<p><strong>ನವದೆಹಲಿ:</strong> ಬಿಹಾರದಲ್ಲಿ ಎನ್ಡಿಎ ಸರ್ಕಾರದ ಅಡಿಯಲ್ಲಿ ಮಹಿಳೆಯರ ಭದ್ರತೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. </p><p>ಅಲ್ಲದೆ ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಏಳಿಗೆಗಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ. </p><p>ನಾವು ಚುನಾವಣೆಯಲ್ಲಿ ಮತ ಗಳಿಸಲು ಭರವಸೆ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದೆ ಎಂದು ಅವರು ಹೇಳಿದ್ದಾರೆ. </p><p>ಬಿಹಾರದಲ್ಲಿ ಬಿಜೆಪಿ-ಜೆಡಿಯು 20 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಇಂದಿಗೂ ಮೋದಿಯ ಬಿಹಾರದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಖರ್ಗೆ ಪೋಸ್ಟ್ ಮಾಡಿದ್ದಾರೆ. </p><p>ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಶೇ 70ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಶೇ 40ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಎನ್ಎಫ್ಎಚ್ಎಸ್ ಅಂಕಿ ಉಲ್ಲೇಖಿಸಿ ಖರ್ಗೆ ಹೇಳಿದ್ದಾರೆ. </p>.ಯುವಜನರಿಗೆ ರೀಲ್ಸ್ ಚಟ ಪ್ರೋತ್ಸಾಹಿಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಟೀಕೆ.Bihar Election |NDA ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪನೆ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ಎನ್ಡಿಎ ಸರ್ಕಾರದ ಅಡಿಯಲ್ಲಿ ಮಹಿಳೆಯರ ಭದ್ರತೆಗೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. </p><p>ಅಲ್ಲದೆ ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ ಮೈತ್ರಿಯು ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣ ಹಾಗೂ ಆರ್ಥಿಕ ಏಳಿಗೆಗಾಗಿ ಸಂಪೂರ್ಣ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ. </p><p>ನಾವು ಚುನಾವಣೆಯಲ್ಲಿ ಮತ ಗಳಿಸಲು ಭರವಸೆ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿದೆ ಎಂದು ಅವರು ಹೇಳಿದ್ದಾರೆ. </p><p>ಬಿಹಾರದಲ್ಲಿ ಬಿಜೆಪಿ-ಜೆಡಿಯು 20 ವರ್ಷಗಳಿಂದ ಅಧಿಕಾರದಲ್ಲಿದೆ. ಆದರೆ ಇಂದಿಗೂ ಮೋದಿಯ ಬಿಹಾರದಲ್ಲಿ ಹೆಣ್ಣುಮಕ್ಕಳು ಸುರಕ್ಷಿತರಲ್ಲ ಎಂದು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಖರ್ಗೆ ಪೋಸ್ಟ್ ಮಾಡಿದ್ದಾರೆ. </p><p>ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಶೇ 70ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಶೇ 40ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಎನ್ಎಫ್ಎಚ್ಎಸ್ ಅಂಕಿ ಉಲ್ಲೇಖಿಸಿ ಖರ್ಗೆ ಹೇಳಿದ್ದಾರೆ. </p>.ಯುವಜನರಿಗೆ ರೀಲ್ಸ್ ಚಟ ಪ್ರೋತ್ಸಾಹಿಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಟೀಕೆ.Bihar Election |NDA ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪನೆ: ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>