<p><strong>ಪಟ್ನಾ:</strong> ಬಿಹಾರದ ಜನರು ವಿವೇಚನೆಯಿಂದ ಮತ ಚಲಾವಣೆ ಮಾಡುವ ಮೂಲಕ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂದು ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಮಂಗಳವಾರ ಹೇಳಿದ್ದಾರೆ.</p><p>ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಕಾರ್ಗಹರ್ನಲ್ಲಿ ಮತ ಚಲಾವಣೆ ಮಾಡಿ, ಅವರು ಮಾತನಾಡಿದ್ದಾರೆ. </p><p>ಈ ಬಾರಿಯ ಚುನಾವಣೆಯಲ್ಲಿ ಸರಿಯಾದ ಪಕ್ಷಕ್ಕೆ ಜನರು ಮತ ಚಲಾವಣೆ ಮಾಡದಿದ್ದರೆ, ಇನ್ನೂ ಐದು ವರ್ಷಗಳ ಕಾಲ ರಾಜ್ಯವು ಭ್ರಷ್ಟಾಚಾರ, ನಿರುದ್ಯೋಗ ಹಾಗೂ ವಲಸೆಗೆ ಗುರಿಯಾಗುತ್ತದೆ ಎಂದು ಹೇಳಿದ್ದಾರೆ. </p><p>ಬಿಹಾರದ ಜನರು ಮತ ಚಲಾವಣೆಯ ದಿನದಂದು ನಿಮ್ಮ ಮನೆಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ. ಮತಗಟ್ಟೆಗೆ ತೆರಳಿ ನಿಮ್ಮ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂದು ತಿಳಿಸಿದ್ದಾರೆ.</p><p>ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಚುನಾವಣೆಯು ಒಳ್ಳೆಯ ಅವಕಾಶವಾಗಿದೆ. ಈ ಮೂಲಕ ಶಿಕ್ಷಣ ಹಾಗೂ ಉದ್ಯೋಗ ವಲಯದಲ್ಲಿ ಬದಲಾವಣೆ ಸಾಧ್ಯ ಎಂದಿದ್ದಾರೆ. </p><p>ಬಿಹಾರದ 122 ವಿಧಾನಸಭಾ ಕ್ಷೇತ್ರಗಳಿಗೆ ಇಂದು(ಮಂಗಳವಾರ) ಮತದಾನ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆಯ ವೇಳೆಗೆ ಶೇ 31.38 ರಷ್ಟು ಮತದಾನವಾಗಿದೆ.</p>.ಬಿಹಾರ ಚುನಾವಣೆ: ಮತಗಟ್ಟೆ ಬಳಿ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದ ಜನರು ವಿವೇಚನೆಯಿಂದ ಮತ ಚಲಾವಣೆ ಮಾಡುವ ಮೂಲಕ ರಾಜ್ಯದಲ್ಲಿ ಬದಲಾವಣೆ ತರಬೇಕು ಎಂದು ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಮಂಗಳವಾರ ಹೇಳಿದ್ದಾರೆ.</p><p>ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಕಾರ್ಗಹರ್ನಲ್ಲಿ ಮತ ಚಲಾವಣೆ ಮಾಡಿ, ಅವರು ಮಾತನಾಡಿದ್ದಾರೆ. </p><p>ಈ ಬಾರಿಯ ಚುನಾವಣೆಯಲ್ಲಿ ಸರಿಯಾದ ಪಕ್ಷಕ್ಕೆ ಜನರು ಮತ ಚಲಾವಣೆ ಮಾಡದಿದ್ದರೆ, ಇನ್ನೂ ಐದು ವರ್ಷಗಳ ಕಾಲ ರಾಜ್ಯವು ಭ್ರಷ್ಟಾಚಾರ, ನಿರುದ್ಯೋಗ ಹಾಗೂ ವಲಸೆಗೆ ಗುರಿಯಾಗುತ್ತದೆ ಎಂದು ಹೇಳಿದ್ದಾರೆ. </p><p>ಬಿಹಾರದ ಜನರು ಮತ ಚಲಾವಣೆಯ ದಿನದಂದು ನಿಮ್ಮ ಮನೆಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ. ಮತಗಟ್ಟೆಗೆ ತೆರಳಿ ನಿಮ್ಮ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂದು ತಿಳಿಸಿದ್ದಾರೆ.</p><p>ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಚುನಾವಣೆಯು ಒಳ್ಳೆಯ ಅವಕಾಶವಾಗಿದೆ. ಈ ಮೂಲಕ ಶಿಕ್ಷಣ ಹಾಗೂ ಉದ್ಯೋಗ ವಲಯದಲ್ಲಿ ಬದಲಾವಣೆ ಸಾಧ್ಯ ಎಂದಿದ್ದಾರೆ. </p><p>ಬಿಹಾರದ 122 ವಿಧಾನಸಭಾ ಕ್ಷೇತ್ರಗಳಿಗೆ ಇಂದು(ಮಂಗಳವಾರ) ಮತದಾನ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆಯ ವೇಳೆಗೆ ಶೇ 31.38 ರಷ್ಟು ಮತದಾನವಾಗಿದೆ.</p>.ಬಿಹಾರ ಚುನಾವಣೆ: ಮತಗಟ್ಟೆ ಬಳಿ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>