<p><strong>ನವದೆಹಲಿ:</strong> ಬಿಹಾರದಲ್ಲಿ ನಡೆಸಿದ್ದ ‘ವಿಶೇಷ ಸಮಗ್ರ ಪರಿಷ್ಕರಣೆ’(ಎಸ್ಐಆರ್) ಬಳಿಕ ಸಿದ್ಧಪಡಿಸಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ ಎಂದು ವಿರೋಧ ಪಕ್ಷಗಳು ಶನಿವಾರ ಟೀಕಿಸಿವೆ.</p>.<p>‘ಚುನಾವಣಾ ಆಯೋಗವು ಬಿಜೆಪಿ ಆಣತಿಯಂತೆಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಸಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>‘ಮತದಾರರ ಪಟ್ಟಿಗೆ ಸೇರಿಸಲಾದ ಮತ್ತು ಪಟ್ಟಿಯಿಂದ ತೆಗೆದು ಹಾಕಲಾದ ಮತದಾರರ ಹೆಸರುಗಳನ್ನು ಹಾಗೂ ತೆಗೆದು ಹಾಕುವುದಕ್ಕೆ ನೀಡಿರುವ ಕಾರಣಗಳನ್ನು ತಿಳಿಸಬೇಕು’ ಎಂದು ಸಿಪಿಐ(ಎಂಎಲ್)ಎಲ್ ಆಗ್ರಹಿಸಿದೆ.</p>.<p>ಬಿಹಾರ ವಿಧಾನಸಭೆ ಚುನಾವಣೆಗಾಗಿ ಕೈಗೊಂಡಿರುವ ಸಿದ್ಧತೆಗಳ ಕುರಿತಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಪರಿಶೀಲನೆ ಆರಂಭಿಸಿದ ದಿನವೇ, ಅವರಿಗೆ ತಮ್ಮ ಬೇಡಿಕೆಗಳನ್ನು ಒಳಗೊಂಡ ಪತ್ರವೊಂದನ್ನು ಸಿಪಿಐ(ಎಂಎಲ್) ಸಲ್ಲಿಸಿದೆ.</p>.<p>ಮತದಾರರ ಪಟ್ಟಿಯ ಕರಡುವಿನಿಂದ 3.66 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದ್ದು, ಈ ಕ್ರಮಕ್ಕೆ ಕಾರಣ ಸಹಿತ ಮಾಹಿತಿ ನೀಡುವಂತೆ ಸಿಪಿಐ(ಎಂಎಲ್) ಮುಖಂಡರು ಪತ್ರದಲ್ಲಿ ಕೋರಿದ್ದಾರೆ.</p>.<p>ಅಂದಾಜು 21.53 ಲಕ್ಷ ಹೊಸ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲಾಗಿದೆ. ಆಕ್ಷೇಪಣೆ ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಕೆಲ ಹಳೆಯ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ, ಈ ರೀತಿ ಸೇರಿಸಲಾದ ಮತದಾರರ ಹೆಸರುಗಳಿಗೆ ಸಂಬಂಧಿಸಿ, ಮತಗಟ್ಟೆವಾರು ವಿವರಗಳನ್ನು ನೀಡಬೇಕು ಎಂದೂ ಕೋರಿದ್ದಾರೆ.</p>.<h2>ವಿಪಕ್ಷಗಳ ಆರೋಪ–ಬೇಡಿಕೆಗಳು </h2><p>* ವಿದೇಶಿಯರು ಎಂಬ ಕಾರಣ ನೀಡಿ 6 ಸಾವಿರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಮತದಾರರ ಹೆಸರು ಹಾಗೂ ಅವರ ಪೌರತ್ವದ ಬಗ್ಗೆ ಶಂಕೆ ವ್ಯಕ್ತಪಡಿಸಲು ಕಾರಣವಾದ ಅಂಶಗಳನ್ನು ತಿಳಿಸಬೇಕು </p><p>* ಮುಸ್ಲಿಂ ದಲಿತರು ಅಥವಾ ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಸೇರಿದ ಹಿರಿಯ ಅಧಿಕಾರಿಗಳನ್ನು ನಿರ್ಲಕ್ಷಿಸಲಾಗಿದೆ ಹಾಗೂ ಅವರ ಬದಲಾಗಿ ಪ್ರಬಲ ಜಾತಿಗಳ ಅಧಿಕಾರಿಗಳನ್ನು ಎಸ್ಐಆರ್ ಕಾರ್ಯಕ್ಕೆ ಬಳಸಲಾಗಿದೆ ಎಂಬ ಆರೋಪಗಳಿವೆ. ಈ ಕುರಿತು ತನಿಖೆ ನಡೆಸಬೇಕು </p><p>* ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾದ ಮತದಾರರ ಸಂಖ್ಯೆಯು ಅದೇ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿನ ಜಯದ ಅಂತರಕ್ಕಿಂತ ಹೆಚ್ಚು ಇರುವುದು ಆತಂಕಕಾರಿ. ಹೀಗಾಗಿ ಬಿಜೆಪಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಪಟ್ಟಿಯನ್ನು ತರಾತುರಿಯಲ್ಲಿ ಅಂತಿಮಗೊಳಿಸುವ ಬದಲು ನಿಷ್ಪಕ್ಷಪಾತವಾಗಿ ಆಯೋಗ ಕಾರ್ಯ ನಿರ್ವಹಿಸಬೇಕು</p>.<div><blockquote>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಎಸ್ಐಆರ್ ಕೈಗೊಂಡಿರುವುದು ಖಚಿತವಾಗಿದೆ. ಹೀಗಾಗಿ ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲಾಗುವುದು ಎಂಬ ಚುನಾವಣಾ ಆಯೋಗದ ಹೇಳಿಕೆ ಸುಳ್ಳು ಎಂಬುದು ಸಾಬೀತಾಗಿದೆ.</blockquote><span class="attribution">-ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ನಡೆಸಿದ್ದ ‘ವಿಶೇಷ ಸಮಗ್ರ ಪರಿಷ್ಕರಣೆ’(ಎಸ್ಐಆರ್) ಬಳಿಕ ಸಿದ್ಧಪಡಿಸಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ ಎಂದು ವಿರೋಧ ಪಕ್ಷಗಳು ಶನಿವಾರ ಟೀಕಿಸಿವೆ.</p>.<p>‘ಚುನಾವಣಾ ಆಯೋಗವು ಬಿಜೆಪಿ ಆಣತಿಯಂತೆಯೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಸಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>‘ಮತದಾರರ ಪಟ್ಟಿಗೆ ಸೇರಿಸಲಾದ ಮತ್ತು ಪಟ್ಟಿಯಿಂದ ತೆಗೆದು ಹಾಕಲಾದ ಮತದಾರರ ಹೆಸರುಗಳನ್ನು ಹಾಗೂ ತೆಗೆದು ಹಾಕುವುದಕ್ಕೆ ನೀಡಿರುವ ಕಾರಣಗಳನ್ನು ತಿಳಿಸಬೇಕು’ ಎಂದು ಸಿಪಿಐ(ಎಂಎಲ್)ಎಲ್ ಆಗ್ರಹಿಸಿದೆ.</p>.<p>ಬಿಹಾರ ವಿಧಾನಸಭೆ ಚುನಾವಣೆಗಾಗಿ ಕೈಗೊಂಡಿರುವ ಸಿದ್ಧತೆಗಳ ಕುರಿತಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಪರಿಶೀಲನೆ ಆರಂಭಿಸಿದ ದಿನವೇ, ಅವರಿಗೆ ತಮ್ಮ ಬೇಡಿಕೆಗಳನ್ನು ಒಳಗೊಂಡ ಪತ್ರವೊಂದನ್ನು ಸಿಪಿಐ(ಎಂಎಲ್) ಸಲ್ಲಿಸಿದೆ.</p>.