<p><strong>ನವದೆಹಲಿ</strong>: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಭಾಗವಾಗಿ ಬಿಡುಗಡೆ ಮಾಡಿರುವ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಆಗ್ರಹ, ಆಕ್ಷೇಪಣೆ ಮತ್ತು ತಿದ್ದುಪಡಿ ಅರ್ಜಿಗಳನ್ನು ಸಲ್ಲಿಸಲು ಸೆ.1ರ ಬಳಿಕವೂ ಅವಕಾಶವಿದೆ ಎಂದು ಚುನಾವಣಾ ಆಯೋಗ (ಇ.ಸಿ) ತಿಳಿಸಿದೆ.</p>.<p>ಆದರೆ ಈಗಾಗಲೇ ನಿಗದಿಪಡಿಸಿರುವ ಸೆ.1ರ ಗಡುವಿನ ಬಳಿಕ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.</p>.<p>ಬಿಹಾರ ಎಸ್ಐಆರ್ ಕುರಿತು ಚುನಾವಣಾ ಆಯೋಗವು ಜೂನ್ 24ರಂದು ಹೊರಡಿಸಿದ್ದ ವೇಳಾಪಟ್ಟಿಯ ಪ್ರಕಾರ, ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಗಡುವು ಸೋಮವಾರ (ಸೆ.1) ಕೊನೆಗೊಂಡಿದೆ. ಮತದಾರರ ಅಂತಿಮ ಪಟ್ಟಿಯನ್ನು ಸೆಪ್ಟೆಂಬರ್ 30 ರಂದು ಪ್ರಕಟಿಸಲಾಗುತ್ತದೆ.</p>.<p class="bodytext">ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ಹೇಳಿರುವುದನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಸೋಮವಾರ ಗಮನಿಸಿತು.</p>.<p class="bodytext">ಕರಡು ಮತದಾರರ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ನೀಡಿದ್ದ ಗಡುವು ವಿಸ್ತರಿಸುವಂತೆ ಕೋರಿ ಆರ್ಜೆಡಿ ಮತ್ತು ಎಐಎಂಐಎಂ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿವೆ.</p>.<p class="bodytext">‘ಸೆಪ್ಟೆಂಬರ್ 1ರ ನಂತರ ಆಕ್ಷೇಪಣೆಗಳು ಅಥವಾ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸುವುದನ್ನು ನಿರ್ಬಂಧಿಸುವುದಿಲ್ಲ ಎಂದು ಚುನಾವಣಾ ಆಯೋಗ ಸಲ್ಲಿಸಿದ ಟಿಪ್ಪಣಿ ಹೇಳುತ್ತದೆ. ತಿದ್ದುಪಡಿಗಳನ್ನು ಗಡುವಿನ (ಸೆ.1) ನಂತರವೂ ಸಲ್ಲಿಸಬಹುದು. ಆದ್ದರಿಂದ ಆಕ್ಷೇಪಣೆ ಸಲ್ಲಿಕೆ ಮುಂದುವರಿಯಲಿದೆ’ ಎಂಬುದನ್ನು ಪೀಠವು ಗಮನಿಸಿತು.</p>.<p class="bodytext">ಚುನಾವಣಾ ಆಯೋಗದ ಟಿಪ್ಪಣಿಗೆ ಪ್ರತಿಕ್ರಿಯೆ ಸಲ್ಲಿಸುವ ಸ್ವಾತಂತ್ರ್ಯವನ್ನು ಪೀಠವು ರಾಜಕೀಯ ಪಕ್ಷಗಳಿಗೆ ನೀಡಿತು. </p>.<p>ಇ.ಸಿ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ‘ಆಕ್ಷೇಪಣೆ ಸಲ್ಲಿಕೆಯ ಗಡುವು ವಿಸ್ತರಿಸಿದರೆ ಇಡೀ ಎಸ್ಐಆರ್ ಪ್ರಕ್ರಿಯೆ ಮತ್ತು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸುವುದಕ್ಕೆ ಅಡ್ಡಿಯಾಗಲಿದೆ’ ಎಂದು ವಾದಿಸಿದರು. </p>.<p>‘ನಿಯಮಗಳ ಪ್ರಕಾರವೇ ಕಾಲಮಿತಿ ನಿಗದಿಪಡಿಸಲಾಗಿದೆ. ಮತದಾರರಿಗೆ ಆಗ್ರಹ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಗರಿಷ್ಠ ಮೂವತ್ತು ದಿನಗಳ ಕಾಲಾವಕಾಶ ನೀಡಲಾಗಿದೆ’ ಎಂದರು. </p>.<p>ಎಸ್ಐಆರ್ಅನ್ನು ‘ಮುಂದುವರಿದುಕೊಂಡು ಹೋಗುವ ಪ್ರಕ್ರಿಯೆ’ ಎಂದು ಹೇಳಿರುವ ಅಯೋಗ, ಅಪೂರ್ಣ ದಾಖಲೆಗಳನ್ನು ನೀಡಿರುವ ಮತದಾರರಿಗೆ ಏಳು ದಿನಗಳಲ್ಲಿ ನೋಟಿಸ್ ಕಳುಹಿಸಲಾಗುವುದು ಎಂದಿದೆ. ರಾಜಕೀಯ ಪಕ್ಷಗಳು ಸಲ್ಲಿಸಿರುವ ಆಕ್ಷೇಪಣೆಗಳಲ್ಲಿ ಹೆಚ್ಚಿನವು ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವುದಕ್ಕೆ ಸಂಬಂಧಿಸಿದ್ದಾಗಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಭಾಗವಾಗಿ ಬಿಡುಗಡೆ ಮಾಡಿರುವ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಆಗ್ರಹ, ಆಕ್ಷೇಪಣೆ ಮತ್ತು ತಿದ್ದುಪಡಿ ಅರ್ಜಿಗಳನ್ನು ಸಲ್ಲಿಸಲು ಸೆ.1ರ ಬಳಿಕವೂ ಅವಕಾಶವಿದೆ ಎಂದು ಚುನಾವಣಾ ಆಯೋಗ (ಇ.