<blockquote>ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. ಜನರು, ಆಡಳಿತರೂಢ ಎನ್ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಅಧಿಕಾರ ನೀಡಿದ್ದಾರೆ. ಮತ ಎಣಿಕೆಯ ಪ್ರಮುಖ ಅಂಶಗಳು ಇಲ್ಲಿವೆ.</blockquote>.<ul><li><p>ಬಿಹಾರ ವಿಧಾಸನಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್ಡಿಎ ಮೈತ್ರಿಕೂಟ ಭಾರಿ ಗೆಲುವು ಸಾಧಿಸಿದೆ.</p></li><li><p>243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 202 ಸ್ಥಾನಗಳಲ್ಲಿ ಎನ್ಡಿಎ ಜಯಭೇರಿ ಬಾರಿಸಿದೆ.</p></li><li><p>ಬಿಹಾರ ವಿಧಾನಸಭೆಯ ಮ್ಯಾಜಿಕ್ ನಂಬರ್ 122.</p></li><li><p>101 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, 89ರಲ್ಲಿ ಜಯ ಸಾಧಿಸುವ ಮೂಲಕ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ </p></li><li><p>ದೆಹಲಿ, ಮಹಾರಾಷ್ಟ್ರ, ಹರಿಯಾಣದ ಬಳಿಕವೀಗ ಬಿಹಾರದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. </p></li><li><p>2020ರಲ್ಲಿ 43 ಸ್ಥಾನಗಳನ್ನು ಪಡೆದಿದ್ದ ಜೆಡಿಯು, ಈ ಬಾರಿ 85ರಲ್ಲಿ ಗೆದ್ದಿದೆ. </p></li><li><p>ಇದರೊಂದಿಗೆ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ನಾಯಕತ್ವಕ್ಕೆ ವ್ಯಾಪಕ ಮನ್ನಣೆ ಸಿಕ್ಕಂತಾಗಿದೆ. </p></li><li><p>ಮಹಾಘಟಬಂಧನ ಮೈತ್ರಿಯ ಪ್ರಮುಖ ಪಕ್ಷವಾಗಿರುವ ಆರ್ಜೆಡಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ 35 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿದೆ.</p></li><li><p>ಕಾಂಗ್ರೆಸ್ನ ತೀರಾ ಕಳಪೆ ಪ್ರದರ್ಶನ ತೋರಿದೆ. ಸ್ಪರ್ಧಿಸಿದ್ದ 61 ಸ್ಥಾನಗಳ ಪೈಕಿ ಆರರಲ್ಲಿ ಮಾತ್ರವೇ ಜಯ ಗಳಿಸಿದೆ.</p></li><li><p>ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) 29 ಕ್ಷೇತ್ರಗಳಲ್ಲಿ ಪೈಕಿ 19ರಲ್ಲಿ ಗೆದ್ದಿದೆ.</p></li><li><p>ಮತದಾನ ಪೂರ್ಣಗೊಂಡ ದಿನ ಸಂಜೆ ವಿವಿಧ ಸಮೀಕ್ಷಾ ತಂಡಗಳು ಪ್ರಕಟಿಸುವ ಚುನಾವಣೋತ್ತರ ಫಲಿತಾಂಶಗಳನ್ನೂ ಮೀರಿ ಬಿಹಾರ ಜನತೆ ಎನ್ಡಿಎ ಮೈತ್ರಿಕೂಟಕ್ಕೆ ಬಹುಮತ ನೀಡಿದ್ದಾರೆ.</p></li><li><p>ನ. 6 ಹಾಗೂ ನ. 11ರಂದು 243 ಕ್ಷೇತ್ರಗಳ ಬಿಹಾರದ ವಿಧಾನಸಭೆಗೆ ಚುನಾವಣೆ ನಡೆದಿತ್ತು. ನ. 11ರಂದು ಸಂಜೆಯಿಂದ ಸುಮಾರು 11 ಸಂಸ್ಥೆಗಳು ಮತಗಟ್ಟೆ ಸಮೀಕ್ಷೆಗಳನ್ನು ಪ್ರಕಟಿಸಿದ್ದವು. ಬಹುತೇಕ ಸಮೀಕ್ಷೆಗಳು ಎನ್ಡಿಎಗೆ ಸ್ಪಷ್ಟ ಬಹುಮತ ನೀಡಿದ್ದವು. 