<p><strong>ಪಟ್ನಾ:</strong> ‘ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿ ಕ್ಷೇತ್ರದ ಆರು ಸಾವಿರ ಫಲಾನುಭವಿಗಳಿಗೆ ₹10 ಸಾವಿರ ನೀಡದಿದ್ದರೆ ಮತ್ತು ಸ್ವ–ಉದ್ಯೋಗ ಯೋಜನೆಯಡಿ 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ಆರ್ಥಿಕ ನೆರವು ನೀಡುವ ಭರವಸೆ ನೀಡಿರದಿದ್ದರೆ ಜೆಡಿಯು ಕೇವಲ 25 ಸ್ಥಾನಗಳಿಗೆ ಸೀಮಿತವಾಗುತ್ತಿತ್ತು‘ ಎಂದು ಜನ ಸುರಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಮಂಗಳವಾರ ಹೇಳಿದರು. </p><p>‘ಎನ್ಡಿಎ ಸರ್ಕಾರವು ಜನರ ಹಣದಿಂದ ₹40 ಸಾವಿರ ಕೋಟಿ ನೀಡುವುದಾಗಿ ಹೇಳಿ, ಚುನಾವಣೆ ಸಮೀಪಿಸುತ್ತಿರುವಾಗ ಅದನ್ನು ಬಿಡುಗಡೆ ಮಾಡಿದೆ’ ಎಂದು ಆರೋಪಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾವು ತಪ್ಪು ಮಾಡಿರಬಹುದು. ಆದರೆ, ಮತಕ್ಕಾಗಿ ವಿಭಜನೆ ಮತ್ತು ಮುಗ್ದ ಜನರ ಮತದಾನದ ಹಕ್ಕನ್ನು ಖರೀದಿಸುವ ಅಪರಾಧವನ್ನು ಮಾಡಿಲ್ಲ’ ಎಂದು ಹೇಳಿದರು.</p><p>'ಚುನಾವಣೆಯಲ್ಲಿ ಸೋತಿದ್ದಕ್ಕಾಗಿ ಬಿಹಾರದ ಜನತೆಯಲ್ಲಿ ಕ್ಷಮೆಯಾಚಿಸುತ್ತೇನೆ. ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ ಮತ್ತು ಬಿಹಾರವನ್ನು ತೊರೆಯುವುದಿಲ್ಲ’ ಎಂದು ತಿಳಿಸಿದರು.</p><p>ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಗಳನ್ನು ಎನ್ಡಿಎ ಸರ್ಕಾರ ಪೂರ್ಣಗೊಳಿಸಿದರೆ ಮತ್ತು ರಾಜ್ಯದ 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ಆರ್ಥಿಕ ನೆರವು ನೀಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕಿಶೋರ್ ಹೇಳಿದರು.</p><p>ಚುನಾವಣೆಯಲ್ಲಿ ಜೆಡಿಯು 25ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಶಾಂತ್ಕಿಶೋರ್ ಅವರು ಚುನಾವಣೆಗೂ ಮುನ್ನ ಹೇಳಿದ್ದರು. </p>.Bihar Govt Formation: ನ.20ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸಾಧ್ಯತೆ.Bihar Election: ಒಂದಂಕಿ ಸ್ಥಾನ ಪಡೆದು ತತ್ತರಿಸಿದ ಕಾಂಗ್ರೆಸ್ ಭವಿಷ್ಯವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿ ಕ್ಷೇತ್ರದ ಆರು ಸಾವಿರ ಫಲಾನುಭವಿಗಳಿಗೆ ₹10 ಸಾವಿರ ನೀಡದಿದ್ದರೆ ಮತ್ತು ಸ್ವ–ಉದ್ಯೋಗ ಯೋಜನೆಯಡಿ 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ಆರ್ಥಿಕ ನೆರವು ನೀಡುವ ಭರವಸೆ ನೀಡಿರದಿದ್ದರೆ ಜೆಡಿಯು ಕೇವಲ 25 ಸ್ಥಾನಗಳಿಗೆ ಸೀಮಿತವಾಗುತ್ತಿತ್ತು‘ ಎಂದು ಜನ ಸುರಜ್ ಪಕ್ಷದ ನಾಯಕ ಪ್ರಶಾಂತ್ ಕಿಶೋರ್ ಮಂಗಳವಾರ ಹೇಳಿದರು. </p><p>‘ಎನ್ಡಿಎ ಸರ್ಕಾರವು ಜನರ ಹಣದಿಂದ ₹40 ಸಾವಿರ ಕೋಟಿ ನೀಡುವುದಾಗಿ ಹೇಳಿ, ಚುನಾವಣೆ ಸಮೀಪಿಸುತ್ತಿರುವಾಗ ಅದನ್ನು ಬಿಡುಗಡೆ ಮಾಡಿದೆ’ ಎಂದು ಆರೋಪಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾವು ತಪ್ಪು ಮಾಡಿರಬಹುದು. ಆದರೆ, ಮತಕ್ಕಾಗಿ ವಿಭಜನೆ ಮತ್ತು ಮುಗ್ದ ಜನರ ಮತದಾನದ ಹಕ್ಕನ್ನು ಖರೀದಿಸುವ ಅಪರಾಧವನ್ನು ಮಾಡಿಲ್ಲ’ ಎಂದು ಹೇಳಿದರು.</p><p>'ಚುನಾವಣೆಯಲ್ಲಿ ಸೋತಿದ್ದಕ್ಕಾಗಿ ಬಿಹಾರದ ಜನತೆಯಲ್ಲಿ ಕ್ಷಮೆಯಾಚಿಸುತ್ತೇನೆ. ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ ಮತ್ತು ಬಿಹಾರವನ್ನು ತೊರೆಯುವುದಿಲ್ಲ’ ಎಂದು ತಿಳಿಸಿದರು.</p><p>ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಗಳನ್ನು ಎನ್ಡಿಎ ಸರ್ಕಾರ ಪೂರ್ಣಗೊಳಿಸಿದರೆ ಮತ್ತು ರಾಜ್ಯದ 1.5 ಕೋಟಿ ಮಹಿಳೆಯರಿಗೆ ₹2 ಲಕ್ಷ ಆರ್ಥಿಕ ನೆರವು ನೀಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕಿಶೋರ್ ಹೇಳಿದರು.</p><p>ಚುನಾವಣೆಯಲ್ಲಿ ಜೆಡಿಯು 25ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಶಾಂತ್ಕಿಶೋರ್ ಅವರು ಚುನಾವಣೆಗೂ ಮುನ್ನ ಹೇಳಿದ್ದರು. </p>.Bihar Govt Formation: ನ.20ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸಾಧ್ಯತೆ.Bihar Election: ಒಂದಂಕಿ ಸ್ಥಾನ ಪಡೆದು ತತ್ತರಿಸಿದ ಕಾಂಗ್ರೆಸ್ ಭವಿಷ್ಯವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>