<p><strong>ಪಟ್ನಾ:</strong> ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರಿಗೆ ಹಣ ವರ್ಗಾವಣೆ ಮಾಡಿದ್ದರಿಂದ ಚುನಾವಣೆಯಲ್ಲಿ ಎನ್ಡಿಎ ಬಹುಮತ ಸಾಧಿಸಿದೆ ಎಂದು ಜನ ಸುರಾಜ್ ಪಕ್ಷ ಶನಿವಾರ ಆರೋಪಿಸಿದೆ.</p><p>ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ ಅಡಿ ತಲಾ ₹10 ಸಾವಿರ ಹಣವನ್ನು ಬಿಹಾರದ ಮಹಿಳೆಯರಿಗೆ ಬ್ಯಾಂಕ್ ಖಾತೆಗಳಿಗೆ ವರ್ಗಾಹಿಸಲಾಗಿತ್ತು. ಇದಕ್ಕಾಗಿ ₹40 ಸಾವಿರ ಕೋಟಿ ಹಣವನ್ನು ಬಿಡುಗಡೆಗೊಳಿಸಲಾಗಿತ್ತು. </p><p>ಮಹಿಳೆಯರ ಖಾತೆಗಳಿಗೆ ಹಣ ಹಾಕುವ ಮೂಲಕ ಚುನಾವಣೆಗಾಗಿ ಸರ್ಕಾರವು ಲಂಚ ನೀಡಿದೆ. ಈ ಮೂಲಕ ಮತದಾರರನ್ನು ಕೊಂಡುಕೊಳ್ಳಲಾಗಿದೆ. ಅಧಿಕಾರಕ್ಕೆ ಬಂದ ನಂತರ ಬಾಕಿ ಉಳಿದಿರುವ ₹2 ಲಕ್ಷ ಹಣವನ್ನು ಮಹಿಳೆಯ ಖಾತೆಗಳಿಗೆ ವರ್ಗಾಹಿಸಲಾಗುತ್ತದೆಯೇ ಎನ್ನುವುದನ್ನು ನೋಡಬೇಕಿದೆ ಎಂದು ಜನ ಸುರಾಜ್ ಪಕ್ಷದ ರಾಷ್ಟ್ರಾಧ್ಯಕ್ಷ ಉದಯ್ ಸಿಂಗ್ ಹೇಳಿದ್ದಾರೆ. </p><p>ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ನಮಗೆ ನಿರಾಸೆಯಾಗಿದೆ. ಆದರೆ, ನಾವು ಹತಾಶರಾಗಿಲ್ಲ. ನಾವು ಒಂದು ಕ್ಷೇತ್ರದಲ್ಲಿ ಕೂಡ ಗೆಲ್ಲಲು ವಿಫಲರಾಗಿರಬಹುದು, ಆದರೂ ಎನ್ಡಿಎ ಸರ್ಕಾರವನ್ನು ವಿರೋಧಿಸುವ ಕೆಲಸವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. </p><p>ಬಿಹಾರದಲ್ಲಿನ ಮುಸ್ಲಿಂ ಮತಗಳನ್ನು ಪಡೆಯುವಲ್ಲಿ ನಾವು ವಿಫಲರಾಗಿದ್ದೇವೆ. ಆರ್ಜೆಡಿ ಅನ್ನು ಕೂಡ ಜನರು ತಿರಸ್ಕರಿಸಿದ್ದಾರೆ. ಎನ್ಡಿಎ ಮೈತ್ರಿಕೂಟವು ಕೂಡ ಶೇ 50ರಷ್ಟು ಮತಗಳನ್ನು ಪಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. </p><p>ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷವು ಬಿಹಾರ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿದೆ. ರಾಜ್ಯದಲ್ಲಿನ ಪ್ರಮುಖ ಸಮಸ್ಯೆಗಳಾದ ನಿರುದ್ಯೋಗ, ವಲಸೆಯ ಕುರಿತು ಬಾರಿ ಪ್ರಚಾರ ಮಾಡಿದರು ಕೂಡ, ಮತ ಪಡೆಯುವಲ್ಲಿ ಜನ ಸುರಾಜ್ ಪಕ್ಷವು ವಿಫಲವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರಿಗೆ ಹಣ ವರ್ಗಾವಣೆ ಮಾಡಿದ್ದರಿಂದ ಚುನಾವಣೆಯಲ್ಲಿ ಎನ್ಡಿಎ ಬಹುಮತ ಸಾಧಿಸಿದೆ ಎಂದು ಜನ ಸುರಾಜ್ ಪಕ್ಷ ಶನಿವಾರ ಆರೋಪಿಸಿದೆ.