<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಎನ್ಕೌಂಟರ್ಗಳಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ.</p><p>ನಕ್ಸಲ್ ಸಂಘಟನೆಯ ಉನ್ನತ ನಾಯಕರಾದ ತೆಲಂಗಾಣ ರಾಜ್ಯ ಸಮಿತಿಯ ವಿಶೇಷ ವಲಯ ಸಮಿತಿ ಸದಸ್ಯ ಭಾಸ್ಕರ್ ಹಾಗೂ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ನರಸಿಂಹ ಚಲಂ ಅಲಿಯಾಸ್ ಸುಧಾಕರ್ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಭಾಸ್ಕರ್ ಸುಳಿವು ನೀಡಿದವರಿಗೆ ₹45 ಲಕ್ಷ ಬಹುಮಾನವನ್ನು ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ಘೋಷಿಸಲಾಗಿತ್ತು. ಚಲಂ ಸುಳಿವು ನೀಡಿದವರಿಗೆ ಛತ್ತೀಸಗಢ ಸರ್ಕಾರ ₹40 ಲಕ್ಷ ಬಹುಮಾನವನ್ನು ಘೋಷಿಸಿತ್ತು.</p><p>ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಜೂನ್ 4ರಿಂದ ಕಾರ್ಯಾಚರಣೆ ನಡೆದಿದೆ. ಎರಡು ಎಕೆ–47 ರೈಫಲ್ಗಳು ಸೇರಿದಂತೆ ಅಪಾರ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p><p>ಮೃತಪಟ್ಟ ನಕ್ಸಲರಲ್ಲಿ ಇಬ್ಬರು ಮಹಿಳೆಯರ ಶವ ದೊರೆತಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಭದ್ರತಾ ಸಿಬ್ಬಂದಿಗಳು ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಮಾಜಿ ನಕ್ಸಲ್ರ ಮನದಾಳದ ಮಾತುಗಳು....ಶಸ್ತ್ರಾಸ್ತ್ರಗಳಿಂದ ಬದಲಾವಣೆ ಅಸಾಧ್ಯ: ನಕ್ಸಲ್ ಹಿಂಸಾಚಾರದ ಕುರಿತು ಶಾ ಹೇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಜಾಪುರ:</strong> ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಎನ್ಕೌಂಟರ್ಗಳಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ.</p><p>ನಕ್ಸಲ್ ಸಂಘಟನೆಯ ಉನ್ನತ ನಾಯಕರಾದ ತೆಲಂಗಾಣ ರಾಜ್ಯ ಸಮಿತಿಯ ವಿಶೇಷ ವಲಯ ಸಮಿತಿ ಸದಸ್ಯ ಭಾಸ್ಕರ್ ಹಾಗೂ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ನರಸಿಂಹ ಚಲಂ ಅಲಿಯಾಸ್ ಸುಧಾಕರ್ ಹತ್ಯೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಭಾಸ್ಕರ್ ಸುಳಿವು ನೀಡಿದವರಿಗೆ ₹45 ಲಕ್ಷ ಬಹುಮಾನವನ್ನು ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ಘೋಷಿಸಲಾಗಿತ್ತು. ಚಲಂ ಸುಳಿವು ನೀಡಿದವರಿಗೆ ಛತ್ತೀಸಗಢ ಸರ್ಕಾರ ₹40 ಲಕ್ಷ ಬಹುಮಾನವನ್ನು ಘೋಷಿಸಿತ್ತು.</p><p>ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಜೂನ್ 4ರಿಂದ ಕಾರ್ಯಾಚರಣೆ ನಡೆದಿದೆ. ಎರಡು ಎಕೆ–47 ರೈಫಲ್ಗಳು ಸೇರಿದಂತೆ ಅಪಾರ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p><p>ಮೃತಪಟ್ಟ ನಕ್ಸಲರಲ್ಲಿ ಇಬ್ಬರು ಮಹಿಳೆಯರ ಶವ ದೊರೆತಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಭದ್ರತಾ ಸಿಬ್ಬಂದಿಗಳು ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಮಾಜಿ ನಕ್ಸಲ್ರ ಮನದಾಳದ ಮಾತುಗಳು....ಶಸ್ತ್ರಾಸ್ತ್ರಗಳಿಂದ ಬದಲಾವಣೆ ಅಸಾಧ್ಯ: ನಕ್ಸಲ್ ಹಿಂಸಾಚಾರದ ಕುರಿತು ಶಾ ಹೇಳಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>