<p><strong>ಪಟ್ನಾ:</strong> ವಿಧಾನಸಭೆ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸರ್ಕಾರವು 1.5 ಕೋಟಿ ಜನರಿಗೆ ತಲಾ ₹2 ಲಕ್ಷ ನೀಡಿದರೆ ರಾಜಕೀಯ ತೊರೆಯುವುದಾಗಿ ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಇಂದು (ಮಂಗಳವಾರ) ಸವಾಲು ಹಾಕಿದ್ದಾರೆ. </p><p>'ಚುನಾವಣೆಗೂ ಮೊದಲು ಮಹಿಳೆಯರಿಗೆ ₹10 ಸಾವಿರ ನೀಡದಿರುತ್ತಿದ್ದರೆ ಜೆಡಿಯು 25 ಸ್ಥಾನಗಳಿಗೆ ಸೀಮಿತಗೊಳ್ಳುತ್ತಿತ್ತು' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. </p><p>'ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿ ಕ್ಷೇತ್ರದಲ್ಲಿ 60 ಸಾವಿರ ಫಲಾನುಭವಿಗಳಿಗೆ ₹10,000 ನೀಡದಿದ್ದರೆ ಮತ್ತು ಸ್ವ-ಉದ್ಯೋಗ ಉಪಕ್ರಮಗಳ ಅಡಿಯಲ್ಲಿ <em>ರಾಜ್ಯಾದ್ಯಂತ</em> 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ನೀಡುವ ವಾಗ್ದಾನ ನೀಡದಿದ್ದರೆ ಜೆಡಿಯು ಪಕ್ಷ ಹೀನಾಯ ಸೋಲು ಕಾಣುತ್ತಿತ್ತು' ಎಂದು ಅವರು ಆರೋಪಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜನ ಸುರಾಜ್ ಪಕ್ಷವು ಪ್ರಾಮಾಣಿಕ ಯತ್ನವನ್ನು ನಡೆಸಿತು. ಆದರೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಸೋಲಿನ ಸಂಪೂರ್ಣ ಹೊಣೆಯನ್ನು ವಹಿಸುತ್ತೇನೆ' ಎಂದು ಹೇಳಿದ್ದಾರೆ. </p><p>'ಮತಗಳ್ಳತನ ಇಡೀ ದೇಶದಲ್ಲಿ ನಡೆಯುತ್ತಿದೆ. ವಿರೋಧ ಪಕ್ಷ ಈ ಕುರಿತು ಚರ್ಚೆ ನಡೆಸಿ ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ. </p><p>'ನಮಗೆ ಹಿನ್ನಡೆಯಾಗಿದೆ. ಆದರೆ ತಪ್ಪನ್ನು ತಿದ್ದಿಕೊಳ್ಳುತ್ತೇವೆ. ಮತ್ತಷ್ಟು ಪ್ರಬಲರಾಗಿ ಪುಟಿದೇಳುತ್ತೇವೆ' ಎಂದು ಭರವಸೆ ನೀಡಿದ್ದಾರೆ. </p><p>'ಜಾತಿ ಹಾಗೂ ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸಿದ ಎನ್ಡಿಎ, ಜನರಿಗೆ ಹಣ ನೀಡಿ ಮತ ಗಳಿಸಿದೆ. ಆದರೆ ಕನಿಷ್ಠ ಪಕ್ಷ ನಾನು ಭ್ರಷ್ಟ ಹಾಗೂ ವಿಭಜನೆಯ ರಾಜಕಾರಣ ಮಾಡಿಲ್ಲ' ಎಂದು ಅವರು ಹೇಳಿದ್ದಾರೆ. </p>.Bihar Govt Formation: ನ.20ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸಾಧ್ಯತೆ.Bihar Election: ಒಂದಂಕಿ ಸ್ಥಾನ ಪಡೆದು ತತ್ತರಿಸಿದ ಕಾಂಗ್ರೆಸ್ ಭವಿಷ್ಯವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ವಿಧಾನಸಭೆ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸರ್ಕಾರವು 