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಎನ್ಡಿಎ ಪಡೆಯಲಿದೆ ಎಂದೇ ಹೇಳಿದ್ದವು.</p></li><li><p>ಬಿಹಾರ ಚುನಾವಣೆಯಲ್ಲಿ ಮೋದಿ–ನಿತೀಶ್ ಜೋಡಿ ಮೋಡಿ ಮಾಡಿದೆ.</p></li><li><p>ನಿತೀಶ್ ಕುಮಾರ್ ಸರ್ಕಾರಕ್ಕೆ ಈ ಬಾರಿಯೂ ಜನರು ಒಲವು ತೋರಿದ್ದಾರೆ. ಎನ್ಡಿಎ ಗೆಲುವಿಗೆ ಕಾರಣವಾದ ಅಂಶಗಳು; ಉತ್ತಮ ಆಡಳಿತದ ಚಿತ್ರಣ, ಮಹಿಳೆಯರ ಪರವಾದ ಯೋಜನೆಗಳು, ರಾಜಕೀಯ ಮೈತ್ರಿಗಳ ನಿರ್ವಹಣೆ, ಜಾತಿ ಲೆಕ್ಕಚಾರ, ‘ಜಂಗಲ್ರಾಜ್’ ಬಗೆಗಿನ ನಿರೂಪಣೆ.</p></li><li><p>ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ದೊಡ್ಡ ಮಟ್ಟದ ಗೆಲುವಿನತ್ತ ಹೆಜ್ಜೆ ಇಟ್ಟಿದೆ. ವಿಶೇಷವೆಂದರೆ ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಯಾವುದೇ ಸಾವು ಸಂಭವಿಸಿಲ್ಲ ಮತ್ತು ಯಾವುದೇ ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶಿಸಿಲ್ಲ.</p></li><li><p>ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಆರ್ಜೆಡಿಯ ತೇಜಸ್ವಿ ಯಾದವ್ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ರಾಘೋಪುರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ತೇಜಸ್ವಿ, ಎದುರಾಳಿ ಬಿಜೆಪಿ ಅಭ್ಯರ್ಥಿ ಸತೀಶ್ ಕುಮಾರ್ ವಿರುದ್ಧ 14,532 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.</p></li><li><p>ಬಿಹಾರದ ಉಪಮುಖ್ಯಮಂತ್ರಿಯಾಗಿದ್ದ ಸಾಮ್ರಾಟ್ ಚೌದರಿ ತಾರಾಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಸಾಮ್ರಾಟ್ 45,843 ಮತಗಳ ಅಂತರದಿಂದ ಗೆದ್ದಿದ್ದಾರೆ.</p></li><li><p>ಬಿಹಾರದಲ್ಲಿ ಉತ್ತಮ ಆಡಳಿತದ ಗೆಲುವು, ಅಭಿವೃದ್ಧಿಯ ಗೆಲುವು, ಸಾರ್ವಜನಿಕ ಕಲ್ಯಾಣದ ಗೆಲುವು . ಸಾಮಾಜಿಕ ನ್ಯಾಯದ ಗೆಲುವು ಎಂದು ಪ್ರಧಾನಿ ನರೆಂದ್ರ ಮೋದಿ ಹೇಳಿದ್ದಾರೆ.</p></li><li><p>25 ವರ್ಷದ ಗಾಯಕಿ ಮೈಥಿಲಿ ಠಾಕೂರ್ 12 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲಿನಗರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.</p></li><li><p>ಡಬಲ್ ಎಂಜಿನ್ ಸರ್ಕಾರದತ್ತ ಜನರು ಮತ್ತೊಮ್ಮೆ ಒಲವು ತೋರಿದ್ದು, ಫಲಿತಾಂಶಗಳೇ ಸಾಕ್ಷಿಯಾಗಿದೆ.