<p><strong>ಪಟ್ನಾ</strong>: ಬಿಹಾರ ವಿಧಾನಸಭಾ ಚುನಾವಣೆಗೆ ಆಡಾಳಿತಾರೂಢ ಎನ್ಡಿಎ ಸೀಟು ಹಂಚಿಕೆ ಪ್ರಕಟಿಸಿದ್ದು, ಮೈತ್ರಿಕೂಟದಲ್ಲಿನ ಸಣ್ಣ ಮಿತ್ರಪಕ್ಷಗಳು ಅಪಸ್ವರ ತೆಗೆದಿವೆ.</p>.<p>‘ಮೈತ್ರಿಕೂಟದ ನಿರ್ಧಾರವನ್ನು ಒಪ್ಪಿಕೊಂಡಿದ್ದೇವೆ. ಆದರೆ ನಮಗೆ ಕೇವಲ ಆರು ಸ್ಥಾನ ನೀಡುವ ಮೂಲಕ ನಮ್ಮ ಸಾಮರ್ಥ್ಯವನ್ನು ಪರಿಗಣಿಸಿಲ್ಲ. ಇದು ಚುನಾವಣೆಯಲ್ಲಿ ಮುಳುವಾಗಬಹುದು’ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಹೇಳಿದ್ದಾರೆ.</p>.<p>‘ನಾನು ನಿಮ್ಮ ಕ್ಷಮೆ ಕೋರುವೆ. ನಮಗೆ ಸಿಕ್ಕಿರುವ ಕ್ಷೇತ್ರಗಳ ಸಂಖ್ಯೆ ನಿರೀಕ್ಷೆಯಂತಿಲ್ಲ. ಈ ನಿರ್ಧಾರವು ನಮ್ಮ ಪಕ್ಷದಿಂದ ಅಭ್ಯರ್ಥಿಗಳಾಗಲು ಬಯಸಿದ್ದವರಿಗೆ ನೋವುಂಟು ಮಾಡಿದೆ ಎಂಬುದನ್ನು ನಾನು ಅರ್ಥಮಾಡಿಕೊಂಡಿರುವೆ’ ಎಂದು ರಾಷ್ಟ್ರೀಯ ಲೋಕ ಮೋರ್ಚಾ ಪಕ್ಷದ ವರಿಷ್ಠ ಉಪೇಂದ್ರ ಕುಶ್ವಾಹ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.Bihar Polls 2025 | ಎನ್ಡಿಎ ಸೀಟು ಹಂಚಿಕೆ ಅಂತಿಮ: ಬಿಜೆಪಿ–ಜೆಡಿಯು ಸಮ–ಸಮ!.<p>‘ಪಕ್ಷದ ಮಿತಿಯನ್ನು ನೀವೆಲ್ಲರೂ ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸಿರುವೆ. ಈ ನಿರ್ಧಾರ ಎಷ್ಟು ಸೂಕ್ತ ಅಥವಾ ಸೂಕ್ತವಲ್ಲ ಎಂಬುದನ್ನು ನೀವೇ ಅರಿತುಕೊಳ್ಳುತ್ತೀರಿ. ಉಳಿದದ್ದನ್ನು ಸಮಯವೇ ನಿರ್ಧರಿಸಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರ ವಿಧಾನಸಭಾ ಚುನಾವಣೆಗೆ ಆಡಾಳಿತಾರೂಢ ಎನ್ಡಿಎ ಸೀಟು ಹಂಚಿಕೆ ಪ್ರಕಟಿಸಿದ್ದು, ಮೈತ್ರಿಕೂಟದಲ್ಲಿನ ಸಣ್ಣ ಮಿತ್ರಪಕ್ಷಗಳು ಅಪಸ್ವರ ತೆಗೆದಿವೆ.</p>.<p>‘ಮೈತ್ರಿಕೂಟದ ನಿರ್ಧಾರವನ್ನು ಒಪ್ಪಿಕೊಂಡಿದ್ದೇವೆ. ಆದರೆ ನಮಗೆ ಕೇವಲ ಆರು ಸ್ಥಾನ ನೀಡುವ ಮೂಲಕ ನಮ್ಮ ಸಾಮರ್ಥ್ಯವನ್ನು ಪರಿಗಣಿಸಿಲ್ಲ. ಇದು ಚುನಾವಣೆಯಲ್ಲಿ ಮುಳುವಾಗಬಹುದು’ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಹೇಳಿದ್ದಾರೆ.</p>.<p>‘ನಾನು ನಿಮ್ಮ ಕ್ಷಮೆ ಕೋರುವೆ. ನಮಗೆ ಸಿಕ್ಕಿರುವ ಕ್ಷೇತ್ರಗಳ ಸಂಖ್ಯೆ ನಿರೀಕ್ಷೆಯಂತಿಲ್ಲ. ಈ ನಿರ್ಧಾರವು ನಮ್ಮ ಪಕ್ಷದಿಂದ ಅಭ್ಯರ್ಥಿಗಳಾಗಲು ಬಯಸಿದ್ದವರಿಗೆ ನೋವುಂಟು ಮಾಡಿದೆ ಎಂಬುದನ್ನು ನಾನು ಅರ್ಥಮಾಡಿಕೊಂಡಿರುವೆ’ ಎಂದು ರಾಷ್ಟ್ರೀಯ ಲೋಕ ಮೋರ್ಚಾ ಪಕ್ಷದ ವರಿಷ್ಠ ಉಪೇಂದ್ರ ಕುಶ್ವಾಹ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.</p>.Bihar Polls 2025 | ಎನ್ಡಿಎ ಸೀಟು ಹಂಚಿಕೆ ಅಂತಿಮ: ಬಿಜೆಪಿ–ಜೆಡಿಯು ಸಮ–ಸಮ!.<p>‘ಪಕ್ಷದ ಮಿತಿಯನ್ನು ನೀವೆಲ್ಲರೂ ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸಿರುವೆ. ಈ ನಿರ್ಧಾರ ಎಷ್ಟು ಸೂಕ್ತ ಅಥವಾ ಸೂಕ್ತವಲ್ಲ ಎಂಬುದನ್ನು ನೀವೇ ಅರಿತುಕೊಳ್ಳುತ್ತೀರಿ. ಉಳಿದದ್ದನ್ನು ಸಮಯವೇ ನಿರ್ಧರಿಸಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>