<p><strong>ಔರಂಗಬಾದ್(ಬಿಹಾರ):</strong> ಬಿಹಾರ ಚುನಾವಣೆಯು ಎನ್ಡಿಎ ಮೈತ್ರಿಕೂಟದ ‘ವಿಕಾಸ’ ಮತ್ತು ಇಂಡಿಯಾ ಬಣದ ‘ವಿನಾಶ’ ನಡುವಿನ ಹೋರಾಟವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಗುರುವಾರ ಹೇಳಿದ್ದಾರೆ.</p><p>ಇಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ನಡ್ಡಾ, ‘ಇಂಡಿಯಾ ಬಣದ ಸಣ್ಣ ಪಕ್ಷಗಳನ್ನು ಕಾಂಗ್ರೆಸ್ ತಿಂದು ಮುಗಿಸಿದೆ’ ಎಂದು ಆರೋಪಿಸಿದ್ದಾರೆ.</p><p>ಆರ್ಜೆಡಿ ವಿರುದ್ಧವೂ ವಾಗ್ದಾಳಿ ಮುಂದುವರಿಸಿರುವ ಅವರು, ‘ಸುಲಿಗೆ, ಅರಾಜಕತೆ, ಬೆದರಿಕೆಯನ್ನು ಲಾಲೂ ಪ್ರಸಾದ್ ನೇತೃತ್ವದ ಆರ್ಜೆಡಿ ಪಕ್ಷ ಪ್ರತಿನಿಧಿಸುತ್ತದೆ’ ಎಂದು ಕಿಡಿಕಾರಿದ್ದಾರೆ.</p><p>‘ಯುವಜನರಿಗೆ ಉದ್ಯೋಗ ನೀಡುವ ಮೂಲಕ ವಲಸೆ ಹೋಗದಂತೆ ತಡೆಯುವುದಾಗಿ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ. ಆರ್ಜೆಡಿಯ ಇಂತಹ ಭರವಸೆಗಳು ಉದ್ಯೋಗಕ್ಕಾಗಿ ಭೂಮಿ ಹಗರಣವನ್ನು ನೆನಪಿಸುತ್ತದೆ’ ಎಂದು ವ್ಯಂಗ್ಯವಾಡಿದ್ದಾರೆ.</p><p>ಗ್ಯಾಂಗಸ್ಟರ್ ಮುಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ಗೆ ಆರ್ಜೆಡಿಯಿಂದ ಟಿಕೆಟ್ ನೀಡಿರುವದನ್ನು ಟೀಕಿಸಿರುವ ನಡ್ಡಾ, ಇದು ಆರ್ಜೆಡಿಯು ಬಿಹಾರದ ಬಗ್ಗೆ ಎಷ್ಟು ಕಾಳಜಿ ವಹಿಸುತ್ತದೆ ಎಂಬುದನ್ನು ತೋರಿಸುತ್ತದೆ’ ಎಂದಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಬಾದ್(ಬಿಹಾರ):</strong> ಬಿಹಾರ ಚುನಾವಣೆಯು ಎನ್ಡಿಎ ಮೈತ್ರಿಕೂಟದ ‘ವಿಕಾಸ’ ಮತ್ತು ಇಂಡಿಯಾ ಬಣದ ‘ವಿನಾಶ’ ನಡುವಿನ ಹೋರಾಟವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಗುರುವಾರ ಹೇಳಿದ್ದಾರೆ.</p><p>ಇಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ನಡ್ಡಾ, ‘ಇಂಡಿಯಾ ಬಣದ ಸಣ್ಣ ಪಕ್ಷಗಳನ್ನು ಕಾಂಗ್ರೆಸ್ ತಿಂದು ಮುಗಿಸಿದೆ’ ಎಂದು ಆರೋಪಿಸಿದ್ದಾರೆ.</p><p>ಆರ್ಜೆಡಿ ವಿರುದ್ಧವೂ ವಾಗ್ದಾಳಿ ಮುಂದುವರಿಸಿರುವ ಅವರು, ‘ಸುಲಿಗೆ, ಅರಾಜಕತೆ, ಬೆದರಿಕೆಯನ್ನು ಲಾಲೂ ಪ್ರಸಾದ್ ನೇತೃತ್ವದ ಆರ್ಜೆಡಿ ಪಕ್ಷ ಪ್ರತಿನಿಧಿಸುತ್ತದೆ’ ಎಂದು ಕಿಡಿಕಾರಿದ್ದಾರೆ.</p><p>‘ಯುವಜನರಿಗೆ ಉದ್ಯೋಗ ನೀಡುವ ಮೂಲಕ ವಲಸೆ ಹೋಗದಂತೆ ತಡೆಯುವುದಾಗಿ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ. ಆರ್ಜೆಡಿಯ ಇಂತಹ ಭರವಸೆಗಳು ಉದ್ಯೋಗಕ್ಕಾಗಿ ಭೂಮಿ ಹಗರಣವನ್ನು ನೆನಪಿಸುತ್ತದೆ’ ಎಂದು ವ್ಯಂಗ್ಯವಾಡಿದ್ದಾರೆ.</p><p>ಗ್ಯಾಂಗಸ್ಟರ್ ಮುಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ಗೆ ಆರ್ಜೆಡಿಯಿಂದ ಟಿಕೆಟ್ ನೀಡಿರುವದನ್ನು ಟೀಕಿಸಿರುವ ನಡ್ಡಾ, ಇದು ಆರ್ಜೆಡಿಯು ಬಿಹಾರದ ಬಗ್ಗೆ ಎಷ್ಟು ಕಾಳಜಿ ವಹಿಸುತ್ತದೆ ಎಂಬುದನ್ನು ತೋರಿಸುತ್ತದೆ’ ಎಂದಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>