ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿರುವ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್, ‘ಅರುಣಾಚಲ ಪ್ರದೇಶದಲ್ಲಿನ ನಮ್ಮ ಶಾಸಕರನ್ನು ಖರೀದಿಸುವ ಮೂಲಕ ಬಿಜೆಪಿಯು ಮಿತ್ರ ಧರ್ಮವನ್ನು ಗಾಳಿಗೆ ತೂರಿದೆ‘ ಎಂದು ಆರೋಪಿಸಿದ್ದಾರೆ.
ನಿತೀಶ್ ಕುಮಾರ್ ಅವರು ಉಪ ರಾಷ್ಟ್ರಪತಿಯಾಗುವ ಬಯಕೆಯನ್ನು ಹೊಂದಿದ್ದರು ಎಂಬ ಬಿಜೆಪಿ ನಾಯಕ ಸುಶೀಲ್ ಮೋದಿ ಹೇಳಿಕೆಗೆ ಲಲನ್ ತಿರುಗೇಟು ನೀಡಿದ್ದಾರೆ.