<p><strong>ಶಿವಹರ್:</strong> 'ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪಿಸಲಿದ್ದೇವೆ. ಪ್ರತಿ ಜಿಲ್ಲೆಗಳಲ್ಲಿಯೂ ಕಾರ್ಖಾನೆಗಳನ್ನು ತೆರೆಯಲಾಗುವುದು' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಸೋಮವಾರ) ಭರವಸೆ ನೀಡಿದ್ದಾರೆ. </p><p>ಶಿವಹರ್ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಬಿಹಾರದಲ್ಲಿ ಎನ್ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಆರ್ಜೆಡಿ-ಕಾಂಗ್ರೆಸ್ ಮೈತ್ರಿಯು ನಿರ್ನಾಮವಾಗಲಿದೆ' ಎಂದು ಹೇಳಿದ್ದಾರೆ. </p><p>'ಬಿಹಾರ ರಾಜ್ಯವನ್ನು ಪ್ರವಾಹ ಮುಕ್ತಗೊಳಿಸಲು ಆಯೋಗವನ್ನು ರಚಿಸಲಾಗುವುದು' ಎಂದೂ ಅಮಿತ್ ಶಾ ಭರವಸೆ ನೀಡಿದ್ದಾರೆ. </p><p>'ನಾವು ರಕ್ಷಣಾ ಕಾರಿಡಾರ್ ಮಂಜೂರು ಮಾಡಲಿದ್ದೇವೆ. ಪ್ರತಿ ಜಿಲ್ಲೆಗಳಲ್ಲೂ ಕಾರ್ಖಾನೆಗಳನ್ನು ತೆರೆಯಲಾಗುವುದು. ಇದರ ಜೊತೆಗೆ ಎಂಎಸ್ಎಂಇ ಹಾಗೂ ಕೈಗಾರಿಕಾ ಪಾರ್ಕ್ ತೆರೆಯಲಾಗುವುದು' ಎಂದಿದ್ದಾರೆ. </p><p>'ಸೀತಾ ದೇಗುಲದ ಪ್ರತಿಷ್ಠಾಪನಾ ದಿನದಂದು ಸೀತಾಮರ್ಹಿಯಿಂದ ಅಯೋಧ್ಯೆಗೆ ವಂದೇ ಭಾರತ್ ರೈಲು ಸಂಚಾರವನ್ನು ಆರಂಭಿಸಲಿದ್ದೇವೆ' ಎಂದು ಅವರು ಹೇಳಿದ್ದಾರೆ. </p><p>ಪುನೌರಾ ಧಾಮದಲ್ಲಿ ₹850 ಕೋಟಿ ವೆಚ್ಚದಲ್ಲಿ ಸೀತಾ ದೇಗುಲಕ್ಕೆ ಶಿಲಾನ್ಯಾಸ ನೇರವೇರಿಸಿರುವುದಾಗಿ ಶಾ ತಿಳಿಸಿದ್ದಾರೆ. </p><p>'₹5000 ಕೋಟಿ ವೆಚ್ಚದಲ್ಲಿ ಅಯೋಧ್ಯೆ-ಸೀತಾಮರ್ಹಿ ರೈಲು ಹಳಿಯನ್ನು ದ್ವಿಗುಣಗೊಳಿಸುವುದು' ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ. </p><p>'ರಾಜ್ಯದಲ್ಲಿ ವಿಮಾನ ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು. ಬಿಹಾರದ ಪ್ರತಿ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ತೆರೆಯಲಾಗುವುದು' ಎಂದು ಹೇಳಿದ್ದಾರೆ.</p><p>'ಬಿಹಾರಕ್ಕೆ ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ₹18.70 ಲಕ್ಷ ಕೋಟಿ ಮಂಜೂರು ಮಾಡಿದ್ದಾರೆ. ಆರ್ಜೆಡಿ-ಕಾಂಗ್ರೆಸ್ ಆಡಳಿತದಲ್ಲಿ ₹2.80 ಲಕ್ಷ ಕೋಟಿ ಮಾತ್ರ ನೀಡಲಾಗಿತ್ತು. ಲಾಲೂ ಪ್ರಸಾದ್ ಅವರ ಆಡಳಿತವು ಹಗರಣಗಳಿಂದ ಕೂಡಿತ್ತು. ನಿತೀಶ್ ಕುಮಾರ್ ಹಾಗೂ ಪ್ರಧಾನಿ ಮೋದಿ ಅವರಿಂದ ಮಾತ್ರ ಅಭಿವೃದ್ಧಿಯತ್ತ ಮುನ್ನಡೆಸಲು ಸಾಧ್ಯ' ಎಂದು ಹೇಳಿದ್ದಾರೆ. </p>.