುದು. ಪಕ್ಷ ಉತ್ತಮ ಸಾಧನೆ ಮಾಡಲು ಇನ್ನು ಬಹಳಷ್ಟು ಪರಿಶ್ರಮಪಡಬೇಕಿದೆ' ಎಂದು ಹೇಳಿದ್ದಾರೆ. </p><p>'ಬಿಹಾರದಲ್ಲಿ ಗೆಲ್ಲದ ಹೊರತು ನಾನು ಹಿಂದೆ ಸರಿಯುವುದಿಲ್ಲ. ಅದಕ್ಕಾಗಿ ಎಷ್ಟು ಸಮಯ ಬೇಕೆಂಬುದು ನನಗೆ ತಿಳಿದಿಲ್ಲ' ಎಂದು ಹೇಳಿದ್ದಾರೆ. </p><p>'ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿ ಕ್ಷೇತ್ರದ ಆರು ಸಾವಿರ ಫಲಾನುಭವಿಗಳಿಗೆ ₹10 ಸಾವಿರ ನೀಡದಿದ್ದರೆ ಮತ್ತು ಸ್ವ–ಉದ್ಯೋಗ ಯೋಜನೆಯಡಿ 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ಆರ್ಥಿಕ ನೆರವು ನೀಡುವ ಭರವಸೆ ನೀಡಿರದಿದ್ದರೆ ಜೆಡಿಯು ಕೇವಲ 25 ಸ್ಥಾನಗಳಿಗೆ ಸೀಮಿತವಾಗುತ್ತಿತ್ತು' ಎಂದು ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಮಂಗಳವಾರ ಹೇಳಿಕೆ ನೀಡಿದ್ದರು. </p><p>ಇತ್ತೀಚೆಗೆ ಅಂತ್ಯಗೊಂಡ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. </p>.ಮಹಿಳೆಯರಿಗೆ ಹಣ ನೀಡಿ ಗೆಲುವು ಸಾಧಿಸಿದ ಜೆಡಿಯು: ಪ್ರಶಾಂತ್ ಕಿಶೋರ್.Bihar Results: ಸೊನ್ನೆ ಸುತ್ತಿದ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>