<p><strong>ಪಟ್ನಾ</strong>: ಮೂರು ದಿನಗಳ ಹಿಂದೆ ಮೋಕಾಮಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನ್ ಸುರಾಜ್ ಬೆಂಬಲಿಗ ದುಲರ್ ಚಂದ್ ಯಾದವ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಭಾನುವಾರ ಆಮಾಜಿ ಗ್ಯಾಂಗ್ಸ್ಟರ್, ರಾಜಕಾರಣಿ ಅನಂತ್ ಕುಮಾರ್ ಸಿಂಗ್ ಅವರನ್ನು ಬಂಧಿಸಿದ್ದಾರೆ.</p><p>ಎನ್ಡಿಎ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಯು ಅಭ್ಯರ್ಥಿಯನ್ನು ಭಾನುವಾರ ಬೆಳಗಿನ ಜಾವ ಮೊಕಾಮಾದ ಅವರ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ.</p><p>ಪಿಟಿಐ ಜೊತೆ ಮಾತನಾಡಿದ ಪಾಟ್ನಾ ಎಸ್ಎಸ್ಪಿ ಕಾರ್ತಿಕೇಯ ಕೆ ಶರ್ಮಾ, ಅನಂತ್ ಬಂಧನವನ್ನು ದೃಢಪಡಿಸಿದರು. ಆದರೂ, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು.</p><p>ಗುರುವಾರ ಪಟ್ನಾದ ಮೋಕಾಮಾ ಪ್ರದೇಶದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ನಡೆಸುತ್ತಿದ್ದಾಗ ಯಾದವ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಮೋಕಾಮಾ ಪ್ರದೇಶದ ಭದೌರ್ ಮತ್ತು ಘೋಸ್ವರಿ ಪೊಲೀಸ್ ಠಾಣೆಗಳ ಸಮೀಪದಲ್ಲೇ ಈ ಘಟನೆ ನಡೆದಿತ್ತು.</p><p>ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಎಫ್ಐಆರ್ಗಳನ್ನು ದಾಖಲಿಸಿದ್ದರು. ಮೃತನ ಮೊಮ್ಮಗ ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್ಐಆರ್ಗಳ ಪೈಕಿ ಒಂದರಲ್ಲಿ ಅನಂತ್ ಸಿಂಗ್ ಸೇರಿದಂತೆ ಇತರ ನಾಲ್ವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಮೂರು ದಿನಗಳ ಹಿಂದೆ ಮೋಕಾಮಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನ್ ಸುರಾಜ್ ಬೆಂಬಲಿಗ ದುಲರ್ ಚಂದ್ ಯಾದವ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಭಾನುವಾರ ಆಮಾಜಿ ಗ್ಯಾಂಗ್ಸ್ಟರ್, ರಾಜಕಾರಣಿ ಅನಂತ್ ಕುಮಾರ್ ಸಿಂಗ್ ಅವರನ್ನು ಬಂಧಿಸಿದ್ದಾರೆ.</p><p>ಎನ್ಡಿಎ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಯು ಅಭ್ಯರ್ಥಿಯನ್ನು ಭಾನುವಾರ ಬೆಳಗಿನ ಜಾವ ಮೊಕಾಮಾದ ಅವರ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ.</p><p>ಪಿಟಿಐ ಜೊತೆ ಮಾತನಾಡಿದ ಪಾಟ್ನಾ ಎಸ್ಎಸ್ಪಿ ಕಾರ್ತಿಕೇಯ ಕೆ ಶರ್ಮಾ, ಅನಂತ್ ಬಂಧನವನ್ನು ದೃಢಪಡಿಸಿದರು. ಆದರೂ, ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು.</p><p>ಗುರುವಾರ ಪಟ್ನಾದ ಮೋಕಾಮಾ ಪ್ರದೇಶದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಪರ ಪ್ರಚಾರ ನಡೆಸುತ್ತಿದ್ದಾಗ ಯಾದವ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಮೋಕಾಮಾ ಪ್ರದೇಶದ ಭದೌರ್ ಮತ್ತು ಘೋಸ್ವರಿ ಪೊಲೀಸ್ ಠಾಣೆಗಳ ಸಮೀಪದಲ್ಲೇ ಈ ಘಟನೆ ನಡೆದಿತ್ತು.</p><p>ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಎಫ್ಐಆರ್ಗಳನ್ನು ದಾಖಲಿಸಿದ್ದರು. ಮೃತನ ಮೊಮ್ಮಗ ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿರುವ ಎಫ್ಐಆರ್ಗಳ ಪೈಕಿ ಒಂದರಲ್ಲಿ ಅನಂತ್ ಸಿಂಗ್ ಸೇರಿದಂತೆ ಇತರ ನಾಲ್ವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>