<p><strong>ಭುವನೇಶ್ವರ (ಪಿಟಿಐ):</strong> ‘ಬಿಜು ಪಟ್ನಾಯಕ್ ಕ್ರೀಡಾ ಪ್ರಶಸ್ತಿಯ ಹೆಸರನ್ನು ಮರುನಾಮಕರಣ ಮಾಡುವುದಿಲ್ಲ’ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ತಿಳಿಸಿದ್ದಾರೆ.</p>.<p>ರಾಜ್ಯದ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಯು ಶುಕ್ರವಾರ ಪ್ರಶಸ್ತಿಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಪ್ರಶಸ್ತಿಯ ಹೆಸರನ್ನು ‘ರಾಜ್ಯ ಕ್ರೀಡಾ ಸಮ್ಮಾನ್’ ಎಂದು ಮರುನಾಮಕರಣ ಮಾಡಿತ್ತು. ಅದಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.</p>.<p>‘ರಾಜ್ಯ ಮತ್ತು ದೇಶಕ್ಕೆ ಬಿಜು ಪಟ್ನಾಯಕ್ ಅವರ ಕೊಡುಗೆ ಸ್ಮರಣೀಯವಾಗಿದೆ. ನನ್ನ ಸರ್ಕಾರವು ಮಣ್ಣಿನ ಮಕ್ಕಳನ್ನು ಗೌರವಿಸುತ್ತದೆ. ಹಾಗಾಗಿ, ಅವರ ಹೆಸರಿನ ಕ್ರೀಡಾ ಪ್ರಶಸ್ತಿಯ ಶೀರ್ಷಿಕೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ’ ಎಂದು ಮಾಝಿ ಹೇಳಿದರು.</p>.<p>ಒಡಿಶಾದಲ್ಲಿ ಈಚೆಗಷ್ಟೇ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಪ್ರಶಸ್ತಿಯ ಹೆಸರನ್ನು ಮರುನಾಮಕರಣ ಮಾಡಿದ್ದನ್ನು ವಿರೋಧಿಸಿ ಬಿಜು ಪಟ್ನಾಯಕ್ ಅವರ ಪುತ್ರ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಪಕ್ಷವು ವಾಗ್ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ (ಪಿಟಿಐ):</strong> ‘ಬಿಜು ಪಟ್ನಾಯಕ್ ಕ್ರೀಡಾ ಪ್ರಶಸ್ತಿಯ ಹೆಸರನ್ನು ಮರುನಾಮಕರಣ ಮಾಡುವುದಿಲ್ಲ’ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ತಿಳಿಸಿದ್ದಾರೆ.</p>.<p>ರಾಜ್ಯದ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಯು ಶುಕ್ರವಾರ ಪ್ರಶಸ್ತಿಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಪ್ರಶಸ್ತಿಯ ಹೆಸರನ್ನು ‘ರಾಜ್ಯ ಕ್ರೀಡಾ ಸಮ್ಮಾನ್’ ಎಂದು ಮರುನಾಮಕರಣ ಮಾಡಿತ್ತು. ಅದಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.</p>.<p>‘ರಾಜ್ಯ ಮತ್ತು ದೇಶಕ್ಕೆ ಬಿಜು ಪಟ್ನಾಯಕ್ ಅವರ ಕೊಡುಗೆ ಸ್ಮರಣೀಯವಾಗಿದೆ. ನನ್ನ ಸರ್ಕಾರವು ಮಣ್ಣಿನ ಮಕ್ಕಳನ್ನು ಗೌರವಿಸುತ್ತದೆ. ಹಾಗಾಗಿ, ಅವರ ಹೆಸರಿನ ಕ್ರೀಡಾ ಪ್ರಶಸ್ತಿಯ ಶೀರ್ಷಿಕೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ’ ಎಂದು ಮಾಝಿ ಹೇಳಿದರು.</p>.<p>ಒಡಿಶಾದಲ್ಲಿ ಈಚೆಗಷ್ಟೇ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಪ್ರಶಸ್ತಿಯ ಹೆಸರನ್ನು ಮರುನಾಮಕರಣ ಮಾಡಿದ್ದನ್ನು ವಿರೋಧಿಸಿ ಬಿಜು ಪಟ್ನಾಯಕ್ ಅವರ ಪುತ್ರ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಪಕ್ಷವು ವಾಗ್ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>