<p>ಪಟ್ನಾ: ಬಿಹಾರದ ವಿಧಾನಸಭೆ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಚುನಾವಣಾ ಕಾರ್ಯತಂತ್ರ ರೂಪಿಸಿದ್ದು ಇದರ ಭಾಗವಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಆಡಳಿತರೂಢ ಎನ್ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p><p>ಸರನ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದರೆ ಈ ಬಗ್ಗೆ ನಿತೀಶ್ ನೇತೃತ್ವದ ಸರ್ಕಾರ ಗಮನಹರಿಸುತ್ತಿಲ್ಲ, ಜನರ ಬಗ್ಗ ಕಾಳಜಿ ಹೊಂದಿಲ್ಲ ಎಂದು ಹೇಳಿದ್ದಾರೆ.</p>.BBK12: ಬಿಗ್ಬಾಸ್ ಮನೆಯಲ್ಲಿ ಜೋರಾಯ್ತು ಅಶ್ವಿನಿ–ಜಾಹ್ನವಿ ನಡುವೆ ಜಿದ್ದಾಜಿದ್ದಿ.ಹೊಸ ಲುಕ್ನಲ್ಲಿ ರಾಜ್ಯದ ಪಿಸಿ, ಎಚ್ಪಿಸಿಗಳು: ಬ್ಲೂ ಪೀಕ್ ಕ್ಯಾಪ್ ವಿತರಣೆ. <p>ಬಿಹಾರದ ಜನರು ನಿರುದ್ಯೋಗ ಮತ್ತು ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಮೊದಲ ಆದ್ಯತೆ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.</p><p>ಜನರ ಸಮಸ್ಯೆಗಳಿಗೆ ಮುಕ್ತಿ ದೊರೆಯಬೇಕೆಂದರೆ, ರಾಜ್ಯದಲ್ಲಿ ನಿರ್ಭೀತವಾದ ವಾತಾವರಣ ಸೃಷ್ಟಿಯಾಗಬೇಕೆಂದರೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕೆಂದು ತೇಜಸ್ವಿ ತಿಳಿಸಿದ್ದಾರೆ.</p><p>ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬಕ್ಕೂ ಒಂದು ಸರ್ಕಾರಿ ಉದ್ಯೋಗದ ಭರವಸೆಯನ್ನು ತೇಜಸ್ವಿ ಪುನರುಚ್ಚರಿಸಿದ್ದಾರೆ. </p>.ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡುತ್ತೇನೆ: ಟ್ರಂಪ್ಗೆ ಜಪಾನ್ PM ಭರವಸೆ.ಚಿತ್ತಾಪುರ RSS ಪಥಸಂಚಲನ ಕಗ್ಗಂಟು: ಜಿಲ್ಲಾಡಳಿತದ ಸಭೆಯಲ್ಲಿ ಮೂಡದ ಒಮ್ಮತ?. <p>ಸರನ್ ಜಿಲ್ಲೆಯಲ್ಲಿ ಪ್ರತಿನಿತ್ಯ ಕೊಲೆ, ದರೋಡೆ, ಅಪಹರಣ ಹಾಗೂ ಲೂಟಿ ನೋಡುತ್ತಿದ್ದೇವೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಎಂದಿಗೂ ಸಂತ್ರಸ್ತರ ಪರವಾಗಿ ಧ್ವನಿಗೂಡಿಸುವುದಿಲ್ಲ. ಅವರು ನ್ಯಾಯ ಒದಗಿಸಲು ಆಸಕ್ತಿ ತೋರುವುದಿಲ್ಲ ಎಂದು ತೇಜಸ್ವಿ ವಾಗ್ದಾಳಿ ನಡೆಸಿದ್ದಾರೆ.</p><p>243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಹೊರಬೀಳಲಿದೆ.</p> .ಕರ್ನೂಲ್ ಬಸ್ ದುರಂತದ ಬಳಿಕ ಮತ್ತೊಂದು ಅವಘಡ: ಹೊತ್ತಿ ಉರಿದ ಬಸ್, ಇಬ್ಬರು ಸಾವು.ಕಸಾಪಗೆ ಆಡಳಿತಾಧಿಕಾರಿ ನೇಮಕ | KM ಗಾಯತ್ರಿ ಅಧಿಕಾರ ಸ್ವೀಕಾರ: ಜೋಶಿಗೆ ಹಿನ್ನಡೆ.ಕಿಚ್ಚ ಸುದೀಪ್ ಕಡೆಯಿಂದ ಗಿಲ್ಲಿ ನಟಗೆ ವಿಶೇಷ ಉಡುಗೊರೆ: ಆ ಪೆಟ್ಟಿಗೆಯಲ್ಲಿ ಏನಿದೆ?.