<p><strong>ಪಟ್ನಾ:</strong> ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. </p><p>ನಿತೀಶ್ ಕುಮಾರ್ ಅವರು ರಾಜ್ಯಪಾಲ ಆರಿಫ್ ಅವರೊಂದಿಗೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಂಡಿದ್ದರು. ಆದರೆ, ರಾಜಭವನದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿರಲಿಲ್ಲ. </p><p>ರಾಜ್ಯಪಾಲರ ಔತಣಕೂಟದಲ್ಲಿ ಭಾಗವಹಿಸದೆ ಇರಲು ಜೆಡಿಯು ವರಿಷ್ಠರ ‘ಅಸಮರ್ಥತೆಯೇ’ ಪ್ರಮುಖ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ. </p><p>‘ಗಣರಾಜ್ಯೋತ್ಸವದ ಪರೇಡ್ ಬಳಿಕ ನಿತೀಶ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರು ಔತಣಕೂಟದಲ್ಲಿ ಭಾಗವಹಿಸಲಿಲ್ಲ’ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. </p><p>ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದಿನಿಂದ (ಸೋಮವಾರ) ಆರಂಭವಾಗಬೇಕಿದ್ದ ನಿತೀಶ್ ಕುಮಾರ್ ನೇತೃತ್ವದ ‘ಪ್ರಗತಿ ಯಾತ್ರೆ’ಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಸಂಪುಟ ಸಚಿವಾಲಯ ಮಾಹಿತಿ ನೀಡಿದೆ. </p>.<p><strong>ತಮಿಳುನಾಡು ರಾಜ್ಯಪಾಲರ ಔತಣಕೂಟ ಬಹಿಷ್ಕರಿಸಿದ ಸ್ಟಾಲಿನ್</strong></p><p>ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರ್.ಎನ್.ರವಿ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪಾಲ್ಗೊಳ್ಳಲಿಲ್ಲ.</p><p>ಹಲವು ವಿಚಾರಗಳಿಗೆ ಸಂಬಂಧಿಸಿ ರಾಜಭವನ ಮತ್ತು ಡಿಎಂಕೆ ನೇತೃತ್ವದ ಸರ್ಕಾರದ ನಡುವಿನ ಜಟಾಪಟಿಯೇ ಇಂತಹ ನಡೆಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ವಿರೋಧ ಪಕ್ಷಗಳಾದ ಎಐಎಡಿಎಂಕೆ, ಬಿಜೆಪಿ, ಡಿಎಂಡಿಕೆ ಹಾಗೂ ಪುದಿಯ ತಮಿಳಗಂ ಪಕ್ಷಗಳ ನಾಯಕರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.ಚೆನ್ನೈ: ರಾಜ್ಯಪಾಲ ರವಿ ನಿವಾಸದ ಔತಣಕೂಟ ಬಹಿಷ್ಕರಿಸಿದ ಸ್ಟಾಲಿನ್.ತಮಿಳುನಾಡು ಅಭಿವೃದ್ಧಿ ರಾಜ್ಯಪಾಲರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: CM ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. </p><p>ನಿತೀಶ್ ಕುಮಾರ್ ಅವರು ರಾಜ್ಯಪಾಲ ಆರಿಫ್ ಅವರೊಂದಿಗೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಂಡಿದ್ದರು. ಆದರೆ, ರಾಜಭವನದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿರಲಿಲ್ಲ. </p><p>ರಾಜ್ಯಪಾಲರ ಔತಣಕೂಟದಲ್ಲಿ ಭಾಗವಹಿಸದೆ ಇರಲು ಜೆಡಿಯು ವರಿಷ್ಠರ ‘ಅಸಮರ್ಥತೆಯೇ’ ಪ್ರಮುಖ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದಾರೆ. </p><p>‘ಗಣರಾಜ್ಯೋತ್ಸವದ ಪರೇಡ್ ಬಳಿಕ ನಿತೀಶ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರು ಔತಣಕೂಟದಲ್ಲಿ ಭಾಗವಹಿಸಲಿಲ್ಲ’ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ. </p><p>ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದಿನಿಂದ (ಸೋಮವಾರ) ಆರಂಭವಾಗಬೇಕಿದ್ದ ನಿತೀಶ್ ಕುಮಾರ್ ನೇತೃತ್ವದ ‘ಪ್ರಗತಿ ಯಾತ್ರೆ’ಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಸಂಪುಟ ಸಚಿವಾಲಯ ಮಾಹಿತಿ ನೀಡಿದೆ. </p>.<p><strong>ತಮಿಳುನಾಡು ರಾಜ್ಯಪಾಲರ ಔತಣಕೂಟ ಬಹಿಷ್ಕರಿಸಿದ ಸ್ಟಾಲಿನ್</strong></p><p>ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರ್.ಎನ್.ರವಿ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪಾಲ್ಗೊಳ್ಳಲಿಲ್ಲ.</p><p>ಹಲವು ವಿಚಾರಗಳಿಗೆ ಸಂಬಂಧಿಸಿ ರಾಜಭವನ ಮತ್ತು ಡಿಎಂಕೆ ನೇತೃತ್ವದ ಸರ್ಕಾರದ ನಡುವಿನ ಜಟಾಪಟಿಯೇ ಇಂತಹ ನಡೆಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ವಿರೋಧ ಪಕ್ಷಗಳಾದ ಎಐಎಡಿಎಂಕೆ, ಬಿಜೆಪಿ, ಡಿಎಂಡಿಕೆ ಹಾಗೂ ಪುದಿಯ ತಮಿಳಗಂ ಪಕ್ಷಗಳ ನಾಯಕರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.ಚೆನ್ನೈ: ರಾಜ್ಯಪಾಲ ರವಿ ನಿವಾಸದ ಔತಣಕೂಟ ಬಹಿಷ್ಕರಿಸಿದ ಸ್ಟಾಲಿನ್.ತಮಿಳುನಾಡು ಅಭಿವೃದ್ಧಿ ರಾಜ್ಯಪಾಲರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ: CM ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>