<p><strong>ಪಟ್ನಾ</strong>: ಬಿಹಾರದ ಪಕ್ಷೇತರ ಸಂಸದ ಪಪ್ಪು ಯಾದವ್ (ರಾಜೇಶ್ ರಂಜನ್) ಅವರ ಬಂಧನ ಖಂಡಿಸಿ ವಿರೋಧ ಪಕ್ಷ ಕಾಂಗ್ರೆಸ್ ಭಾನುವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.</p><p>ಕಾಂಗ್ರೆಸ್ ಕಚೇರಿ ಎದುರು ಸೇರಿದ್ದ ನೂರಾರು ಕಾರ್ಯಕರ್ತರು ‘ರಾಜ್ಯದ ಎನ್ಡಿಎ ಸರ್ಕಾರ ರಾಜಕೀಯ ಸೇಡಿನ ಕ್ರಮ ಕೈಗೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪ್ರತಿಕೃತಿ ದಹಿಸಿದರು.</p><p>ಪೂರ್ಣಿಯಾ ಲೋಕಸಭೆ ಕ್ಷೇತ್ರದ ಸಂಸದ ಪಪ್ಪು ಯಾದವ್ ಅವರನ್ನು 1995ರ ವಂಚನೆ (ದಾಖಲೆ ತಿರುಚಿದ) ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ರಾತ್ರಿ ಅವರ ನಿವಾಸದಲ್ಲೇ ಬಂಧಿಸಲಾಗಿದೆ. </p><p>ಪಟ್ನಾ ನ್ಯಾಯಾಲಯ ಯಾದವ್ ಅವರಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅನಾರೋಗ್ಯ ಕಾರಣ ಪಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ (ಇಂದು) ಪ್ರಕರಣದ ವಿಚಾರಣೆ ನಡೆಯಲಿದೆ.</p><p>ಈ ಮಧ್ಯೆ ಪತ್ರಕರ್ತರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ , ‘ ರಾಜ್ಯದಲ್ಲಿ ಸರ್ವಾಧಿಕಾರ ಸೃಷ್ಟಿಯಾಗಿದೆ. ಅಪರಾಧಿಗಳು ಸ್ವಚ್ಛಂದವಾಗಿದ್ದಾರೆ. ತಪ್ಪು ಮಾಡದವರನ್ನು ಬಂಧಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ಪಕ್ಷೇತರ ಸಂಸದ ಪಪ್ಪು ಯಾದವ್ (ರಾಜೇಶ್ ರಂಜನ್) ಅವರ ಬಂಧನ ಖಂಡಿಸಿ ವಿರೋಧ ಪಕ್ಷ ಕಾಂಗ್ರೆಸ್ ಭಾನುವಾರ ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.</p><p>ಕಾಂಗ್ರೆಸ್ ಕಚೇರಿ ಎದುರು ಸೇರಿದ್ದ ನೂರಾರು ಕಾರ್ಯಕರ್ತರು ‘ರಾಜ್ಯದ ಎನ್ಡಿಎ ಸರ್ಕಾರ ರಾಜಕೀಯ ಸೇಡಿನ ಕ್ರಮ ಕೈಗೊಳ್ಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪ್ರತಿಕೃತಿ ದಹಿಸಿದರು.</p><p>ಪೂರ್ಣಿಯಾ ಲೋಕಸಭೆ ಕ್ಷೇತ್ರದ ಸಂಸದ ಪಪ್ಪು ಯಾದವ್ ಅವರನ್ನು 1995ರ ವಂಚನೆ (ದಾಖಲೆ ತಿರುಚಿದ) ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ರಾತ್ರಿ ಅವರ ನಿವಾಸದಲ್ಲೇ ಬಂಧಿಸಲಾಗಿದೆ. </p><p>ಪಟ್ನಾ ನ್ಯಾಯಾಲಯ ಯಾದವ್ ಅವರಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಅನಾರೋಗ್ಯ ಕಾರಣ ಪಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ (ಇಂದು) ಪ್ರಕರಣದ ವಿಚಾರಣೆ ನಡೆಯಲಿದೆ.</p><p>ಈ ಮಧ್ಯೆ ಪತ್ರಕರ್ತರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ , ‘ ರಾಜ್ಯದಲ್ಲಿ ಸರ್ವಾಧಿಕಾರ ಸೃಷ್ಟಿಯಾಗಿದೆ. ಅಪರಾಧಿಗಳು ಸ್ವಚ್ಛಂದವಾಗಿದ್ದಾರೆ. ತಪ್ಪು ಮಾಡದವರನ್ನು ಬಂಧಿಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>