ಪ್ರಧಾನಿ ಮೋದಿ 'ಅವಮಾನ ಸಚಿವಾಲಯ' ತೆರೆಯಬೇಕು: ಪ್ರಿಯಾಂಕಾ ವ್ಯಂಗ್ಯ.Bihar Polls | ಮಹಿಳೆಯರಿಗೆ ಹಣ ವರ್ಗಾವಣೆ: ಬಿಹಾರ ಸರ್ಕಾರದ ವಿರುದ್ಧ RJD ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಹರ್:</strong> 'ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪಿಸಲಿದ್ದೇವೆ. ಪ್ರತಿ ಜಿಲ್ಲೆಗಳಲ್ಲಿಯೂ ಕಾರ್ಖಾನೆಗಳನ್ನು ತೆರೆಯಲಾಗುವುದು' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಸೋಮವಾರ) ಭರವಸೆ ನೀಡಿದ್ದಾರೆ. </p><p>ಶಿವಹರ್ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಬಿಹಾರದಲ್ಲಿ ಎನ್ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಆರ್ಜೆಡಿ-ಕಾಂಗ್ರೆಸ್ ಮೈತ್ರಿಯು ನಿರ್ನಾಮವಾಗಲಿದೆ' ಎಂದು ಹೇಳಿದ್ದಾರೆ. </p><p>'ಬಿಹಾರ ರಾಜ್ಯವನ್ನು ಪ್ರವಾಹ ಮುಕ್ತಗೊಳಿಸಲು ಆಯೋಗವನ್ನು ರಚಿಸಲಾಗುವುದು' ಎಂದೂ ಅಮಿತ್ ಶಾ ಭರವಸೆ ನೀಡಿದ್ದಾರೆ. </p><p>'ನಾವು ರಕ್ಷಣಾ ಕಾರಿಡಾರ್ ಮಂಜೂರು ಮಾಡಲಿದ್ದೇವೆ. ಪ್ರತಿ ಜಿಲ್ಲೆಗಳಲ್ಲೂ ಕಾರ್ಖಾನೆಗಳನ್ನು ತೆರೆಯಲಾಗುವುದು. ಇದರ ಜೊತೆಗೆ ಎಂಎಸ್ಎಂಇ ಹಾಗೂ ಕೈಗಾರಿಕಾ ಪಾರ್ಕ್ ತೆರೆಯಲಾಗುವುದು' ಎಂದಿದ್ದಾರೆ. </p><p>'ಸೀತಾ ದೇಗುಲದ ಪ್ರತಿಷ್ಠಾಪನಾ ದಿನದಂದು ಸೀತಾಮರ್ಹಿಯಿಂದ ಅಯೋಧ್ಯೆಗೆ ವಂದೇ ಭಾರತ್ ರೈಲು ಸಂಚಾರವನ್ನು ಆರಂಭಿಸಲಿದ್ದೇವೆ' ಎಂದು ಅವರು ಹೇಳಿದ್ದಾರೆ. </p><p>ಪುನೌರಾ ಧಾಮದಲ್ಲಿ ₹850 ಕೋಟಿ ವೆಚ್ಚದಲ್ಲಿ ಸೀತಾ ದೇಗುಲಕ್ಕೆ ಶಿಲಾನ್ಯಾಸ ನೇರವೇರಿಸಿರುವುದಾಗಿ ಶಾ ತಿಳಿಸಿದ್ದಾರೆ. </p><p>'₹5000 ಕೋಟಿ ವೆಚ್ಚದಲ್ಲಿ ಅಯೋಧ್ಯೆ-ಸೀತಾಮರ್ಹಿ ರೈಲು ಹಳಿಯನ್ನು ದ್ವಿಗುಣಗೊಳಿಸುವುದು' ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ. </p><p>'ರಾಜ್ಯದಲ್ಲಿ ವಿಮಾನ ನಿಲ್ದಾಣಗಳನ್ನು ವಿಶ್ವದರ್ಜೆಗೆ ಏರಿಸಲಾಗುವುದು. ಬಿಹಾರದ ಪ್ರತಿ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ತೆರೆಯಲಾಗುವುದು' ಎಂದು ಹೇಳಿದ್ದಾರೆ.</p><p>'ಬಿಹಾರಕ್ಕೆ ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ₹18.70 ಲಕ್ಷ ಕೋಟಿ ಮಂಜೂರು ಮಾಡಿದ್ದಾರೆ. ಆರ್ಜೆಡಿ-ಕಾಂಗ್ರೆಸ್ ಆಡಳಿತದಲ್ಲಿ ₹2.80 ಲಕ್ಷ ಕೋಟಿ ಮಾತ್ರ ನೀಡಲಾಗಿತ್ತು. ಲಾಲೂ ಪ್ರಸಾದ್ ಅವರ ಆಡಳಿತವು ಹಗರಣಗಳಿಂದ ಕೂಡಿತ್ತು. ನಿತೀಶ್ ಕುಮಾರ್ ಹಾಗೂ ಪ್ರಧಾನಿ ಮೋದಿ ಅವರಿಂದ ಮಾತ್ರ ಅಭಿವೃದ್ಧಿಯತ್ತ ಮುನ್ನಡೆಸಲು ಸಾಧ್ಯ' ಎಂದು ಹೇಳಿದ್ದಾರೆ. </p>.ಪ್ರಧಾನಿ ಮೋದಿ 'ಅವಮಾನ ಸಚಿವಾಲಯ' ತೆರೆಯಬೇಕು: ಪ್ರಿಯಾಂಕಾ ವ್ಯಂಗ್ಯ.Bihar Polls | ಮಹಿಳೆಯರಿಗೆ ಹಣ ವರ್ಗಾವಣೆ: ಬಿಹಾರ ಸರ್ಕಾರದ ವಿರುದ್ಧ RJD ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>