<p>ಮತದಾರರ ಪಟ್ಟಿಯ ಕರಡುವಿನಿಂದ 3.66 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದ್ದು, ಈ ಕ್ರಮಕ್ಕೆ ಕಾರಣ ಸಹಿತ ಮಾಹಿತಿ ನೀಡುವಂತೆ ಸಿಪಿಐ(ಎಂಎಲ್) ಮುಖಂಡರು ಪತ್ರದಲ್ಲಿ ಕೋರಿದ್ದಾರೆ.</p>.<p>ಅಂದಾಜು 21.53 ಲಕ್ಷ ಹೊಸ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲಾಗಿದೆ. ಆಕ್ಷೇಪಣೆ ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಕೆಲ ಹಳೆಯ ಮತದಾರರ ಹೆಸರುಗಳನ್ನು ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ, ಈ ರೀತಿ ಸೇರಿಸಲಾದ ಮತದಾರರ ಹೆಸರುಗಳಿಗೆ ಸಂಬಂಧಿಸಿ, ಮತಗಟ್ಟೆವಾರು ವಿವರಗಳನ್ನು ನೀಡಬೇಕು ಎಂದೂ ಕೋರಿದ್ದಾರೆ.</p>.<h2>ವಿಪಕ್ಷಗಳ ಆರೋಪ–ಬೇಡಿಕೆಗಳು </h2><p>* ವಿದೇಶಿಯರು ಎಂಬ ಕಾರಣ ನೀಡಿ 6 ಸಾವಿರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಮತದಾರರ ಹೆಸರು ಹಾಗೂ ಅವರ ಪೌರತ್ವದ ಬಗ್ಗೆ ಶಂಕೆ ವ್ಯಕ್ತಪಡಿಸಲು ಕಾರಣವಾದ ಅಂಶಗಳನ್ನು ತಿಳಿಸಬೇಕು </p><p>* ಮುಸ್ಲಿಂ ದಲಿತರು ಅಥವಾ ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಸೇರಿದ ಹಿರಿಯ ಅಧಿಕಾರಿಗಳನ್ನು ನಿರ್ಲಕ್ಷಿಸಲಾಗಿದೆ ಹಾಗೂ ಅವರ ಬದಲಾಗಿ ಪ್ರಬಲ ಜಾತಿಗಳ ಅಧಿಕಾರಿಗಳನ್ನು ಎಸ್ಐಆರ್ ಕಾರ್ಯಕ್ಕೆ ಬಳಸಲಾಗಿದೆ ಎಂಬ ಆರೋಪಗಳಿವೆ. ಈ ಕುರಿತು ತನಿಖೆ ನಡೆಸಬೇಕು </p><p>* ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಿಂದ ಕೈಬಿಡಲಾದ ಮತದಾರರ ಸಂಖ್ಯೆಯು ಅದೇ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿನ ಜಯದ ಅಂತರಕ್ಕಿಂತ ಹೆಚ್ಚು ಇರುವುದು ಆತಂಕಕಾರಿ. ಹೀಗಾಗಿ ಬಿಜೆಪಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಪಟ್ಟಿಯನ್ನು ತರಾತುರಿಯಲ್ಲಿ ಅಂತಿಮಗೊಳಿಸುವ ಬದಲು ನಿಷ್ಪಕ್ಷಪಾತವಾಗಿ ಆಯೋಗ ಕಾರ್ಯ ನಿರ್ವಹಿಸಬೇಕು</p>.<div><blockquote>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಎಸ್ಐಆರ್ ಕೈಗೊಂಡಿರುವುದು ಖಚಿತವಾಗಿದೆ. ಹೀಗಾಗಿ ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲಾಗುವುದು ಎಂಬ ಚುನಾವಣಾ ಆಯೋಗದ ಹೇಳಿಕೆ ಸುಳ್ಳು ಎಂಬುದು ಸಾಬೀತಾಗಿದೆ.</blockquote><span class="attribution">-ಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>