<p><strong>ಪೂರ್ಣಿಯಾ:</strong> ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಪೊದೆಯೊಂದರಲ್ಲಿ ಹಾಕಿ ಸಜೀವ ದಹನ ಮಾಡಲಾಗಿದ್ದು, ಪೊಲೀಸರು ಮಾಟಮಂತ್ರದ ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಸೋಮವಾರ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳಿಗೆ ಶೋಧ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಟೆಟ್ಮಾ ಗ್ರಾಮದಲ್ಲಿ ಭಾನುವಾರ ರಾತ್ರಿ ಮಾಟ–ಮಂತ್ರದ ಆಚರಣೆಗಾಗಿ ಐವರನ್ನೂ ಕೊಲೆ ಮಾಡಿ ಆನಂತರ ಪೊದೆಯೊಂದರಲ್ಲಿ ಹಾಕಿ ಸುಟ್ಟಿರಬಹುದು ಎಂದು ಡಿಐಜಿ ಪ್ರಮೋದ್ ಕುಮಾರ್ ಮಂಡಲ್ ತಿಳಿಸಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಬಾಲಕ ಸೋನುಕುಮಾರ್ ಎಂಬಾತ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೊಲೆ ಮಾಡಿದ್ದಾರೆ ಎನ್ನಲಾದವರೂ ಅದೇ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ. ವಿಧಿವಿಜ್ಞಾನ ತಜ್ಞರ ತಂಡ ಸ್ಥಳ ಪರಿಶೀಲನೆ ಮಾಡಿದೆ.</p>.<p>ಘಟನೆಗೆ ಆರ್ಜೆಡಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಆಘಾತ ವ್ಯಕ್ತಪಡಿಸಿ, ಇದು ಕಾನೂನು ಸುವ್ಯವಸ್ಥೆ ಕುಸಿತಕ್ಕೆ ಸಾಕ್ಷಿ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೂರ್ಣಿಯಾ:</strong> ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಐವರನ್ನು ಪೊದೆಯೊಂದರಲ್ಲಿ ಹಾಕಿ ಸಜೀವ ದಹನ ಮಾಡಲಾಗಿದ್ದು, ಪೊಲೀಸರು ಮಾಟಮಂತ್ರದ ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಸೋಮವಾರ ಪ್ರಕರಣ ಬೆಳಕಿಗೆ ಬಂದಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳಿಗೆ ಶೋಧ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಟೆಟ್ಮಾ ಗ್ರಾಮದಲ್ಲಿ ಭಾನುವಾರ ರಾತ್ರಿ ಮಾಟ–ಮಂತ್ರದ ಆಚರಣೆಗಾಗಿ ಐವರನ್ನೂ ಕೊಲೆ ಮಾಡಿ ಆನಂತರ ಪೊದೆಯೊಂದರಲ್ಲಿ ಹಾಕಿ ಸುಟ್ಟಿರಬಹುದು ಎಂದು ಡಿಐಜಿ ಪ್ರಮೋದ್ ಕುಮಾರ್ ಮಂಡಲ್ ತಿಳಿಸಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಬಾಲಕ ಸೋನುಕುಮಾರ್ ಎಂಬಾತ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೊಲೆ ಮಾಡಿದ್ದಾರೆ ಎನ್ನಲಾದವರೂ ಅದೇ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ. ವಿಧಿವಿಜ್ಞಾನ ತಜ್ಞರ ತಂಡ ಸ್ಥಳ ಪರಿಶೀಲನೆ ಮಾಡಿದೆ.</p>.<p>ಘಟನೆಗೆ ಆರ್ಜೆಡಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಆಘಾತ ವ್ಯಕ್ತಪಡಿಸಿ, ಇದು ಕಾನೂನು ಸುವ್ಯವಸ್ಥೆ ಕುಸಿತಕ್ಕೆ ಸಾಕ್ಷಿ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>