1.5 ಕೋಟಿ ಜನರಿಗೆ ತಲಾ ₹2 ಲಕ್ಷ ನೀಡಿದರೆ ರಾಜಕೀಯ ತೊರೆಯುವುದಾಗಿ ಜನ ಸುರಾಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಇಂದು (ಮಂಗಳವಾರ) ಸವಾಲು ಹಾಕಿದ್ದಾರೆ. </p><p>'ಚುನಾವಣೆಗೂ ಮೊದಲು ಮಹಿಳೆಯರಿಗೆ ₹10 ಸಾವಿರ ನೀಡದಿರುತ್ತಿದ್ದರೆ ಜೆಡಿಯು 25 ಸ್ಥಾನಗಳಿಗೆ ಸೀಮಿತಗೊಳ್ಳುತ್ತಿತ್ತು' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. </p><p>'ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿ ಕ್ಷೇತ್ರದಲ್ಲಿ 60 ಸಾವಿರ ಫಲಾನುಭವಿಗಳಿಗೆ ₹10,000 ನೀಡದಿದ್ದರೆ ಮತ್ತು ಸ್ವ-ಉದ್ಯೋಗ ಉಪಕ್ರಮಗಳ ಅಡಿಯಲ್ಲಿ <em>ರಾಜ್ಯಾದ್ಯಂತ</em> 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ನೀಡುವ ವಾಗ್ದಾನ ನೀಡದಿದ್ದರೆ ಜೆಡಿಯು ಪಕ್ಷ ಹೀನಾಯ ಸೋಲು ಕಾಣುತ್ತಿತ್ತು' ಎಂದು ಅವರು ಆರೋಪಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜನ ಸುರಾಜ್ ಪಕ್ಷವು ಪ್ರಾಮಾಣಿಕ ಯತ್ನವನ್ನು ನಡೆಸಿತು. ಆದರೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಸೋಲಿನ ಸಂಪೂರ್ಣ ಹೊಣೆಯನ್ನು ವಹಿಸುತ್ತೇನೆ' ಎಂದು ಹೇಳಿದ್ದಾರೆ. </p><p>'ಮತಗಳ್ಳತನ ಇಡೀ ದೇಶದಲ್ಲಿ ನಡೆಯುತ್ತಿದೆ. ವಿರೋಧ ಪಕ್ಷ ಈ ಕುರಿತು ಚರ್ಚೆ ನಡೆಸಿ ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಬೇಕು' ಎಂದು ಅವರು ಒತ್ತಾಯಿಸಿದ್ದಾರೆ. </p><p>'ನಮಗೆ ಹಿನ್ನಡೆಯಾಗಿದೆ. ಆದರೆ ತಪ್ಪನ್ನು ತಿದ್ದಿಕೊಳ್ಳುತ್ತೇವೆ. ಮತ್ತಷ್ಟು ಪ್ರಬಲರಾಗಿ ಪುಟಿದೇಳುತ್ತೇವೆ' ಎಂದು ಭರವಸೆ ನೀಡಿದ್ದಾರೆ. </p><p>'ಜಾತಿ ಹಾಗೂ ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸಿದ ಎನ್ಡಿಎ, ಜನರಿಗೆ ಹಣ ನೀಡಿ ಮತ ಗಳಿಸಿದೆ. ಆದರೆ ಕನಿಷ್ಠ ಪಕ್ಷ ನಾನು ಭ್ರಷ್ಟ ಹಾಗೂ ವಿಭಜನೆಯ ರಾಜಕಾರಣ ಮಾಡಿಲ್ಲ' ಎಂದು ಅವರು ಹೇಳಿದ್ದಾರೆ. </p>.Bihar Govt Formation: ನ.20ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸಾಧ್ಯತೆ.Bihar Election: ಒಂದಂಕಿ ಸ್ಥಾನ ಪಡೆದು ತತ್ತರಿಸಿದ ಕಾಂಗ್ರೆಸ್ ಭವಿಷ್ಯವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>