</p><p>ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ ಅಡಿ ತಲಾ ₹10 ಸಾವಿರ ಹಣವನ್ನು ಬಿಹಾರದ ಮಹಿಳೆಯರಿಗೆ ಬ್ಯಾಂಕ್ ಖಾತೆಗಳಿಗೆ ವರ್ಗಾಹಿಸಲಾಗಿತ್ತು. ಇದಕ್ಕಾಗಿ ₹40 ಸಾವಿರ ಕೋಟಿ ಹಣವನ್ನು ಬಿಡುಗಡೆಗೊಳಿಸಲಾಗಿತ್ತು. </p><p>ಮಹಿಳೆಯರ ಖಾತೆಗಳಿಗೆ ಹಣ ಹಾಕುವ ಮೂಲಕ ಚುನಾವಣೆಗಾಗಿ ಸರ್ಕಾರವು ಲಂಚ ನೀಡಿದೆ. ಈ ಮೂಲಕ ಮತದಾರರನ್ನು ಕೊಂಡುಕೊಳ್ಳಲಾಗಿದೆ. ಅಧಿಕಾರಕ್ಕೆ ಬಂದ ನಂತರ ಬಾಕಿ ಉಳಿದಿರುವ ₹2 ಲಕ್ಷ ಹಣವನ್ನು ಮಹಿಳೆಯ ಖಾತೆಗಳಿಗೆ ವರ್ಗಾಹಿಸಲಾಗುತ್ತದೆಯೇ ಎನ್ನುವುದನ್ನು ನೋಡಬೇಕಿದೆ ಎಂದು ಜನ ಸುರಾಜ್ ಪಕ್ಷದ ರಾಷ್ಟ್ರಾಧ್ಯಕ್ಷ ಉದಯ್ ಸಿಂಗ್ ಹೇಳಿದ್ದಾರೆ. </p><p>ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ನಮಗೆ ನಿರಾಸೆಯಾಗಿದೆ. ಆದರೆ, ನಾವು ಹತಾಶರಾಗಿಲ್ಲ. ನಾವು ಒಂದು ಕ್ಷೇತ್ರದಲ್ಲಿ ಕೂಡ ಗೆಲ್ಲಲು ವಿಫಲರಾಗಿರಬಹುದು, ಆದರೂ ಎನ್ಡಿಎ ಸರ್ಕಾರವನ್ನು ವಿರೋಧಿಸುವ ಕೆಲಸವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. </p><p>ಬಿಹಾರದಲ್ಲಿನ ಮುಸ್ಲಿಂ ಮತಗಳನ್ನು ಪಡೆಯುವಲ್ಲಿ ನಾವು ವಿಫಲರಾಗಿದ್ದೇವೆ. ಆರ್ಜೆಡಿ ಅನ್ನು ಕೂಡ ಜನರು ತಿರಸ್ಕರಿಸಿದ್ದಾರೆ. ಎನ್ಡಿಎ ಮೈತ್ರಿಕೂಟವು ಕೂಡ ಶೇ 50ರಷ್ಟು ಮತಗಳನ್ನು ಪಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. </p><p>ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷವು ಬಿಹಾರ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿದೆ. ರಾಜ್ಯದಲ್ಲಿನ ಪ್ರಮುಖ ಸಮಸ್ಯೆಗಳಾದ ನಿರುದ್ಯೋಗ, ವಲಸೆಯ ಕುರಿತು ಬಾರಿ ಪ್ರಚಾರ ಮಾಡಿದರು ಕೂಡ, ಮತ ಪಡೆಯುವಲ್ಲಿ ಜನ ಸುರಾಜ್ ಪಕ್ಷವು ವಿಫಲವಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>