<p><strong>ಬೆಂಗಳೂರು:</strong> ‘ಹರಿಯಾಣ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಬಹುಮತ ಎಂದು ತೋರಿಸಲಾಗಿತ್ತು. ನಂತರ ಏನಾಯಿತು? ಅದೇ ರೀತಿ ಬಿಹಾರದಲ್ಲೂ ಫಲಿತಾಂಶ ಉಲ್ಟಾ ಆಗಲಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಸಮೀಕ್ಷೆಗಳಿಗಿಂತ ಭಿನ್ನವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿತು. ಬಿಹಾರದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎಗೆ ಮುನ್ನಡೆ ಎನ್ನುತ್ತಿವೆ. ಫಲಿತಾಂಶ ಬರುವ ತನಕ ಕಾದು ನೋಡೋಣ’ ಎಂದರು.</p>.<p><strong>ರಾಜ್ಯದ ಮೇಲೆ ಪರಿಣಾಮ ಇಲ್ಲ:</strong> ‘ಬಿಹಾರ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ. ಅಲ್ಲಿನ ಫಲಿತಾಂಶ ಕರ್ನಾಟಕದ ರಾಜಕಾರಣದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ನಮ್ಮದು ಸಾಮಾಜಿಕ ಬದಲಾವಣೆಯ ಕಾಯಕ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>‘ಕರ್ನಾಟಕ ವಿಧಾನಸಭಾ ಚುನಾವಣೆ ಸಮಯದಲ್ಲೂ ಸಮೀಕ್ಷೆಗಳನ್ನು ನಂಬಿರಲಿಲ್ಲ. ಯಾವ ಸಮೀಕ್ಷೆಗಳೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿರಲಿಲ್ಲ. ತಟ್ಟೆಮರೆ ಏಟು ಯಾವ ರೀತಿ ಬೀಳುತ್ತದೆ ಎಂದು ಹೇಳಲು ಆಗದು. ಬಿಹಾರದ ಜನರು ಬದಲಾವಣೆ ಬಯಸುತ್ತಿದ್ದು, ಮಹಾಘಟಬಂಧನ ಗೆಲ್ಲುವ ಭರವಸೆ ಇದೆ. ಚುನಾವಣೆಯಲ್ಲಿ ಗೆಲುವು–ಸೋಲು ಸಹಜ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹರಿಯಾಣ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಬಹುಮತ ಎಂದು ತೋರಿಸಲಾಗಿತ್ತು. ನಂತರ ಏನಾಯಿತು? ಅದೇ ರೀತಿ ಬಿಹಾರದಲ್ಲೂ ಫಲಿತಾಂಶ ಉಲ್ಟಾ ಆಗಲಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಸಮೀಕ್ಷೆಗಳಿಗಿಂತ ಭಿನ್ನವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿತು. ಬಿಹಾರದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎಗೆ ಮುನ್ನಡೆ ಎನ್ನುತ್ತಿವೆ. ಫಲಿತಾಂಶ ಬರುವ ತನಕ ಕಾದು ನೋಡೋಣ’ ಎಂದರು.</p>.<p><strong>ರಾಜ್ಯದ ಮೇಲೆ ಪರಿಣಾಮ ಇಲ್ಲ:</strong> ‘ಬಿಹಾರ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ. ಅಲ್ಲಿನ ಫಲಿತಾಂಶ ಕರ್ನಾಟಕದ ರಾಜಕಾರಣದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ನಮ್ಮದು ಸಾಮಾಜಿಕ ಬದಲಾವಣೆಯ ಕಾಯಕ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>‘ಕರ್ನಾಟಕ ವಿಧಾನಸಭಾ ಚುನಾವಣೆ ಸಮಯದಲ್ಲೂ ಸಮೀಕ್ಷೆಗಳನ್ನು ನಂಬಿರಲಿಲ್ಲ. ಯಾವ ಸಮೀಕ್ಷೆಗಳೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿರಲಿಲ್ಲ. ತಟ್ಟೆಮರೆ ಏಟು ಯಾವ ರೀತಿ ಬೀಳುತ್ತದೆ ಎಂದು ಹೇಳಲು ಆಗದು. ಬಿಹಾರದ ಜನರು ಬದಲಾವಣೆ ಬಯಸುತ್ತಿದ್ದು, ಮಹಾಘಟಬಂಧನ ಗೆಲ್ಲುವ ಭರವಸೆ ಇದೆ. ಚುನಾವಣೆಯಲ್ಲಿ ಗೆಲುವು–ಸೋಲು ಸಹಜ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>