<p><strong>ಪಟ್ನಾ:</strong> ಪೂರ್ವಭಾವಿ ಪರೀಕ್ಷೆಯ ನಿಯಮಗಳಿಗೆ ತಂದಿರುವ ಬದಲಾವಣೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಟ್ನಾದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್ಸಿ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಗುಂಪನ್ನು ಚದುರಿಸಲು ಪೊಲೀಸರು ಶುಕ್ರವಾರ ಲಾಠಿ ಪ್ರಹಾರ ನಡೆಸಿದರು. </p>.<p>‘ಕಚೇರಿಗೆ ಮುತ್ತಿಗೆ ಹಾಕಲು ಬಿಪಿಎಸ್ಸಿ ಆಕಾಂಕ್ಷಿಗಳ ದೊಡ್ಡ ಗುಂಪು ನಗರದ ಬೈಲಿ ರಸ್ತೆಯಲ್ಲಿ ಸೇರಿದೆ’ ಎಂದು ಎಸ್ಎಸ್ಪಿ ರಾಜೀವ್ ಮಿಶ್ರಾ ತಿಳಿಸಿದರು.</p>.<p>‘ಬಿಪಿಎಸ್ಸಿ ಕಚೇರಿಯತ್ತ ಮುನ್ನುಗ್ಗುವುದನ್ನು ಪೊಲೀಸರು ತಡೆದಾಗ, ಪ್ರತಿಭಟನೆಯಲ್ಲಿ ನಿರತರಾದವರು ರಸ್ತೆಯಲ್ಲೇ ಕುಳಿತರು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸ್ಥಳದಿಂದ ತೆರಳುವಂತೆ ಪೊಲೀಸರು ಪದೇ ಪದೇ ಮನವಿ ಮಾಡಿದರೂ, ಅಲ್ಲಿಂದ ಕದಲಲಿಲ್ಲ. ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲಾಯಿತು’ ಎಂದರು.</p>.<p>ಲಾಠಿ ಪ್ರಹಾರದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಆದರೆ, ಮಿಶ್ರಾ ಅವರು ಆರೋಪವನ್ನು ತಳ್ಳಿಹಾಕಿದ್ದಾರೆ.</p>.<p>ಪೂರ್ವಭಾವಿ ಪರೀಕ್ಷೆಯ ನಿಯಮಗಳಿಗೆ ಯಾವುದೇ ಬದಲಾವಣೆ ತಂದಿಲ್ಲ ಎಂದು ಬಿಪಿಎಸ್ಸಿ ಸ್ಪಷ್ಟಪಡಿಸಿದೆ. 70ನೇ ಬಿಪಿಎಸ್ಸಿ ಕಂಬೈನ್ಡ್ (ಪೂರ್ವಭಾವಿ) ಪರೀಕ್ಷೆ ಡಿಸೆಂಬರ್ 13ರಂದು ನಡೆಯಲಿದೆ. ರಾಜ್ಯದಾದ್ಯಂತ 925 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು ಐದು ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಪೂರ್ವಭಾವಿ ಪರೀಕ್ಷೆಯ ನಿಯಮಗಳಿಗೆ ತಂದಿರುವ ಬದಲಾವಣೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಟ್ನಾದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್ಸಿ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಗುಂಪನ್ನು ಚದುರಿಸಲು ಪೊಲೀಸರು ಶುಕ್ರವಾರ ಲಾಠಿ ಪ್ರಹಾರ ನಡೆಸಿದರು. </p>.<p>‘ಕಚೇರಿಗೆ ಮುತ್ತಿಗೆ ಹಾಕಲು ಬಿಪಿಎಸ್ಸಿ ಆಕಾಂಕ್ಷಿಗಳ ದೊಡ್ಡ ಗುಂಪು ನಗರದ ಬೈಲಿ ರಸ್ತೆಯಲ್ಲಿ ಸೇರಿದೆ’ ಎಂದು ಎಸ್ಎಸ್ಪಿ ರಾಜೀವ್ ಮಿಶ್ರಾ ತಿಳಿಸಿದರು.</p>.<p>‘ಬಿಪಿಎಸ್ಸಿ ಕಚೇರಿಯತ್ತ ಮುನ್ನುಗ್ಗುವುದನ್ನು ಪೊಲೀಸರು ತಡೆದಾಗ, ಪ್ರತಿಭಟನೆಯಲ್ಲಿ ನಿರತರಾದವರು ರಸ್ತೆಯಲ್ಲೇ ಕುಳಿತರು. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸ್ಥಳದಿಂದ ತೆರಳುವಂತೆ ಪೊಲೀಸರು ಪದೇ ಪದೇ ಮನವಿ ಮಾಡಿದರೂ, ಅಲ್ಲಿಂದ ಕದಲಲಿಲ್ಲ. ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲಾಯಿತು’ ಎಂದರು.</p>.<p>ಲಾಠಿ ಪ್ರಹಾರದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಆದರೆ, ಮಿಶ್ರಾ ಅವರು ಆರೋಪವನ್ನು ತಳ್ಳಿಹಾಕಿದ್ದಾರೆ.</p>.<p>ಪೂರ್ವಭಾವಿ ಪರೀಕ್ಷೆಯ ನಿಯಮಗಳಿಗೆ ಯಾವುದೇ ಬದಲಾವಣೆ ತಂದಿಲ್ಲ ಎಂದು ಬಿಪಿಎಸ್ಸಿ ಸ್ಪಷ್ಟಪಡಿಸಿದೆ. 70ನೇ ಬಿಪಿಎಸ್ಸಿ ಕಂಬೈನ್ಡ್ (ಪೂರ್ವಭಾವಿ) ಪರೀಕ್ಷೆ ಡಿಸೆಂಬರ್ 13ರಂದು ನಡೆಯಲಿದೆ. ರಾಜ್ಯದಾದ್ಯಂತ 925 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು ಐದು ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>