<p><strong>ಪಾಟ್ನಾ:</strong> ಆಲಿಕಲ್ಲು ಮಳೆ, ಮಿಂಚು, ಸಿಡಿಲಿನ ಆಘಾತದಿಂದ ಬಿಹಾರದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೇರಿಕೆಯಾಗಿದೆ. </p>.<p>ಗುರುವಾರ ರಾಜ್ಯದ ವಿವಿಧೆಡೆ ಸುರಿದ ಆಲಿಕಲ್ಲು ಮಳೆಯಿಂದ 39 ಮಂದಿ ಮೃತಪಟ್ಟಿದ್ದು, ಮಿಂಚು, ಸಿಡಿಲಿನ ಹೊಡೆತಕ್ಕೆ 22 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಗುರುವಾರ ರಾತ್ರಿ ವೇಳೆ 25 ಮಂದಿ ಮೃತಪಟ್ಟಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳ ಅಂಕಿಅಂಶಗಳನ್ನು ಕ್ರೋಢಿಕರಿಸಿದ ವೇಳೆ ಮೃತರ ಸಂಖ್ಯೆ 61 ಕ್ಕೇರಿಕೆಯಾಗಿದೆ. ನಲಂದಾ ಜಿಲ್ಲೆಯೊಂದರಲ್ಲೇ ಗರಿಷ್ಠ 23 ಮಂದಿ ಮೃತಪಟ್ಟಿದ್ದಾರೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯು ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಸಿಡಿಲು ಹಾಗೂ ಬಿರುಗಾಳಿಯಿಂದ ದೊಡ್ಡ ಸಂಖ್ಯೆಯಲ್ಲಿ ಮನೆಗಳು ಹಾನಿಗೊಳಗಾಗಿದೆ. </p>.<p>ಪ್ರಾಕೃತಿಕ ದುರಂತದಲ್ಲಿ ಮೃತಪಟ್ಟವರಿಗೆ ಕಂಬನಿ ಮಿಡಿದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಮೃತ ಕುಟುಂಬದ ಸದಸ್ಯರಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. </p>.<p>ಮಿಂಚು, ಸಿಡಿಲಿನ ಹೊಡೆತಕ್ಕೆ ಬಿಹಾರದಲ್ಲಿ ಬುಧವಾರ 13 ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಟ್ನಾ:</strong> ಆಲಿಕಲ್ಲು ಮಳೆ, ಮಿಂಚು, ಸಿಡಿಲಿನ ಆಘಾತದಿಂದ ಬಿಹಾರದಲ್ಲಿ ಮೃತಪಟ್ಟವರ ಸಂಖ್ಯೆ 61ಕ್ಕೇರಿಕೆಯಾಗಿದೆ. </p>.<p>ಗುರುವಾರ ರಾಜ್ಯದ ವಿವಿಧೆಡೆ ಸುರಿದ ಆಲಿಕಲ್ಲು ಮಳೆಯಿಂದ 39 ಮಂದಿ ಮೃತಪಟ್ಟಿದ್ದು, ಮಿಂಚು, ಸಿಡಿಲಿನ ಹೊಡೆತಕ್ಕೆ 22 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಗುರುವಾರ ರಾತ್ರಿ ವೇಳೆ 25 ಮಂದಿ ಮೃತಪಟ್ಟಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳ ಅಂಕಿಅಂಶಗಳನ್ನು ಕ್ರೋಢಿಕರಿಸಿದ ವೇಳೆ ಮೃತರ ಸಂಖ್ಯೆ 61 ಕ್ಕೇರಿಕೆಯಾಗಿದೆ. ನಲಂದಾ ಜಿಲ್ಲೆಯೊಂದರಲ್ಲೇ ಗರಿಷ್ಠ 23 ಮಂದಿ ಮೃತಪಟ್ಟಿದ್ದಾರೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯು ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಸಿಡಿಲು ಹಾಗೂ ಬಿರುಗಾಳಿಯಿಂದ ದೊಡ್ಡ ಸಂಖ್ಯೆಯಲ್ಲಿ ಮನೆಗಳು ಹಾನಿಗೊಳಗಾಗಿದೆ. </p>.<p>ಪ್ರಾಕೃತಿಕ ದುರಂತದಲ್ಲಿ ಮೃತಪಟ್ಟವರಿಗೆ ಕಂಬನಿ ಮಿಡಿದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಮೃತ ಕುಟುಂಬದ ಸದಸ್ಯರಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ. </p>.<p>ಮಿಂಚು, ಸಿಡಿಲಿನ ಹೊಡೆತಕ್ಕೆ ಬಿಹಾರದಲ್ಲಿ ಬುಧವಾರ 13 ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>