<p><strong>ಲಖಿಸರಾಯ್</strong>: ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಬುಧವಾರ ನಸುಕಿನ ವೇಳೆ ಟ್ರಕ್ ಮತ್ತು ಟೆಂಪೊ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಲಖಿಸರಾಯ್-ಸಿಕಂದ್ರ ಮುಖ್ಯರಸ್ತೆಯ ಬಿಹರೌರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಟೆಂಪೊವಿನಲ್ಲಿ 15 ಜನರು ಪ್ರಯಾಣ ಮಾಡುತ್ತಿದ್ದರು ಎಂದು ಅವರು ತಿಳಿಸಿದರು.</p><p>‘ಲಖಿಸರಾಯ್-ಸಿಕಂದ್ರ ಮುಖ್ಯರಸ್ತೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.</p><p>‘ಮೃತರನ್ನು ವೀರ್ ಪಾಸ್ವಾನ್, ವಿಕಾಸ್ ಕುಮಾರ್, ವಿಜಯ್ ಕುಮಾರ್, ದಿಬಾನಾ ಪಾಸ್ವಾನ್, ಅಮಿತ್ ಕುಮಾರ್, ಮೋನು ಕುಮಾರ್, ಕಿಸಾನ್ ಕುಮಾರ್ ಮತ್ತು ಮನೋಜ್ ಗೋಸ್ವಾಮಿ ಎಂದು ಗುರುತಿಸಲಾಗಿದೆ’ ಎಂದರು.</p><p>‘ಮದುವೆ ಮುಗಿಸಿಕೊಂಡು ಟೆಂಪೊವಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖಿಸರಾಯ್</strong>: ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಬುಧವಾರ ನಸುಕಿನ ವೇಳೆ ಟ್ರಕ್ ಮತ್ತು ಟೆಂಪೊ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಲಖಿಸರಾಯ್-ಸಿಕಂದ್ರ ಮುಖ್ಯರಸ್ತೆಯ ಬಿಹರೌರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಟೆಂಪೊವಿನಲ್ಲಿ 15 ಜನರು ಪ್ರಯಾಣ ಮಾಡುತ್ತಿದ್ದರು ಎಂದು ಅವರು ತಿಳಿಸಿದರು.</p><p>‘ಲಖಿಸರಾಯ್-ಸಿಕಂದ್ರ ಮುಖ್ಯರಸ್ತೆಯಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.</p><p>‘ಮೃತರನ್ನು ವೀರ್ ಪಾಸ್ವಾನ್, ವಿಕಾಸ್ ಕುಮಾರ್, ವಿಜಯ್ ಕುಮಾರ್, ದಿಬಾನಾ ಪಾಸ್ವಾನ್, ಅಮಿತ್ ಕುಮಾರ್, ಮೋನು ಕುಮಾರ್, ಕಿಸಾನ್ ಕುಮಾರ್ ಮತ್ತು ಮನೋಜ್ ಗೋಸ್ವಾಮಿ ಎಂದು ಗುರುತಿಸಲಾಗಿದೆ’ ಎಂದರು.</p><p>‘ಮದುವೆ ಮುಗಿಸಿಕೊಂಡು ಟೆಂಪೊವಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>