ಸಿ) ತಿಳಿಸಿದೆ.</p>.<p>ಆದರೆ ಈಗಾಗಲೇ ನಿಗದಿಪಡಿಸಿರುವ ಸೆ.1ರ ಗಡುವಿನ ಬಳಿಕ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.</p>.<p>ಬಿಹಾರ ಎಸ್ಐಆರ್ ಕುರಿತು ಚುನಾವಣಾ ಆಯೋಗವು ಜೂನ್ 24ರಂದು ಹೊರಡಿಸಿದ್ದ ವೇಳಾಪಟ್ಟಿಯ ಪ್ರಕಾರ, ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಗಡುವು ಸೋಮವಾರ (ಸೆ.1) ಕೊನೆಗೊಂಡಿದೆ. ಮತದಾರರ ಅಂತಿಮ ಪಟ್ಟಿಯನ್ನು ಸೆಪ್ಟೆಂಬರ್ 30 ರಂದು ಪ್ರಕಟಿಸಲಾಗುತ್ತದೆ.</p>.<p class="bodytext">ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಚುನಾವಣಾ ಆಯೋಗ ಹೇಳಿರುವುದನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠವು ಸೋಮವಾರ ಗಮನಿಸಿತು.</p>.<p class="bodytext">ಕರಡು ಮತದಾರರ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ನೀಡಿದ್ದ ಗಡುವು ವಿಸ್ತರಿಸುವಂತೆ ಕೋರಿ ಆರ್ಜೆಡಿ ಮತ್ತು ಎಐಎಂಐಎಂ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿವೆ.</p>.<p class="bodytext">‘ಸೆಪ್ಟೆಂಬರ್ 1ರ ನಂತರ ಆಕ್ಷೇಪಣೆಗಳು ಅಥವಾ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸುವುದನ್ನು ನಿರ್ಬಂಧಿಸುವುದಿಲ್ಲ ಎಂದು ಚುನಾವಣಾ ಆಯೋಗ ಸಲ್ಲಿಸಿದ ಟಿಪ್ಪಣಿ ಹೇಳುತ್ತದೆ. ತಿದ್ದುಪಡಿಗಳನ್ನು ಗಡುವಿನ (ಸೆ.1) ನಂತರವೂ ಸಲ್ಲಿಸಬಹುದು. ಆದ್ದರಿಂದ ಆಕ್ಷೇಪಣೆ ಸಲ್ಲಿಕೆ ಮುಂದುವರಿಯಲಿದೆ’ ಎಂಬುದನ್ನು ಪೀಠವು ಗಮನಿಸಿತು.</p>.<p class="bodytext">ಚುನಾವಣಾ ಆಯೋಗದ ಟಿಪ್ಪಣಿಗೆ ಪ್ರತಿಕ್ರಿಯೆ ಸಲ್ಲಿಸುವ ಸ್ವಾತಂತ್ರ್ಯವನ್ನು ಪೀಠವು ರಾಜಕೀಯ ಪಕ್ಷಗಳಿಗೆ ನೀಡಿತು. </p>.<p>ಇ.ಸಿ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ‘ಆಕ್ಷೇಪಣೆ ಸಲ್ಲಿಕೆಯ ಗಡುವು ವಿಸ್ತರಿಸಿದರೆ ಇಡೀ ಎಸ್ಐಆರ್ ಪ್ರಕ್ರಿಯೆ ಮತ್ತು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸುವುದಕ್ಕೆ ಅಡ್ಡಿಯಾಗಲಿದೆ’ ಎಂದು ವಾದಿಸಿದರು. </p>.<p>‘ನಿಯಮಗಳ ಪ್ರಕಾರವೇ ಕಾಲಮಿತಿ ನಿಗದಿಪಡಿಸಲಾಗಿದೆ. ಮತದಾರರಿಗೆ ಆಗ್ರಹ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಗರಿಷ್ಠ ಮೂವತ್ತು ದಿನಗಳ ಕಾಲಾವಕಾಶ ನೀಡಲಾಗಿದೆ’ ಎಂದರು. </p>.<p>ಎಸ್ಐಆರ್ಅನ್ನು ‘ಮುಂದುವರಿದುಕೊಂಡು ಹೋಗುವ ಪ್ರಕ್ರಿಯೆ’ ಎಂದು ಹೇಳಿರುವ ಅಯೋಗ, ಅಪೂರ್ಣ ದಾಖಲೆಗಳನ್ನು ನೀಡಿರುವ ಮತದಾರರಿಗೆ ಏಳು ದಿನಗಳಲ್ಲಿ ನೋಟಿಸ್ ಕಳುಹಿಸಲಾಗುವುದು ಎಂದಿದೆ. ರಾಜಕೀಯ ಪಕ್ಷಗಳು ಸಲ್ಲಿಸಿರುವ ಆಕ್ಷೇಪಣೆಗಳಲ್ಲಿ ಹೆಚ್ಚಿನವು ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವುದಕ್ಕೆ ಸಂಬಂಧಿಸಿದ್ದಾಗಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>