<p><strong>ನವದೆಹಲಿ</strong>: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ವಿರೋಧ ಪಕ್ಷಗಳು ದ್ವಿಮುಖ ನೀತಿ ಪ್ರದರ್ಶಿಸುತ್ತಿವೆ ಎಂದು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಟೀಕಿಸಿದ್ದಾರೆ. ಇದಕ್ಕೆ ಜೆಡಿಯು ಧ್ವನಿಗೂಡಿಸಿದೆ.</p>.<p>ಮತದಾರರ ಪಟ್ಟಿಯ ಪರಿಷ್ಕರಣೆಗೆ ಹಿಂದೆ ಆಗ್ರಹಿಸಿದ್ದ ವಿರೋಧ ಪಕ್ಷಗಳು ಈಗ ಪರಿಷ್ಕರಣಾ ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆಯುವ ಸಂಬಂಧ ಚುನಾವಣಾ ಆಯೋಗ ಕೈಗೊಂಡಿರುವ ಈ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ಯಸಭೆಯ ಜೆಡಿಯು ಸದಸ್ಯ ಸಂಜಯ್ ಕುಮಾರ್ ಝಾ ಪ್ರತಿಪಾದಿಸಿದ್ದಾರೆ. </p>.<p>ಬಿಹಾರದಲ್ಲಿ 22 ವರ್ಷಗಳ ಬಳಿಕ ಚುನಾವಣಾ ಆಯೋಗವು ಎಸ್ಐಆರ್ ಕೈಗೆತ್ತಿಕೊಂಡಿದೆ. ಈ ಮೂಲಕ ಅದು ಅನರ್ಹ ಮತ್ತು ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವವರನ್ನು ಗುರುತಿಸಲಿದೆ. ಅಲ್ಲದೆ ಅರ್ಹ ಮತದಾರರು ಮಾತ್ರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.</p>.<p>‘ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ಬಳಿಕ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಗೋಚರವಾಗಿದ್ದವು ಎಂದು ವಿರೋಧ ಪಕ್ಷಗಳು ಹೇಳಿದ್ದವು. ಅಲ್ಲದೆ ರಾತ್ರೋರಾತ್ರಿ ಹಲವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದವು ಎಂದೂ ಆರೋಪಿಸಿದ್ದವು. ಆ ರೀತಿ ಬಿಹಾರದಲ್ಲಿ ಆಗಬಾರದು ಎಂದು ಚುನಾವಣಾ ಆಯೋಗ ಎಸ್ಐಆರ್ ಕೈಗೊಂಡಿದೆ. ಆದರೆ ಅದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತಿವೆ’ ಎಂದು ಚಿರಾಗ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ವಿರೋಧ ಪಕ್ಷಗಳು ದ್ವಿಮುಖ ನೀತಿ ಪ್ರದರ್ಶಿಸುತ್ತಿವೆ ಎಂದು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಟೀಕಿಸಿದ್ದಾರೆ. ಇದಕ್ಕೆ ಜೆಡಿಯು ಧ್ವನಿಗೂಡಿಸಿದೆ.</p>.<p>ಮತದಾರರ ಪಟ್ಟಿಯ ಪರಿಷ್ಕರಣೆಗೆ ಹಿಂದೆ ಆಗ್ರಹಿಸಿದ್ದ ವಿರೋಧ ಪಕ್ಷಗಳು ಈಗ ಪರಿಷ್ಕರಣಾ ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆಯುವ ಸಂಬಂಧ ಚುನಾವಣಾ ಆಯೋಗ ಕೈಗೊಂಡಿರುವ ಈ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ಯಸಭೆಯ ಜೆಡಿಯು ಸದಸ್ಯ ಸಂಜಯ್ ಕುಮಾರ್ ಝಾ ಪ್ರತಿಪಾದಿಸಿದ್ದಾರೆ. </p>.<p>ಬಿಹಾರದಲ್ಲಿ 22 ವರ್ಷಗಳ ಬಳಿಕ ಚುನಾವಣಾ ಆಯೋಗವು ಎಸ್ಐಆರ್ ಕೈಗೆತ್ತಿಕೊಂಡಿದೆ. ಈ ಮೂಲಕ ಅದು ಅನರ್ಹ ಮತ್ತು ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವವರನ್ನು ಗುರುತಿಸಲಿದೆ. ಅಲ್ಲದೆ ಅರ್ಹ ಮತದಾರರು ಮಾತ್ರ ಪಟ್ಟಿಯಲ್ಲಿ ಇರುವಂತೆ ನೋಡಿಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.</p>.<p>‘ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ಬಳಿಕ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಗೋಚರವಾಗಿದ್ದವು ಎಂದು ವಿರೋಧ ಪಕ್ಷಗಳು ಹೇಳಿದ್ದವು. ಅಲ್ಲದೆ ರಾತ್ರೋರಾತ್ರಿ ಹಲವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದವು ಎಂದೂ ಆರೋಪಿಸಿದ್ದವು. ಆ ರೀತಿ ಬಿಹಾರದಲ್ಲಿ ಆಗಬಾರದು ಎಂದು ಚುನಾವಣಾ ಆಯೋಗ ಎಸ್ಐಆರ್ ಕೈಗೊಂಡಿದೆ. ಆದರೆ ಅದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುವ ಮೂಲಕ ಇಬ್ಬಗೆ ನೀತಿ ಅನುಸರಿಸುತ್ತಿವೆ’ ಎಂದು ಚಿರಾಗ್ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>