ಭಾರತದಲ್ಲಿ ChatGPT Go ಒಂದು ವರ್ಷ ಉಚಿತ ಎಂದ ಓಪನ್ಎಐ: ನ. 4ರಿಂದ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಟ್ನಾ: ಬಿಹಾರದ ವಿಧಾನಸಭೆ ಚುನಾವಣೆಗೆ ಇಂಡಿಯಾ ಮೈತ್ರಿಕೂಟ ಚುನಾವಣಾ ಕಾರ್ಯತಂತ್ರ ರೂಪಿಸಿದ್ದು ಇದರ ಭಾಗವಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಆಡಳಿತರೂಢ ಎನ್ಡಿಎ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p><p>ಸರನ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆದರೆ ಈ ಬಗ್ಗೆ ನಿತೀಶ್ ನೇತೃತ್ವದ ಸರ್ಕಾರ ಗಮನಹರಿಸುತ್ತಿಲ್ಲ, ಜನರ ಬಗ್ಗ ಕಾಳಜಿ ಹೊಂದಿಲ್ಲ ಎಂದು ಹೇಳಿದ್ದಾರೆ.</p>.BBK12: ಬಿಗ್ಬಾಸ್ ಮನೆಯಲ್ಲಿ ಜೋರಾಯ್ತು ಅಶ್ವಿನಿ–ಜಾಹ್ನವಿ ನಡುವೆ ಜಿದ್ದಾಜಿದ್ದಿ.ಹೊಸ ಲುಕ್ನಲ್ಲಿ ರಾಜ್ಯದ ಪಿಸಿ, ಎಚ್ಪಿಸಿಗಳು: ಬ್ಲೂ ಪೀಕ್ ಕ್ಯಾಪ್ ವಿತರಣೆ. <p>ಬಿಹಾರದ ಜನರು ನಿರುದ್ಯೋಗ ಮತ್ತು ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಮೊದಲ ಆದ್ಯತೆ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.</p><p>ಜನರ ಸಮಸ್ಯೆಗಳಿಗೆ ಮುಕ್ತಿ ದೊರೆಯಬೇಕೆಂದರೆ, ರಾಜ್ಯದಲ್ಲಿ ನಿರ್ಭೀತವಾದ ವಾತಾವರಣ ಸೃಷ್ಟಿಯಾಗಬೇಕೆಂದರೆ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕೆಂದು ತೇಜಸ್ವಿ ತಿಳಿಸಿದ್ದಾರೆ.</p><p>ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬಕ್ಕೂ ಒಂದು ಸರ್ಕಾರಿ ಉದ್ಯೋಗದ ಭರವಸೆಯನ್ನು ತೇಜಸ್ವಿ ಪುನರುಚ್ಚರಿಸಿದ್ದಾರೆ. </p>.ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡುತ್ತೇನೆ: ಟ್ರಂಪ್ಗೆ ಜಪಾನ್ PM ಭರವಸೆ.ಚಿತ್ತಾಪುರ RSS ಪಥಸಂಚಲನ ಕಗ್ಗಂಟು: ಜಿಲ್ಲಾಡಳಿತದ ಸಭೆಯಲ್ಲಿ ಮೂಡದ ಒಮ್ಮತ?. <p>ಸರನ್ ಜಿಲ್ಲೆಯಲ್ಲಿ ಪ್ರತಿನಿತ್ಯ ಕೊಲೆ, ದರೋಡೆ, ಅಪಹರಣ ಹಾಗೂ ಲೂಟಿ ನೋಡುತ್ತಿದ್ದೇವೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ಎಂದಿಗೂ ಸಂತ್ರಸ್ತರ ಪರವಾಗಿ ಧ್ವನಿಗೂಡಿಸುವುದಿಲ್ಲ. ಅವರು ನ್ಯಾಯ ಒದಗಿಸಲು ಆಸಕ್ತಿ ತೋರುವುದಿಲ್ಲ ಎಂದು ತೇಜಸ್ವಿ ವಾಗ್ದಾಳಿ ನಡೆಸಿದ್ದಾರೆ.</p><p>243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಹೊರಬೀಳಲಿದೆ.</p> .ಕರ್ನೂಲ್ ಬಸ್ ದುರಂತದ ಬಳಿಕ ಮತ್ತೊಂದು ಅವಘಡ: ಹೊತ್ತಿ ಉರಿದ ಬಸ್, ಇಬ್ಬರು ಸಾವು.ಕಸಾಪಗೆ ಆಡಳಿತಾಧಿಕಾರಿ ನೇಮಕ | KM ಗಾಯತ್ರಿ ಅಧಿಕಾರ ಸ್ವೀಕಾರ: ಜೋಶಿಗೆ ಹಿನ್ನಡೆ.ಕಿಚ್ಚ ಸುದೀಪ್ ಕಡೆಯಿಂದ ಗಿಲ್ಲಿ ನಟಗೆ ವಿಶೇಷ ಉಡುಗೊರೆ: ಆ ಪೆಟ್ಟಿಗೆಯಲ್ಲಿ ಏನಿದೆ?.ಭಾರತದಲ್ಲಿ ChatGPT Go ಒಂದು ವರ್ಷ ಉಚಿತ ಎಂದ ಓಪನ್ಎಐ: ನ. 4ರಿಂದ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>