</p> </li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. ಜನರು, ಆಡಳಿತರೂಢ ಎನ್ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಅಧಿಕಾರ ನೀಡಿದ್ದಾರೆ. ಮತ ಎಣಿಕೆಯ ಪ್ರಮುಖ ಅಂಶಗಳು ಇಲ್ಲಿವೆ.</blockquote>.<ul><li><p>ಬಿಹಾರ ವಿಧಾಸನಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್ಡಿಎ ಮೈತ್ರಿಕೂಟ ಭಾರಿ ಗೆಲುವು ಸಾಧಿಸಿದೆ.</p></li><li><p>243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ 202 ಸ್ಥಾನಗಳಲ್ಲಿ ಎನ್ಡಿಎ ಜಯಭೇರಿ ಬಾರಿಸಿದೆ.</p></li><li><p>ಬಿಹಾರ ವಿಧಾನಸಭೆಯ ಮ್ಯಾಜಿಕ್ ನಂಬರ್ 122.</p></li><li><p>101 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, 89ರಲ್ಲಿ ಜಯ ಸಾಧಿಸುವ ಮೂಲಕ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ </p></li><li><p>ದೆಹಲಿ, ಮಹಾರಾಷ್ಟ್ರ, ಹರಿಯಾಣದ ಬಳಿಕವೀಗ ಬಿಹಾರದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. </p></li><li><p>2020ರಲ್ಲಿ 43 ಸ್ಥಾನಗಳನ್ನು ಪಡೆದಿದ್ದ ಜೆಡಿಯು, ಈ ಬಾರಿ 85ರಲ್ಲಿ ಗೆದ್ದಿದೆ. </p></li><li><p>ಇದರೊಂದಿಗೆ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ನಾಯಕತ್ವಕ್ಕೆ ವ್ಯಾಪಕ ಮನ್ನಣೆ ಸಿಕ್ಕಂತಾಗಿದೆ. </p></li><li><p>ಮಹಾಘಟಬಂಧನ ಮೈತ್ರಿಯ ಪ್ರಮುಖ ಪಕ್ಷವಾಗಿರುವ ಆರ್ಜೆಡಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ 35 ಸ್ಥಾನಗಳಲ್ಲಿ ಮಾತ್ರ ಗೆಲುವು ಕಂಡಿದೆ.</p></li><li><p>ಕಾಂಗ್ರೆಸ್ನ ತೀರಾ ಕಳಪೆ ಪ್ರದರ್ಶನ ತೋರಿದೆ. ಸ್ಪರ್ಧಿಸಿದ್ದ 61 ಸ್ಥಾನಗಳ ಪೈಕಿ ಆರರಲ್ಲಿ ಮಾತ್ರವೇ ಜಯ ಗಳಿಸಿದೆ.</p></li><li><p>ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) 29 ಕ್ಷೇತ್ರಗಳಲ್ಲಿ ಪೈಕಿ 19ರಲ್ಲಿ ಗೆದ್ದಿದೆ.</p></li><li><p>ಮತದಾನ ಪೂರ್ಣಗೊಂಡ ದಿನ ಸಂಜೆ ವಿವಿಧ ಸಮೀಕ್ಷಾ ತಂಡಗಳು ಪ್ರಕಟಿಸುವ ಚುನಾವಣೋತ್ತರ ಫಲಿತಾಂಶಗಳನ್ನೂ ಮೀರಿ ಬಿಹಾರ ಜನತೆ ಎನ್ಡಿಎ ಮೈತ್ರಿಕೂಟಕ್ಕೆ ಬಹುಮತ ನೀಡಿದ್ದಾರೆ.</p></li><li><p>ನ. 6 ಹಾಗೂ ನ. 11ರಂದು 243 ಕ್ಷೇತ್ರಗಳ ಬಿಹಾರದ ವಿಧಾನಸಭೆಗೆ ಚುನಾವಣೆ ನಡೆದಿತ್ತು. ನ. 11ರಂದು ಸಂಜೆಯಿಂದ ಸುಮಾರು 11 ಸಂಸ್ಥೆಗಳು ಮತಗಟ್ಟೆ ಸಮೀಕ್ಷೆಗಳನ್ನು ಪ್ರಕಟಿಸಿದ್ದವು. ಬಹುತೇಕ ಸಮೀಕ್ಷೆಗಳು ಎನ್ಡಿಎಗೆ ಸ್ಪಷ್ಟ ಬಹುಮತ ನೀಡಿದ್ದವು. 