<p><strong>ಪಟ್ನಾ:</strong> ‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ. </p><p>ಮಹಿಳಾ ಸಬಲೀಕರಣ ಹಾಗೂ ಸ್ವ–ಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ಯನ್ನು ಜಾರಿಗೊಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ನಲ್ಲಿ ಯೋಜನೆಗೆ ಚಾಲನೆ ನೀಡಿದ್ದರು. </p><p>ಇದುವರೆಗೂ ರಾಜ್ಯದ 1.81 ಕೋಟಿ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಅವರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಲಾಗಿದೆ. ಇದಕ್ಕಾಗಿ ₹2500 ಕೋಟಿ ವೆಚ್ಚಮಾಡಲಾಗಿದೆ. ಇದನ್ನು ಸದ್ಭಳಕೆ ಮಾಡಿಕೊಂಡ ಮಹಿಳಾ ಉದ್ಯಮಿಗಳಿಗೆ, ಅವರ ಉದ್ಯಮವನ್ನು ವಿಸ್ತರಿಸಲು ₹2 ಲಕ್ಷ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ಅಡಿಯಲ್ಲಿ ಉದ್ಯಮಗಳನ್ನು ಸ್ಥಾಪಿಸಿರುವ ಮಹಿಳೆಯರಿಗೆ ₹2 ಲಕ್ಷದವರೆಗೆ ಹಣಕಾಸು ನೆರವು ಒದಗಿಸುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ ಅಡಿಯಲ್ಲಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವು ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ₹10 ಸಾವಿರ ಜಮೆ ಮಾಡಲಾಗಿದೆ. </p><p>ಮಹಿಳಾ ಸಬಲೀಕರಣ ಹಾಗೂ ಸ್ವ–ಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ಯನ್ನು ಜಾರಿಗೊಳಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ನಲ್ಲಿ ಯೋಜನೆಗೆ ಚಾಲನೆ ನೀಡಿದ್ದರು. </p><p>ಇದುವರೆಗೂ ರಾಜ್ಯದ 1.81 ಕೋಟಿ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಅವರ ಖಾತೆಗೆ ತಲಾ ₹10 ಸಾವಿರ ಜಮೆ ಮಾಡಲಾಗಿದೆ. ಇದಕ್ಕಾಗಿ ₹2500 ಕೋಟಿ ವೆಚ್ಚಮಾಡಲಾಗಿದೆ. ಇದನ್ನು ಸದ್ಭಳಕೆ ಮಾಡಿಕೊಂಡ ಮಹಿಳಾ ಉದ್ಯಮಿಗಳಿಗೆ, ಅವರ ಉದ್ಯಮವನ್ನು ವಿಸ್ತರಿಸಲು ₹2 ಲಕ್ಷ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>‘ಮುಖ್ಯಮಂತ್ರಿ ಮಹಿಳಾ ರೋಜ್ಗಾರ್ ಯೋಜನೆ’ಅಡಿಯಲ್ಲಿ ಉದ್ಯಮಗಳನ್ನು ಸ್ಥಾಪಿಸಿರುವ ಮಹಿಳೆಯರಿಗೆ ₹2 ಲಕ್ಷದವರೆಗೆ ಹಣಕಾಸು ನೆರವು ಒದಗಿಸುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>