<p><strong>ಪಟ್ನಾ:</strong> 'ಬಿಹಾರದಲ್ಲಿ ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಖಾತ್ರಿಪಡಿಸುವ ಕಾಯ್ದೆ ಜಾರಿಗೆ ತರಲು ಬದ್ಧರಾಗಿದ್ದೇವೆ' ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಇಂದು (ಗುರುವಾರ) ಭರವಸೆ ನೀಡಿದ್ದಾರೆ. </p><p>ಬಿಹಾರ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ತೇಜಸ್ವಿ, 'ಬಿಹಾರದಲ್ಲಿ ತಮ್ಮ ಪಕ್ಷ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ದೊರಕುವ ಹಾಗೆ ಕಾನೂನು ತರಲಾಗುವುದು' ಎಂದು ವಾಗ್ದಾನ ನೀಡಿದ್ದಾರೆ. </p><p>'ಹೊಸ ಸರ್ಕಾರ ರಚನೆಯಾದ 20 ದಿನದೊಳಗೆ ಕಾಯ್ದೆ ಜಾರಿಗೆ ತರಲಾಗುವುದು' ಎಂದೂ ಅವರು ಹೇಳಿದ್ದಾರೆ. </p><p>'ಕಳೆದ 20 ವರ್ಷಗಳಲ್ಲಿ ಯುವಜನತೆಗೆ ಉದ್ಯೋಗ ನೀಡಲು ಎನ್ಡಿಎಗೆ ಸಾಧ್ಯವಾಗಲಿಲ್ಲ. ನಾವು ಅಧಿಕಾರಕ್ಕೆ ಬಂದ 20 ದಿನದೊಳಗೆ ಕಾಯ್ದೆ ರಚಿಸುತ್ತೇವೆ. 20 ತಿಂಗಳೊಳಗೆ ಅದನ್ನು ಅನುಷ್ಠಾನಗೊಳಿಸಲು ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ. </p><p>'ಕಳೆದ ಬಾರಿಯೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದೆ. ಅಲ್ಪಾವಧಿಯಲ್ಲಿ ಅಧಿಕಾರದಲ್ಲಿದ್ದಾಗ ಐದು ಲಕ್ಷ ಉದ್ಯೋಗಗಳನ್ನು ಒದಗಿಸಿದ್ದೆ. ನನಗೀಗ ಐದು ವರ್ಷಗಳ ಅವಧಿ ಸಿಕ್ಕಿದರೆ ಏನಾಗಬಹುದೆಂದು ನೀವೇ ಊಹಿಸಬಹುದು' ಎಂದಿದ್ದಾರೆ. </p>.ಬಿಹಾರ ಚುನಾವಣೆ | ಪ್ರಚಾರದ ವೇಳೆ ಎಐ ದುರ್ಬಳಕೆ ಬೇಡ: ಆಯೋಗ ಎಚ್ಚರಿಕೆ.ಬಿಹಾರ ಚುನಾವಣೆ: 51 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಪ್ರಶಾಂತ್ ಕಿಶೋರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 'ಬಿಹಾರದಲ್ಲಿ ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಖಾತ್ರಿಪಡಿಸುವ ಕಾಯ್ದೆ ಜಾರಿಗೆ ತರಲು ಬದ್ಧರಾಗಿದ್ದೇವೆ' ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಇಂದು (ಗುರುವಾರ) ಭರವಸೆ ನೀಡಿದ್ದಾರೆ. </p><p>ಬಿಹಾರ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ತೇಜಸ್ವಿ, 'ಬಿಹಾರದಲ್ಲಿ ತಮ್ಮ ಪಕ್ಷ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ದೊರಕುವ ಹಾಗೆ ಕಾನೂನು ತರಲಾಗುವುದು' ಎಂದು ವಾಗ್ದಾನ ನೀಡಿದ್ದಾರೆ. </p><p>'ಹೊಸ ಸರ್ಕಾರ ರಚನೆಯಾದ 20 ದಿನದೊಳಗೆ ಕಾಯ್ದೆ ಜಾರಿಗೆ ತರಲಾಗುವುದು' ಎಂದೂ ಅವರು ಹೇಳಿದ್ದಾರೆ. </p><p>'ಕಳೆದ 20 ವರ್ಷಗಳಲ್ಲಿ ಯುವಜನತೆಗೆ ಉದ್ಯೋಗ ನೀಡಲು ಎನ್ಡಿಎಗೆ ಸಾಧ್ಯವಾಗಲಿಲ್ಲ. ನಾವು ಅಧಿಕಾರಕ್ಕೆ ಬಂದ 20 ದಿನದೊಳಗೆ ಕಾಯ್ದೆ ರಚಿಸುತ್ತೇವೆ. 20 ತಿಂಗಳೊಳಗೆ ಅದನ್ನು ಅನುಷ್ಠಾನಗೊಳಿಸಲು ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ. </p><p>'ಕಳೆದ ಬಾರಿಯೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದ್ದೆ. ಅಲ್ಪಾವಧಿಯಲ್ಲಿ ಅಧಿಕಾರದಲ್ಲಿದ್ದಾಗ ಐದು ಲಕ್ಷ ಉದ್ಯೋಗಗಳನ್ನು ಒದಗಿಸಿದ್ದೆ. ನನಗೀಗ ಐದು ವರ್ಷಗಳ ಅವಧಿ ಸಿಕ್ಕಿದರೆ ಏನಾಗಬಹುದೆಂದು ನೀವೇ ಊಹಿಸಬಹುದು' ಎಂದಿದ್ದಾರೆ. </p>.ಬಿಹಾರ ಚುನಾವಣೆ | ಪ್ರಚಾರದ ವೇಳೆ ಎಐ ದುರ್ಬಳಕೆ ಬೇಡ: ಆಯೋಗ ಎಚ್ಚರಿಕೆ.ಬಿಹಾರ ಚುನಾವಣೆ: 51 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಪ್ರಶಾಂತ್ ಕಿಶೋರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>