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಎನ್ಡಿಎ ಪಡೆಯಲಿದೆ ಎಂದೇ ಹೇಳಿದ್ದವು.</p></li><li><p>ಬಿಹಾರ ಚುನಾವಣೆಯಲ್ಲಿ ಮೋದಿ–ನಿತೀಶ್ ಜೋಡಿ ಮೋಡಿ ಮಾಡಿದೆ.</p></li><li><p>ನಿತೀಶ್ ಕುಮಾರ್ ಸರ್ಕಾರಕ್ಕೆ ಈ ಬಾರಿಯೂ ಜನರು ಒಲವು ತೋರಿದ್ದಾರೆ. ಎನ್ಡಿಎ ಗೆಲುವಿಗೆ ಕಾರಣವಾದ ಅಂಶಗಳು; ಉತ್ತಮ ಆಡಳಿತದ ಚಿತ್ರಣ, ಮಹಿಳೆಯರ ಪರವಾದ ಯೋಜನೆಗಳು, ರಾಜಕೀಯ ಮೈತ್ರಿಗಳ ನಿರ್ವಹಣೆ, ಜಾತಿ ಲೆಕ್ಕಚಾರ, ‘ಜಂಗಲ್ರಾಜ್’ ಬಗೆಗಿನ ನಿರೂಪಣೆ.</p></li><li><p>ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ದೊಡ್ಡ ಮಟ್ಟದ ಗೆಲುವಿನತ್ತ ಹೆಜ್ಜೆ ಇಟ್ಟಿದೆ. ವಿಶೇಷವೆಂದರೆ ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯ ಮತದಾನದ ದಿನದಂದು ಯಾವುದೇ ಸಾವು ಸಂಭವಿಸಿಲ್ಲ ಮತ್ತು ಯಾವುದೇ ಕ್ಷೇತ್ರದಲ್ಲಿ ಮರು ಮತದಾನಕ್ಕೆ ಆದೇಶಿಸಿಲ್ಲ.</p></li><li><p>ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಆರ್ಜೆಡಿಯ ತೇಜಸ್ವಿ ಯಾದವ್ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ರಾಘೋಪುರ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ತೇಜಸ್ವಿ, ಎದುರಾಳಿ ಬಿಜೆಪಿ ಅಭ್ಯರ್ಥಿ ಸತೀಶ್ ಕುಮಾರ್ ವಿರುದ್ಧ 14,532 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.</p></li><li><p>ಬಿಹಾರದ ಉಪಮುಖ್ಯಮಂತ್ರಿಯಾಗಿದ್ದ ಸಾಮ್ರಾಟ್ ಚೌದರಿ ತಾರಾಪುರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಸಾಮ್ರಾಟ್ 45,843 ಮತಗಳ ಅಂತರದಿಂದ ಗೆದ್ದಿದ್ದಾರೆ.</p></li><li><p>ಬಿಹಾರದಲ್ಲಿ ಉತ್ತಮ ಆಡಳಿತದ ಗೆಲುವು, ಅಭಿವೃದ್ಧಿಯ ಗೆಲುವು, ಸಾರ್ವಜನಿಕ ಕಲ್ಯಾಣದ ಗೆಲುವು . ಸಾಮಾಜಿಕ ನ್ಯಾಯದ ಗೆಲುವು ಎಂದು ಪ್ರಧಾನಿ ನರೆಂದ್ರ ಮೋದಿ ಹೇಳಿದ್ದಾರೆ.</p></li><li><p>25 ವರ್ಷದ ಗಾಯಕಿ ಮೈಥಿಲಿ ಠಾಕೂರ್ 12 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲಿನಗರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.</p></li><li><p>ಡಬಲ್ ಎಂಜಿನ್ ಸರ್ಕಾರದತ್ತ ಜನರು ಮತ್ತೊಮ್ಮೆ ಒಲವು ತೋರಿದ್ದು, ಫಲಿತಾಂಶಗಳೇ ಸಾಕ್ಷಿಯಾಗಿದೆ.</p> </li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>