<p><strong>ನವದೆಹಲಿ:</strong> ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ಸೆ. 14ರಂದು ನಡೆಯಲಿರುವ ಚುನಾವಣೆಗೆ ವಿರೋಧಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಆರ್ಜೆಡಿ ಮುಖಂಡ ಮನೋಜ್ ಝಾ ಶುಕ್ರವಾರ ನಾಮಪತ್ರ ಸಲ್ಲಿಸಿದರು.</p>.<p>ಮನೋಜ್ ಝಾ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಜೈರಾಂ ರಮೇಶ್, ಡಿಎಂಕೆ ನಾಯಕ ತಿರುಚಿ ಶಿವ, ಸಮಾಜವಾದ ಪಕ್ಷದ ಸಂಸದ ಜಾವೇದ್ ಅಲಿ ಉಪಸ್ಥಿತರಿದ್ದರು.</p>.<p>‘ಈ ಚುನಾವಣೆಯು ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಆಡಳಿತ ಪಕ್ಷಕ್ಕೆ ವಿರೋಧಪಕ್ಷಗಳ ಮಾತನ್ನು ಆಲಿಸಲು ಕಲಿಯಿರಿ ಎನ್ನುವ ಬಲವಾದ ಸಂದೇಶ ಸಾರುವ ಸಲುವಾಗಿ ನಡೆಯಲಿರುವ ಚುನಾವಣೆ’ ಎಂದು ನಾಮಪತ್ರ ಸಲ್ಲಿಕೆ ಬಳಿಕ ಮನೋಜ್ ಝಾ ಸುದ್ದಿಗಾರರಿಗೆ ತಿಳಿಸಿದರು.</p>.<p>ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಯುನ ಹರಿವಂಶ್ ಅವರು ಉಪ ಸಭಾಪತಿ ಸ್ಥಾನಕ್ಕೆ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.</p>.<p>ಝಾ ಅವರಿಗೆ 12 ವಿರೋಧಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಎಎಪಿ ಮತ್ತು ಬಿಎಸ್ಪಿ ಕೂಡಾ ಬೆಂಬಲಿಸಿದರೆ 95 ಮತಗಳನ್ನು ಗಳಿಸುವ ಸಾಧ್ಯತೆ ಇದೆ. ಒಟ್ಟು 244 ಸದಸ್ಯ ಬಲವಿರುವ ರಾಜ್ಯಭೆಯಲ್ಲಿ 135 ಸದಸ್ಯರು ಬೆಂಬಲ ವ್ಯಕ್ತಪಡಿಸಿರುವುದರಿಂದ ಚುನಾವಣೆಯಲ್ಲಿ ಹರಿವಂಶ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.</p>.<p>ಸೆಪ್ಟೆಂಬರ್ 14ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಸಭೆಯ ಉಪ ಸಭಾಪತಿ ಸ್ಥಾನಕ್ಕೆ ಸೆ. 14ರಂದು ನಡೆಯಲಿರುವ ಚುನಾವಣೆಗೆ ವಿರೋಧಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಆರ್ಜೆಡಿ ಮುಖಂಡ ಮನೋಜ್ ಝಾ ಶುಕ್ರವಾರ ನಾಮಪತ್ರ ಸಲ್ಲಿಸಿದರು.</p>.<p>ಮನೋಜ್ ಝಾ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್, ಅಹ್ಮದ್ ಪಟೇಲ್, ಜೈರಾಂ ರಮೇಶ್, ಡಿಎಂಕೆ ನಾಯಕ ತಿರುಚಿ ಶಿವ, ಸಮಾಜವಾದ ಪಕ್ಷದ ಸಂಸದ ಜಾವೇದ್ ಅಲಿ ಉಪಸ್ಥಿತರಿದ್ದರು.</p>.<p>‘ಈ ಚುನಾವಣೆಯು ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಆಡಳಿತ ಪಕ್ಷಕ್ಕೆ ವಿರೋಧಪಕ್ಷಗಳ ಮಾತನ್ನು ಆಲಿಸಲು ಕಲಿಯಿರಿ ಎನ್ನುವ ಬಲವಾದ ಸಂದೇಶ ಸಾರುವ ಸಲುವಾಗಿ ನಡೆಯಲಿರುವ ಚುನಾವಣೆ’ ಎಂದು ನಾಮಪತ್ರ ಸಲ್ಲಿಕೆ ಬಳಿಕ ಮನೋಜ್ ಝಾ ಸುದ್ದಿಗಾರರಿಗೆ ತಿಳಿಸಿದರು.</p>.<p>ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಯುನ ಹರಿವಂಶ್ ಅವರು ಉಪ ಸಭಾಪತಿ ಸ್ಥಾನಕ್ಕೆ ಪುನರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.</p>.<p>ಝಾ ಅವರಿಗೆ 12 ವಿರೋಧಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಎಎಪಿ ಮತ್ತು ಬಿಎಸ್ಪಿ ಕೂಡಾ ಬೆಂಬಲಿಸಿದರೆ 95 ಮತಗಳನ್ನು ಗಳಿಸುವ ಸಾಧ್ಯತೆ ಇದೆ. ಒಟ್ಟು 244 ಸದಸ್ಯ ಬಲವಿರುವ ರಾಜ್ಯಭೆಯಲ್ಲಿ 135 ಸದಸ್ಯರು ಬೆಂಬಲ ವ್ಯಕ್ತಪಡಿಸಿರುವುದರಿಂದ ಚುನಾವಣೆಯಲ್ಲಿ ಹರಿವಂಶ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.</p>.<p>ಸೆಪ್ಟೆಂಬರ್ 14ರಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>