<p><strong>ಪಟ್ನಾ:</strong> ವಿಧಾನಸಭೆ ಚುನಾವಣಾ ಹೊಸ್ತಿಲಲ್ಲಿರುವ ಬಿಹಾರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ತರಾಟೆಗೆ ತೆಗೆದುಕೊಂಡಿದ್ದಾರೆ. </p><p>ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೃತ್ಯ ಮಾಡುವ ಎಐ ವಿಡಿಯೊವನ್ನು ಹಂಚಿದ್ದಾರೆ. </p><p>'ಬಿಹಾರದ ಹಿತದೃಷ್ಟಿಯಿಂದ ಹವಾಮಾನ ಮುನ್ನಚ್ಚೆರಿಕೆ ಎಂದು ಹೇಳಿರುವ ಲಾಲು, ಇಂದು ಬಿಹಾರದಲ್ಲಿ ಸುಳ್ಳು ಭರವಸೆಗಳ ಮಳೆಯಾಗಲಿದೆ' ಎಂದು ವ್ಯಂಗ್ಯವಾಡಿದ್ದಾರೆ. </p><p>ಅಲ್ಲದೆ ಜನರು ಜಾಗರೂಕರಾಗಿರುವಂತೆ ಎಚ್ಚರಿಸಿದ್ದಾರೆ. </p><p>ವಿಡಿಯೊದ ಕೊನೆಯಲ್ಲಿ ಜನನಾಯಕನಾಗಿ ಪುತ್ರ ತೇಜಸ್ವಿ ಯಾದವ್ ಅವರನ್ನು ಬಿಂಬಿಸಲಾಗಿದೆ.</p><p>ಬಿಹಾರ ವಿಧಾನಸಭೆಗೆ ವರ್ಷಾಂತ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. </p>.ಇಂಗ್ಲಿಷ್ ಸಬಲೀಕರಣದ ಭಾಷೆ; ಅವಮಾನದ ಭಾಷೆಯಲ್ಲ: ರಾಹುಲ್ ಗಾಂಧಿ.ಇನ್ನಾದರೂ ಭದ್ರತೆಗೆ ಸಂಬಂಧಿಸಿ ಮುಕ್ತ ಚರ್ಚೆಗೆ PM ಒಪ್ಪುತ್ತಾರೆಯೇ?: ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ವಿಧಾನಸಭೆ ಚುನಾವಣಾ ಹೊಸ್ತಿಲಲ್ಲಿರುವ ಬಿಹಾರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾದಳ (ಆರ್ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ತರಾಟೆಗೆ ತೆಗೆದುಕೊಂಡಿದ್ದಾರೆ. </p><p>ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೃತ್ಯ ಮಾಡುವ ಎಐ ವಿಡಿಯೊವನ್ನು ಹಂಚಿದ್ದಾರೆ. </p><p>'ಬಿಹಾರದ ಹಿತದೃಷ್ಟಿಯಿಂದ ಹವಾಮಾನ ಮುನ್ನಚ್ಚೆರಿಕೆ ಎಂದು ಹೇಳಿರುವ ಲಾಲು, ಇಂದು ಬಿಹಾರದಲ್ಲಿ ಸುಳ್ಳು ಭರವಸೆಗಳ ಮಳೆಯಾಗಲಿದೆ' ಎಂದು ವ್ಯಂಗ್ಯವಾಡಿದ್ದಾರೆ. </p><p>ಅಲ್ಲದೆ ಜನರು ಜಾಗರೂಕರಾಗಿರುವಂತೆ ಎಚ್ಚರಿಸಿದ್ದಾರೆ. </p><p>ವಿಡಿಯೊದ ಕೊನೆಯಲ್ಲಿ ಜನನಾಯಕನಾಗಿ ಪುತ್ರ ತೇಜಸ್ವಿ ಯಾದವ್ ಅವರನ್ನು ಬಿಂಬಿಸಲಾಗಿದೆ.</p><p>ಬಿಹಾರ ವಿಧಾನಸಭೆಗೆ ವರ್ಷಾಂತ್ಯದಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. </p>.ಇಂಗ್ಲಿಷ್ ಸಬಲೀಕರಣದ ಭಾಷೆ; ಅವಮಾನದ ಭಾಷೆಯಲ್ಲ: ರಾಹುಲ್ ಗಾಂಧಿ.ಇನ್ನಾದರೂ ಭದ್ರತೆಗೆ ಸಂಬಂಧಿಸಿ ಮುಕ್ತ ಚರ್ಚೆಗೆ PM ಒಪ್ಪುತ್ತಾರೆಯೇ?: ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>