<p><strong>ಪಟ್ನಾ</strong>: ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ನಾಳೆ (ಮಂಗಳವಾರ) ಎರಡನೇ ಹಂತದ ಮತದಾನ ನಡೆಯಲಿದೆ. ಈ ನಡುವೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದಾರೆ.</p><p>ಮೊದಲ ಹಂತದಲ್ಲಿ ಮತ ಚಲಾಯಿಸಿದ ಮತದಾರರ ಲಿಂಗಾಧಾರಿತ ಅಂಕಿ–ಅಂಶ ಈವರೆಗೂ ಬಿಡುಗಡೆ ಮಾಡಿಲ್ಲ ಎಂದು ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಮತದಾನ ನಡೆದು ನಾಲ್ಕು ದಿನ ಕಳೆದರೂ ಏಕೆ ಅಂಕಿ–ಅಂಶ ಬಿಡುಗಡೆ ಮಾಡಲಿಲ್ಲ. ಈ ರೀತಿ ಎಂದೂ ನಡೆದಿರಲಿಲ್ಲ. ಮತದಾನ ಬಳಿಕ ತಕ್ಷಣವೇ ಅಂಕಿ–ಅಂಶವನ್ನು ಪ್ರಕಟಿಸಲಾಗುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.</p>.ತಮಿಳು ನಟ ಅಭಿನಯ್ ಕಿಂಗರ್ ನಿಧನ.ಬಿಗ್ಬಾಸ್ನಲ್ಲಿ ರಕ್ಷಿತಾಳದ್ದು ಬರೀ ನಾಟಕ, ನಾನು ಕೂಡ ಮಂಗಳೂರಿನವನು: ಧ್ರುವಂತ್. <p>ಬಿಹಾರದ ನಿರುದ್ಯೋಗ ಮತ್ತು ವಲಸೆಯಂತಹ ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಂದೂ ಮಾತನಾಡಲಿಲ್ಲ. ಚುನಾವಣಾ ಪ್ರಚಾರದ ವೇಳೆ ಅಭಿವೃದ್ಧಿ ವಿಚಾರಗಳ ಹೊರತಾಗಿ ನಕಾರಾತ್ಮಕ ರಾಜಕೀಯದಲ್ಲಿ ತೊಡಗಿದ್ದರು ಎಂದು ತೇಜಸ್ವಿ ಟೀಕಿಸಿದ್ದಾರೆ.</p><p>ಈ ಬಾರಿ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದರೆ ಕೋಮು ಶಕ್ತಿಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತೇಜಸ್ವಿ ತಿಳಿಸಿದ್ದಾರೆ.</p><p>ಬಿಹಾರದ 121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಬಾಕಿ 122 ಸ್ಥಾನಗಳಿಗೆ ನವೆಂಬರ್ 11ರಂದು ಮತದಾನ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಹೊರಬೀಳಲಿದೆ</p>.ಜಮ್ಮು ಪೊಲೀಸರ ಕಾರ್ಯಾಚರಣೆ: ಇಬ್ಬರು ವೈದ್ಯರು ಸೇರಿ 7 ಮಂದಿ ಉಗ್ರರ ಬಂಧನ .ದೋಣಿಯಲ್ಲೇ ಚಹಾ ಅಂಗಡಿ ತೆರೆದ ವೃದ್ಧೆ; ನೆಟ್ಟಿಗರ ಮೆಚ್ಚುಗೆ.ಮಸ್ಕಿ: ಅವ್ಯವಹಾರ– ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಸದಸ್ಯತ್ವ ರದ್ದು.ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್ಗೆ ಗಂಭೀರ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ನಾಳೆ (ಮಂಗಳವಾರ) ಎರಡನೇ ಹಂತದ ಮತದಾನ ನಡೆಯಲಿದೆ. ಈ ನಡುವೆ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದಾರೆ.</p><p>ಮೊದಲ ಹಂತದಲ್ಲಿ ಮತ ಚಲಾಯಿಸಿದ ಮತದಾರರ ಲಿಂಗಾಧಾರಿತ ಅಂಕಿ–ಅಂಶ ಈವರೆಗೂ ಬಿಡುಗಡೆ ಮಾಡಿಲ್ಲ ಎಂದು ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಮತದಾನ ನಡೆದು ನಾಲ್ಕು ದಿನ ಕಳೆದರೂ ಏಕೆ ಅಂಕಿ–ಅಂಶ ಬಿಡುಗಡೆ ಮಾಡಲಿಲ್ಲ. ಈ ರೀತಿ ಎಂದೂ ನಡೆದಿರಲಿಲ್ಲ. ಮತದಾನ ಬಳಿಕ ತಕ್ಷಣವೇ ಅಂಕಿ–ಅಂಶವನ್ನು ಪ್ರಕಟಿಸಲಾಗುತ್ತಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.</p>.ತಮಿಳು ನಟ ಅಭಿನಯ್ ಕಿಂಗರ್ ನಿಧನ.ಬಿಗ್ಬಾಸ್ನಲ್ಲಿ ರಕ್ಷಿತಾಳದ್ದು ಬರೀ ನಾಟಕ, ನಾನು ಕೂಡ ಮಂಗಳೂರಿನವನು: ಧ್ರುವಂತ್. <p>ಬಿಹಾರದ ನಿರುದ್ಯೋಗ ಮತ್ತು ವಲಸೆಯಂತಹ ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಂದೂ ಮಾತನಾಡಲಿಲ್ಲ. ಚುನಾವಣಾ ಪ್ರಚಾರದ ವೇಳೆ ಅಭಿವೃದ್ಧಿ ವಿಚಾರಗಳ ಹೊರತಾಗಿ ನಕಾರಾತ್ಮಕ ರಾಜಕೀಯದಲ್ಲಿ ತೊಡಗಿದ್ದರು ಎಂದು ತೇಜಸ್ವಿ ಟೀಕಿಸಿದ್ದಾರೆ.</p><p>ಈ ಬಾರಿ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದರೆ ಕೋಮು ಶಕ್ತಿಗಳು ಮತ್ತು ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತೇಜಸ್ವಿ ತಿಳಿಸಿದ್ದಾರೆ.</p><p>ಬಿಹಾರದ 121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಬಾಕಿ 122 ಸ್ಥಾನಗಳಿಗೆ ನವೆಂಬರ್ 11ರಂದು ಮತದಾನ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಹೊರಬೀಳಲಿದೆ</p>.ಜಮ್ಮು ಪೊಲೀಸರ ಕಾರ್ಯಾಚರಣೆ: ಇಬ್ಬರು ವೈದ್ಯರು ಸೇರಿ 7 ಮಂದಿ ಉಗ್ರರ ಬಂಧನ .ದೋಣಿಯಲ್ಲೇ ಚಹಾ ಅಂಗಡಿ ತೆರೆದ ವೃದ್ಧೆ; ನೆಟ್ಟಿಗರ ಮೆಚ್ಚುಗೆ.ಮಸ್ಕಿ: ಅವ್ಯವಹಾರ– ತಲೇಖಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಸದಸ್ಯತ್ವ ರದ್ದು.ರಾಯಚೂರು ಬಳಿ ಕಾರು ಅಪಘಾತ: ಗಬ್ಬೂರು PSI ಅರುಣ್ಗೆ ಗಂಭೀರ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>