<p class="title"><strong>ಮೋತಿಹಾರಿ/ ಪಟ್ನಾ (ಪಿಟಿಐ)</strong>: ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೋತಿಹಾರಿಯ ವಿವಿಧೆಡೆ ಶೋಧಕಾರ್ಯ ನಡೆಸಿ 20 ಮಂದಿಯನ್ನು ಬಂಧಿಸಿ, ಅಪಾರ ಪ್ರಮಾಣದ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p class="title">‘ಇನ್ನೂ ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">‘85.5 ಲೀಟರ್ ಕಳ್ಳಬಟ್ಟಿ ಮತ್ತು ಅಪಾರ ಪ್ರಮಾಣದ ಭಾರತದಲ್ಲಿ ತಯಾರಿಸಲಾದ ವಿದೇಶಿ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೂರ್ವ ಚಂಪಾರಣ್ ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ.</p>.<p>‘ತುರ್ಕೌಲಿಯಾ, ಹರ್ಸಿದ್ಧಿ, ಸುಗೌಲಿ ಮತ್ತು ಪಹಾರ್ಪುರ್ದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಕೆಲವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೂಡಲೇ ನಗರದ ವಿವಿಧ ಆಸ್ಪತ್ರೆಗಳಿಗೆ ಪೊಲೀಸರ ತಂಡವನ್ನು ಕಳುಹಿಸಲಾಗಿದೆ’ ಎಂದು ತಿಳಿಸಿದೆ.</p>.<p>ಪ್ರಕರಣ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳೂ ತನಿಖೆ ಕೈಗೊಂಡಿದ್ದಾರೆ.</p>.<p>‘ಕಾನೂನು ಉಲ್ಲಂಘಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ 2016ರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮೋತಿಹಾರಿ/ ಪಟ್ನಾ (ಪಿಟಿಐ)</strong>: ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೋತಿಹಾರಿಯ ವಿವಿಧೆಡೆ ಶೋಧಕಾರ್ಯ ನಡೆಸಿ 20 ಮಂದಿಯನ್ನು ಬಂಧಿಸಿ, ಅಪಾರ ಪ್ರಮಾಣದ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p class="title">‘ಇನ್ನೂ ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">‘85.5 ಲೀಟರ್ ಕಳ್ಳಬಟ್ಟಿ ಮತ್ತು ಅಪಾರ ಪ್ರಮಾಣದ ಭಾರತದಲ್ಲಿ ತಯಾರಿಸಲಾದ ವಿದೇಶಿ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೂರ್ವ ಚಂಪಾರಣ್ ಜಿಲ್ಲಾಡಳಿತ ಹೇಳಿಕೆಯಲ್ಲಿ ತಿಳಿಸಿದೆ.</p>.<p>‘ತುರ್ಕೌಲಿಯಾ, ಹರ್ಸಿದ್ಧಿ, ಸುಗೌಲಿ ಮತ್ತು ಪಹಾರ್ಪುರ್ದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಕೆಲವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೂಡಲೇ ನಗರದ ವಿವಿಧ ಆಸ್ಪತ್ರೆಗಳಿಗೆ ಪೊಲೀಸರ ತಂಡವನ್ನು ಕಳುಹಿಸಲಾಗಿದೆ’ ಎಂದು ತಿಳಿಸಿದೆ.</p>.<p>ಪ್ರಕರಣ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಅಧಿಕಾರಿಗಳೂ ತನಿಖೆ ಕೈಗೊಂಡಿದ್ದಾರೆ.</p>.<p>‘ಕಾನೂನು ಉಲ್ಲಂಘಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.</p>.<p>ರಾಜ್ಯದಲ್ಲಿ 2016ರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>