‘ವಾರಸುದಾರರು ಇಲ್ಲದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಂತರ ಹೂಳಲಾಗುತ್ತದೆ. ಅಸ್ಥಿಪಂಜರದ ಭಾಗಗಳು ಸಹ ಶವಗಳನ್ನು ಹೂಳುವ ಸ್ಥಳದಲ್ಲಿಯೇ ದೊರೆತಿವೆ. ಮರಣೋತ್ತರ ಪರೀಕ್ಷೆ ವಿಭಾಗವು ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರ ನಿಯಂತ್ರಣದಲ್ಲಿದೆ. ಹೀಗಾಗಿ ಸಮಿತಿಯೊಂದನ್ನು ರಚಿಸಿ, ತನಿಖೆ ನಡೆಸುವಂತೆ ಪ್ರಾಂಶುಪಾಲರಿಗೆ ತಿಳಿಸಿದ್ದೇನೆ’ ಎಂದು ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಸುನೀಲ್ಕುಮಾರ್ ಶಾಹಿ ಹೇಳಿದ್ದಾರೆ.