ಶಾಸಕರಾದ ಗಯಾಸುದ್ದೀನ್ ಶೇಖ್, ಇಮ್ರಾನ್ ಖೇಡಾವಾಲ ಮತ್ತು ಜಾವೇದ್ ಪಿರಜಾದ್ ಜಂಟಿಯಾಗಿ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ. 11 ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವ ಕ್ರಮ ನಾಚಿಕೆಗೇಡಿನಿಂದ ಕೂಡಿದೆ, ಸಂವೇದನೆಯಿಲ್ಲದ್ದಾಗಿದೆ, ನ್ಯಾಯಕ್ಕಾಗಿ ಹೋರಾಡುತ್ತಿರುವವರಿಗೆ ನಿರಾಶೆಯನ್ನುಂಟು ಮಾಡಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.