<p><strong>ಪಟ್ನಾ:</strong> ‘ದೇಶವು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಮಿಂದೆದ್ದರೆ, ಬಿಹಾರಿಗರು ಮಾತ್ರ ತಮ್ಮ ಮತ ರಕ್ಷಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ’ ಎಂದು ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಕಟಕಿಯಾಡಿದ್ದಾರೆ.</p>.<p>ರಾಹುಲ್ ಗಾಂಧಿ ಸಾರಥ್ಯದಲ್ಲಿ ಆ. 17ರಂದು ಆರಂಭಗೊಳ್ಳಲಿರುವ ‘ಮತದಾತ ಅಧಿಕಾರ (ಮತದಾರರ ಹಕ್ಕು) ಯಾತ್ರೆ’ಯಲ್ಲಿ ಭಾಗಿಯಾಗುವಂತೆ ಬಿಹಾರಿಗರಿಗೆ ಮನವಿ ಮಾಡುವ ಬಹಿರಂಗ ಪತ್ರವನ್ನು ಬಿಡುಗಡೆ ಮಾಡಿ, ಅವರು ಮಾತನಾಡಿದರು.</p>.<p>‘ನಾವು ನಮ್ಮ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳದಿದ್ದರೆ ಬಿಜೆಪಿ ಪ್ರಾಯೋಜಿತ ಸಂಚುಕೋರರು ಬಡವರ ಮತದಾನದ ಹಕ್ಕನ್ನು ಕಸಿದುಕೊಂಡು ಬಿಹಾರದಲ್ಲಿ ದಬ್ಬಾಳಿಕೆಯ, ಊಳಿಗಮಾನ್ಯ ಆಡಳಿತವನ್ನು ಪುನಃ ಸ್ಥಾಪಿಸುತ್ತಾರೆ’ ಎಂದು ಹೇಳಿದರು.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿನ (ಎಸ್ಐಆರ್) ಲೋಪದೋಷಗಳನ್ನು ಉಲ್ಲೇಖಿಸಿದ ಅವರು, ‘ಸತ್ತವರ ಬದಲಿಗೆ ಜೀವಂತವಾಗಿರುವವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ’ ಎಂದು ದೂರಿದರು.</p>.<p>‘ಬಡವರು ತಮ್ಮ ಒಂದು ಮತದ ಹಕ್ಕಿಗಾಗಿ ಹೋರಾಡಬೇಕಾಗಿದ್ದರೆ, ಆಡಳಿತಾರೂಢರ ಬೆಂಬಲಿಗರು ಎರಡು ಮತಗಳನ್ನು ಚಲಾಯಿಸುವ ಹಕ್ಕನ್ನು ಹೊಂದಲು ಅವಕಾಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ‘ದೇಶವು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಮಿಂದೆದ್ದರೆ, ಬಿಹಾರಿಗರು ಮಾತ್ರ ತಮ್ಮ ಮತ ರಕ್ಷಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ’ ಎಂದು ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಕಟಕಿಯಾಡಿದ್ದಾರೆ.</p>.<p>ರಾಹುಲ್ ಗಾಂಧಿ ಸಾರಥ್ಯದಲ್ಲಿ ಆ. 17ರಂದು ಆರಂಭಗೊಳ್ಳಲಿರುವ ‘ಮತದಾತ ಅಧಿಕಾರ (ಮತದಾರರ ಹಕ್ಕು) ಯಾತ್ರೆ’ಯಲ್ಲಿ ಭಾಗಿಯಾಗುವಂತೆ ಬಿಹಾರಿಗರಿಗೆ ಮನವಿ ಮಾಡುವ ಬಹಿರಂಗ ಪತ್ರವನ್ನು ಬಿಡುಗಡೆ ಮಾಡಿ, ಅವರು ಮಾತನಾಡಿದರು.</p>.<p>‘ನಾವು ನಮ್ಮ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳದಿದ್ದರೆ ಬಿಜೆಪಿ ಪ್ರಾಯೋಜಿತ ಸಂಚುಕೋರರು ಬಡವರ ಮತದಾನದ ಹಕ್ಕನ್ನು ಕಸಿದುಕೊಂಡು ಬಿಹಾರದಲ್ಲಿ ದಬ್ಬಾಳಿಕೆಯ, ಊಳಿಗಮಾನ್ಯ ಆಡಳಿತವನ್ನು ಪುನಃ ಸ್ಥಾಪಿಸುತ್ತಾರೆ’ ಎಂದು ಹೇಳಿದರು.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿನ (ಎಸ್ಐಆರ್) ಲೋಪದೋಷಗಳನ್ನು ಉಲ್ಲೇಖಿಸಿದ ಅವರು, ‘ಸತ್ತವರ ಬದಲಿಗೆ ಜೀವಂತವಾಗಿರುವವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ’ ಎಂದು ದೂರಿದರು.</p>.<p>‘ಬಡವರು ತಮ್ಮ ಒಂದು ಮತದ ಹಕ್ಕಿಗಾಗಿ ಹೋರಾಡಬೇಕಾಗಿದ್ದರೆ, ಆಡಳಿತಾರೂಢರ ಬೆಂಬಲಿಗರು ಎರಡು ಮತಗಳನ್ನು ಚಲಾಯಿಸುವ ಹಕ್ಕನ್ನು ಹೊಂದಲು ಅವಕಾಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>