<p><strong>ಪಟ್ನಾ:</strong> ಬಿಹಾರದ ಎನ್ಡಿಎ ಸರ್ಕಾರವು ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಮೇಲೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮಂಗಳವಾರ ಪ್ರತಿಪಾದಿಸಿದ್ದಾರೆ.</p><p>ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿರುವ ಅವರು, ‘ಜನ್ ಧನ್ ಯೋಜನೆ’ ಮೂಲಕ ಬಿಹಾರದ 3 ಕೋಟಿಗೂ ಹೆಚ್ಚು ಮಹಿಳೆಯರಿಗೆ ನೆರವು ಸಿಕ್ಕಿದೆ. ಜತೆಗೆ 1.16 ಕೋಟಿ ಮಹಿಳೆಯರು ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಪ್ರತಿ ಮನೆಗೆ ಶೌಚಾಲಯ ನಿರ್ಮಿಸುವ ಭರವಸೆಯನ್ನು ಈಡೇರಿಸಿದ್ದೇವೆ ಎಂದರು.</p><p>‘ಒಂದು ಕಡೆ ಎನ್ಡಿಎ ಸರ್ಕಾರ ಬಿಹಾರದ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸುತ್ತಿದ್ದರೆ, ಮತ್ತೊಂದೆಡೆ, ಆರ್ಜೆಡಿ ನಾಯಕರು ಸವಲತ್ತುಗಳನ್ನು ಸ್ಥಗಿತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಲಿಖಿತ ಪ್ರಸ್ತಾವನೆಯನ್ನು ನೀಡಿದ್ದಾರೆ. ಆರ್ಜೆಡಿಯ ಈ ನಡೆ ನೋವುಂಟು ಮಾಡಿದೆ’ ಎಂದು ವಿಷಾದಿಸಿದರು.</p><p>ಮಹಿಳಾ ರೋಜ್ಗಾರ್ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಹಣವನ್ನು ವರ್ಗಾಯಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಆರ್ಜೆಡಿ ಸಂಸದ ಮನೋಜ್ ಝಾ ಅವರು ಅ.31ರಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.</p>.ಬಿಹಾರ ಚುನಾವಣೆ: ಗೆಲುವಿಗೆ ಎನ್ಡಿಎ–ಮಹಾಮೈತ್ರಿ ಏದುಸಿರು .INDIA ಅಧಿಕಾರಕ್ಕೆ ಬಂದರೆ ಭತ್ತಕ್ಕೆ ₹300, ಗೋಧಿಗೆ ₹400 ಬೋನಸ್: ಆರ್ಜೆಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದ ಎನ್ಡಿಎ ಸರ್ಕಾರವು ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಮೇಲೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮಂಗಳವಾರ ಪ್ರತಿಪಾದಿಸಿದ್ದಾರೆ.</p><p>ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿರುವ ಅವರು, ‘ಜನ್ ಧನ್ ಯೋಜನೆ’ ಮೂಲಕ ಬಿಹಾರದ 3 ಕೋಟಿಗೂ ಹೆಚ್ಚು ಮಹಿಳೆಯರಿಗೆ ನೆರವು ಸಿಕ್ಕಿದೆ. ಜತೆಗೆ 1.16 ಕೋಟಿ ಮಹಿಳೆಯರು ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಪ್ರತಿ ಮನೆಗೆ ಶೌಚಾಲಯ ನಿರ್ಮಿಸುವ ಭರವಸೆಯನ್ನು ಈಡೇರಿಸಿದ್ದೇವೆ ಎಂದರು.</p><p>‘ಒಂದು ಕಡೆ ಎನ್ಡಿಎ ಸರ್ಕಾರ ಬಿಹಾರದ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾಯಿಸುತ್ತಿದ್ದರೆ, ಮತ್ತೊಂದೆಡೆ, ಆರ್ಜೆಡಿ ನಾಯಕರು ಸವಲತ್ತುಗಳನ್ನು ಸ್ಥಗಿತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಲಿಖಿತ ಪ್ರಸ್ತಾವನೆಯನ್ನು ನೀಡಿದ್ದಾರೆ. ಆರ್ಜೆಡಿಯ ಈ ನಡೆ ನೋವುಂಟು ಮಾಡಿದೆ’ ಎಂದು ವಿಷಾದಿಸಿದರು.</p><p>ಮಹಿಳಾ ರೋಜ್ಗಾರ್ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಹಣವನ್ನು ವರ್ಗಾಯಿಸುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಆರ್ಜೆಡಿ ಸಂಸದ ಮನೋಜ್ ಝಾ ಅವರು ಅ.31ರಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.</p>.ಬಿಹಾರ ಚುನಾವಣೆ: ಗೆಲುವಿಗೆ ಎನ್ಡಿಎ–ಮಹಾಮೈತ್ರಿ ಏದುಸಿರು .INDIA ಅಧಿಕಾರಕ್ಕೆ ಬಂದರೆ ಭತ್ತಕ್ಕೆ ₹300, ಗೋಧಿಗೆ ₹400 ಬೋನಸ್: ಆರ್ಜೆಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>