<p><strong>ಪಟ್ನಾ:</strong> 'ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆಯಾಗಲಿದ್ದು, ಜನರಿಗೆ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು' ಎಂದು ಕಾಂಗ್ರೆಸ್ ಹೇಳಿದೆ. </p><p>ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಒಂದು ದಿನ ಮುನ್ನ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ಬಿಹಾರವನ್ನು 20 ವರ್ಷಗಳ ದುರಾಡಳಿತದಿಂದ ಮುಕ್ತಗೊಳಿಸಲಾಗುವುದು' ಎಂದು ಹೇಳಿದ್ದಾರೆ. </p><p>'ಇನ್ನು ಮುಂದೆ ವಲಸೆ ಹೋಗುವುದು ನಿಲ್ಲುತ್ತದೆ. ಯುವಜನರ ಭವಿಷ್ಯದಿಂದ ಕತ್ತಲೆ ಮಾಯವಾಗುತ್ತದೆ. ಪ್ರತಿ ಮನೆಯೂ ಉಜ್ವಲ ನಾಳೆಯನ್ನು ಹೊಂದಿರುತ್ತದೆ. ಅನ್ಯಾಯ ಕೊನೆಗೊಳ್ಳುತ್ತದೆ. ಬಿಹಾರದಲ್ಲಿ ಸಾಮಾಜಿಕ ನ್ಯಾಯ ನೆಲೆಗೊಳ್ಳಲಿದೆ' ಎಂದು ಹೇಳಿದ್ದಾರೆ. </p><p>'ರಾಜ್ಯದಲ್ಲಿ ದಲಿತರು, ಬುಡಕಟ್ಟು ಜನಾಂಗ, ಹಿಂದುಳಿದವರು, ಆರ್ಥಿಕವಾಗಿ ದುರ್ಬಲ ವರ್ಗ, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಯುವಜನರು ಸೇರಿದಂತೆ ಸಮಾಜದ ಪ್ರತಿಯೊಂದು ವಿಭಾಗದವರು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ' ಎಂದು ಹೇಳಿದ್ದಾರೆ. </p><p>'ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸಲಿದ್ದೇವೆ. ಮಹಾಘಟಬಂಧನ ಸರ್ಕಾರ ರಚನೆಯಾದ ಕೂಡಲೇ ಭರವಸೆಗಳನ್ನು ಜಾರಿಗೆ ತರಲಾಗುವುದು' ಎಂದು ಭರವಸೆ ನೀಡಿದ್ದಾರೆ. </p><p>ಕಾಂಗ್ರೆಸ್ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಸಹ ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆ ಖಚಿತ ಎಂದು ಹೇಳಿದ್ದಾರೆ. ಬಿಹಾರದ ಪ್ರತಿ ಮನೆಗೆ ಉದ್ಯೋಗ ಸೇರಿದಂತೆ ಪ್ರಣಾಳಿಕೆಯ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. </p><p>ಬಿಹಾರದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ (ನ.11) ನಡೆಯಲಿದ್ದು, ನ. 14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. </p>.ಬಿಹಾರ: ಕೊನೇ ಹಂತದ ಪ್ರಚಾರ ಅಂತ್ಯ; 122 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮತದಾನ.ಬಿಹಾರ ಚುನಾವಣೆ | ಮೊದಲ ಹಂತದಲ್ಲಿ ಶೇ 65.08 ಮತದಾನ: ಚುನಾವಣಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 'ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆಯಾಗಲಿದ್ದು, ಜನರಿಗೆ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು' ಎಂದು ಕಾಂಗ್ರೆಸ್ ಹೇಳಿದೆ. </p><p>ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಒಂದು ದಿನ ಮುನ್ನ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ಬಿಹಾರವನ್ನು 20 ವರ್ಷಗಳ ದುರಾಡಳಿತದಿಂದ ಮುಕ್ತಗೊಳಿಸಲಾಗುವುದು' ಎಂದು ಹೇಳಿದ್ದಾರೆ. </p><p>'ಇನ್ನು ಮುಂದೆ ವಲಸೆ ಹೋಗುವುದು ನಿಲ್ಲುತ್ತದೆ. ಯುವಜನರ ಭವಿಷ್ಯದಿಂದ ಕತ್ತಲೆ ಮಾಯವಾಗುತ್ತದೆ. ಪ್ರತಿ ಮನೆಯೂ ಉಜ್ವಲ ನಾಳೆಯನ್ನು ಹೊಂದಿರುತ್ತದೆ. ಅನ್ಯಾಯ ಕೊನೆಗೊಳ್ಳುತ್ತದೆ. ಬಿಹಾರದಲ್ಲಿ ಸಾಮಾಜಿಕ ನ್ಯಾಯ ನೆಲೆಗೊಳ್ಳಲಿದೆ' ಎಂದು ಹೇಳಿದ್ದಾರೆ. </p><p>'ರಾಜ್ಯದಲ್ಲಿ ದಲಿತರು, ಬುಡಕಟ್ಟು ಜನಾಂಗ, ಹಿಂದುಳಿದವರು, ಆರ್ಥಿಕವಾಗಿ ದುರ್ಬಲ ವರ್ಗ, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಯುವಜನರು ಸೇರಿದಂತೆ ಸಮಾಜದ ಪ್ರತಿಯೊಂದು ವಿಭಾಗದವರು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ' ಎಂದು ಹೇಳಿದ್ದಾರೆ. </p><p>'ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸಲಿದ್ದೇವೆ. ಮಹಾಘಟಬಂಧನ ಸರ್ಕಾರ ರಚನೆಯಾದ ಕೂಡಲೇ ಭರವಸೆಗಳನ್ನು ಜಾರಿಗೆ ತರಲಾಗುವುದು' ಎಂದು ಭರವಸೆ ನೀಡಿದ್ದಾರೆ. </p><p>ಕಾಂಗ್ರೆಸ್ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಸಹ ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆ ಖಚಿತ ಎಂದು ಹೇಳಿದ್ದಾರೆ. ಬಿಹಾರದ ಪ್ರತಿ ಮನೆಗೆ ಉದ್ಯೋಗ ಸೇರಿದಂತೆ ಪ್ರಣಾಳಿಕೆಯ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. </p><p>ಬಿಹಾರದಲ್ಲಿ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ (ನ.11) ನಡೆಯಲಿದ್ದು, ನ. 14ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. </p>.ಬಿಹಾರ: ಕೊನೇ ಹಂತದ ಪ್ರಚಾರ ಅಂತ್ಯ; 122 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮತದಾನ.ಬಿಹಾರ ಚುನಾವಣೆ | ಮೊದಲ ಹಂತದಲ್ಲಿ ಶೇ 65.08 ಮತದಾನ: ಚುನಾವಣಾ ಆಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>