<p><strong>ನವದೆಹಲಿ:</strong> ಬಿಹಾರದಲ್ಲಿ ನಡೆಸಲಾದ ವಿಶೇಷ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವಿರೋಧಿಸಿ ವಿರೋಧ ಪಕ್ಷಗಳು ಸದನದಲ್ಲಿ ಪ್ರತಿಭಟಿಸಿದ ಕಾರಣ ರಾಜ್ಯಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. </p><p>ಸೋಮವಾರ ಬೆಳಿಗ್ಗೆ ಎರಡು ಬಾರಿ ಕಲಾಪವನ್ನು ಮುಂದೂಡಲಾಗಿತ್ತು. ಕಲಾಪ ಆರಂಭವಾದ ಕೆಲವೇ ಸಮಯದಲ್ಲಿ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರವೂ ವಿರೋಧ ಪಕ್ಷಗಳ ಸಂಸದರು ಬಿಹಾರದ ಎಸ್ಐಆರ್ ಕುರಿತು ಚರ್ಚಿಸಲು ಒತ್ತಾಯಿಸಿದಾಗ ಮಧ್ಯಾಹ್ನ 2 ಗಂಟೆಯವರೆಗೂ ಕಲಾಪವನ್ನು ಮತ್ತೆ ಮುಂದೂಡಲಾಗಿತ್ತು. </p><p>ಮಧ್ಯಾಹ್ನ 2 ಗಂಟೆಯ ನಂತರ ಕಲಾಪದಲ್ಲಿ, ಸಮುದ್ರದ ಮೂಲಕ ಸರಕುಗಳ ಸಾಗಣೆ – 2025 ವಿಧೇಯಕದ ಕುರಿತು ಚರ್ಚಿಸಲು ರಾಜ್ಯಸಭಾ ಸ್ಪೀಕರ್ ಹರಿವಂಶ್ ನಾರಾಯಣ ಸಿಂಗ್ ಅವರು ಮನವಿ ಮಾಡಿದರು. ಆ ವೇಳೆಯೂ ವಿರೋಧ ಪಕ್ಷಗಳ ಸಂಸದರು ಎಸ್ಐಆರ್ ಕುರಿತು ಚರ್ಚಿಸಲು ಒತ್ತಾಯಿಸಿ, ಸದನದ ಬಾವಿಗೆ ಇಳಿದು ಪ್ರತಿಭಟಿಸಿದ ಕಾರಣ ರಾಜ್ಯಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.</p><p>ಲೋಕಸಭೆಯಲ್ಲಿ ಕೂಡ ವಿರೋಧ ಪಕ್ಷಗಳು ಎಸ್ಐಆರ್ ಕುರಿತು ಚರ್ಚಿಸಲು ಒತ್ತಾಯಿಸಿ, ಪ್ರತಿಭಟಿಸಿದ ಕಾರಣ ಕಲಾಪವನ್ನು ಮಧ್ಯಾಹ್ನದವರೆಗೂ ಮಂದೂಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ನಡೆಸಲಾದ ವಿಶೇಷ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವಿರೋಧಿಸಿ ವಿರೋಧ ಪಕ್ಷಗಳು ಸದನದಲ್ಲಿ ಪ್ರತಿಭಟಿಸಿದ ಕಾರಣ ರಾಜ್ಯಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. </p><p>ಸೋಮವಾರ ಬೆಳಿಗ್ಗೆ ಎರಡು ಬಾರಿ ಕಲಾಪವನ್ನು ಮುಂದೂಡಲಾಗಿತ್ತು. ಕಲಾಪ ಆರಂಭವಾದ ಕೆಲವೇ ಸಮಯದಲ್ಲಿ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರವೂ ವಿರೋಧ ಪಕ್ಷಗಳ ಸಂಸದರು ಬಿಹಾರದ ಎಸ್ಐಆರ್ ಕುರಿತು ಚರ್ಚಿಸಲು ಒತ್ತಾಯಿಸಿದಾಗ ಮಧ್ಯಾಹ್ನ 2 ಗಂಟೆಯವರೆಗೂ ಕಲಾಪವನ್ನು ಮತ್ತೆ ಮುಂದೂಡಲಾಗಿತ್ತು. </p><p>ಮಧ್ಯಾಹ್ನ 2 ಗಂಟೆಯ ನಂತರ ಕಲಾಪದಲ್ಲಿ, ಸಮುದ್ರದ ಮೂಲಕ ಸರಕುಗಳ ಸಾಗಣೆ – 2025 ವಿಧೇಯಕದ ಕುರಿತು ಚರ್ಚಿಸಲು ರಾಜ್ಯಸಭಾ ಸ್ಪೀಕರ್ ಹರಿವಂಶ್ ನಾರಾಯಣ ಸಿಂಗ್ ಅವರು ಮನವಿ ಮಾಡಿದರು. ಆ ವೇಳೆಯೂ ವಿರೋಧ ಪಕ್ಷಗಳ ಸಂಸದರು ಎಸ್ಐಆರ್ ಕುರಿತು ಚರ್ಚಿಸಲು ಒತ್ತಾಯಿಸಿ, ಸದನದ ಬಾವಿಗೆ ಇಳಿದು ಪ್ರತಿಭಟಿಸಿದ ಕಾರಣ ರಾಜ್ಯಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.</p><p>ಲೋಕಸಭೆಯಲ್ಲಿ ಕೂಡ ವಿರೋಧ ಪಕ್ಷಗಳು ಎಸ್ಐಆರ್ ಕುರಿತು ಚರ್ಚಿಸಲು ಒತ್ತಾಯಿಸಿ, ಪ್ರತಿಭಟಿಸಿದ ಕಾರಣ ಕಲಾಪವನ್ನು ಮಧ್ಯಾಹ್ನದವರೆಗೂ ಮಂದೂಡಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>