<p><strong>ಪಟ್ನಾ:</strong> ಬಿಹಾರ ವಿಧಾನಸಭೆ ಚುನಾವಣೆಗೆ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು 25 ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಭಾನುವಾರ) ಬಿಡುಗಡೆಗೊಳಿಸಿದೆ. </p><p>ಇಬ್ಬರು ಮುಸ್ಲಿಮೇತರ ಅಭ್ಯರ್ಥಿಗಳಿಗೂ ಟಿಕೆಟ್ ನೀಡಲಾಗಿದೆ. </p><p>'ಇಂಡಿಯಾ' ಮೈತ್ರಿಕೂಟ ಕಡೆಗಣಿಸಿರುವ ಹಿನ್ನೆಲೆಯಲ್ಲಿ ಎಐಎಂಐಎಂ ಪಕ್ಷವು, ಒಟ್ಟು 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. </p><p>ಎಐಎಂಐಎಂ ರಾಜ್ಯ ಘಟಕದ ಅಧ್ಯಕ್ಷ ಹಾಗೂ ರಾಜ್ಯದಲ್ಲಿನ ಏಕಮಾತ್ರ ಶಾಸಕರಾಗಿರುವ ಅಖ್ತರುಲ್ ಇಮಾನ್, ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೊಳಿಸಿದ್ದಾರೆ. </p><p>ಹಾಲಿ ಶಾಸಕ ಇಮಾನ್, ಅಮೌರ್ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ. </p><p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 19 ಸ್ಥಾನಗಳಲ್ಲಿ ಸ್ಪರ್ಧಿಸಿ ಐದರಲ್ಲಿ ಗೆಲುವು ಸಾಧಿಸಿತ್ತು. ಆದರೆ ಬಳಿಕ ನಾಲ್ವರು ಶಾಸಕರು ಆರ್ಜೆಡಿಗೆ ಪಕ್ಷಾಂತರಗೊಂಡಿದ್ದರು. </p><p>ಈ ಬಾರಿ 'ಇಂಡಿಯಾ' ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ಉತ್ಸುಕತೆ ವ್ಯಕ್ತಪಡಿಸಿತ್ತು. ಈ ಸಂಬಂಧ ತೇಜಸ್ವಿ ಯಾದವ್ಗೆ ಪತ್ರ ಬರೆದಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. </p>.RSS ವಿಶ್ವದ ಅತಿದೊಡ್ಡ ಸಂಘಟನೆಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ:ರಾಜನಾಥ ಸಿಂಗ್.ಬಿಹಾರ ವಿಧಾನಸಭಾ ಚುನಾವಣೆ: ಎನ್ಡಿಎ ಅಭ್ಯರ್ಥಿ ನಾಮಪತ್ರ ತಿರಸ್ಕೃತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರ ವಿಧಾನಸಭೆ ಚುನಾವಣೆಗೆ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು 25 ಅಭ್ಯರ್ಥಿಗಳ ಪಟ್ಟಿಯನ್ನು ಇಂದು (ಭಾನುವಾರ) ಬಿಡುಗಡೆಗೊಳಿಸಿದೆ. </p><p>ಇಬ್ಬರು ಮುಸ್ಲಿಮೇತರ ಅಭ್ಯರ್ಥಿಗಳಿಗೂ ಟಿಕೆಟ್ ನೀಡಲಾಗಿದೆ. </p><p>'ಇಂಡಿಯಾ' ಮೈತ್ರಿಕೂಟ ಕಡೆಗಣಿಸಿರುವ ಹಿನ್ನೆಲೆಯಲ್ಲಿ ಎಐಎಂಐಎಂ ಪಕ್ಷವು, ಒಟ್ಟು 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. </p><p>ಎಐಎಂಐಎಂ ರಾಜ್ಯ ಘಟಕದ ಅಧ್ಯಕ್ಷ ಹಾಗೂ ರಾಜ್ಯದಲ್ಲಿನ ಏಕಮಾತ್ರ ಶಾಸಕರಾಗಿರುವ ಅಖ್ತರುಲ್ ಇಮಾನ್, ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೊಳಿಸಿದ್ದಾರೆ. </p><p>ಹಾಲಿ ಶಾಸಕ ಇಮಾನ್, ಅಮೌರ್ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ. </p><p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 19 ಸ್ಥಾನಗಳಲ್ಲಿ ಸ್ಪರ್ಧಿಸಿ ಐದರಲ್ಲಿ ಗೆಲುವು ಸಾಧಿಸಿತ್ತು. ಆದರೆ ಬಳಿಕ ನಾಲ್ವರು ಶಾಸಕರು ಆರ್ಜೆಡಿಗೆ ಪಕ್ಷಾಂತರಗೊಂಡಿದ್ದರು. </p><p>ಈ ಬಾರಿ 'ಇಂಡಿಯಾ' ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ಉತ್ಸುಕತೆ ವ್ಯಕ್ತಪಡಿಸಿತ್ತು. ಈ ಸಂಬಂಧ ತೇಜಸ್ವಿ ಯಾದವ್ಗೆ ಪತ್ರ ಬರೆದಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. </p>.RSS ವಿಶ್ವದ ಅತಿದೊಡ್ಡ ಸಂಘಟನೆಯಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ:ರಾಜನಾಥ ಸಿಂಗ್.ಬಿಹಾರ ವಿಧಾನಸಭಾ ಚುನಾವಣೆ: ಎನ್ಡಿಎ ಅಭ್ಯರ್ಥಿ ನಾಮಪತ್ರ ತಿರಸ್ಕೃತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>