<p><strong>ಕೋಲ್ಕತ್ತ:</strong> ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ ಎಂಬಲ್ಲಿ ಮಂಗಳವಾರ ನಡೆದ ಹಿಂಸಾಕೃತ್ಯಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಘಟನೆ ಸಂಭವಿಸಿದ ದಿನ 11 ಮಂದಿಯನ್ನು ಬಂಧಿಸಲಾಗಿತ್ತು.</p>.<p>8 ಮಂದಿ ಜೀವಂತವಾಗಿ ಸುಟ್ಟುಹೋದ ಘಟನೆಗೆ ಸಂಬಂಧಿಸಿ ಇದುವರೆಗೆ ಕನಿಷ್ಠ 22 ಮಂದಿಯನ್ನು ಬಂಧಿಸಲಾಗಿದೆ ಎಂದು ಬುಧವಾರ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p>ಸೋಮವಾರ ಕೊಲೆಯಾದ ಬರ್ಶಾಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭದು ಶೇಕ್ ಎಂಬುವವರ ಕುಟುಂಬ ಸದಸ್ಯರು ಪ್ರತೀಕಾರದ ಭಾಗವಾಗಿ ದಾಳಿ ನಡೆಸಿದ್ದಾರೆ. ರಾಮ್ಪುರಹಾಟ್ ನಗರದ ಹೊರವಲಯದಲ್ಲಿರುವ ಬೊಗ್ತುಯಿ ಗ್ರಾಮದ 10 ಮನೆಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಆರೋಪ ಕೇಳಿಬಂದಿದೆ.</p>.<p><a href="https://www.prajavani.net/india-news/birbhum-killings-mamata-banerjee-said-action-to-be-taken-against-perpetrators-irrespective-of-their-921960.html" itemprop="url">ಬಿರ್ಭೂಮ್ ಹತ್ಯೆ: ರಾಜಕೀಯ ಬಣ್ಣ ಲೆಕ್ಕಿಸದೆ ಅಪರಾಧಿಗಳ ವಿರುದ್ಧ ಕ್ರಮ, ಮಮತಾ </a></p>.<p>ಬಂಧಿತರ ಪೈಕಿ ಭದು ಶೇಕ್ ಅವರ ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರು ಇದುವರೆಗೆ ಬಂಧಿತ ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ.</p>.<p>ಮಂಗಳವಾರ ನಸುಕಿನ ವೇಳೆ ನಡೆದ ಪೆಟ್ರೋಲ್ ಬಾಂಬ್ ದಾಳಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಜೀವಂತವಾಗಿ ಸುಟ್ಟುಹೋಗಿದ್ದಾರೆ.</p>.<p>ಘಟನೆಯನ್ನು ವಿರೋಧಿಸಿ ಎಡ ಪಕ್ಷಗಳು ರಾಮ್ಪುರಹಾಟ್ನಲ್ಲಿ ಪ್ರತಿಭಟನೆ ನಡೆಸಿವೆ. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿವೆ.</p>.<p><a href="https://www.prajavani.net/india-news/8-bodies-recovered-from-burnt-houses-in-bengal-village-921887.html" itemprop="url" target="_blank">ಪಶ್ಚಿಮ ಬಂಗಾಳ: ಎಂಟು ಜನರ ಸಜೀವ ದಹನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ ಎಂಬಲ್ಲಿ ಮಂಗಳವಾರ ನಡೆದ ಹಿಂಸಾಕೃತ್ಯಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಘಟನೆ ಸಂಭವಿಸಿದ ದಿನ 11 ಮಂದಿಯನ್ನು ಬಂಧಿಸಲಾಗಿತ್ತು.</p>.<p>8 ಮಂದಿ ಜೀವಂತವಾಗಿ ಸುಟ್ಟುಹೋದ ಘಟನೆಗೆ ಸಂಬಂಧಿಸಿ ಇದುವರೆಗೆ ಕನಿಷ್ಠ 22 ಮಂದಿಯನ್ನು ಬಂಧಿಸಲಾಗಿದೆ ಎಂದು ಬುಧವಾರ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p>ಸೋಮವಾರ ಕೊಲೆಯಾದ ಬರ್ಶಾಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭದು ಶೇಕ್ ಎಂಬುವವರ ಕುಟುಂಬ ಸದಸ್ಯರು ಪ್ರತೀಕಾರದ ಭಾಗವಾಗಿ ದಾಳಿ ನಡೆಸಿದ್ದಾರೆ. ರಾಮ್ಪುರಹಾಟ್ ನಗರದ ಹೊರವಲಯದಲ್ಲಿರುವ ಬೊಗ್ತುಯಿ ಗ್ರಾಮದ 10 ಮನೆಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಆರೋಪ ಕೇಳಿಬಂದಿದೆ.</p>.<p><a href="https://www.prajavani.net/india-news/birbhum-killings-mamata-banerjee-said-action-to-be-taken-against-perpetrators-irrespective-of-their-921960.html" itemprop="url">ಬಿರ್ಭೂಮ್ ಹತ್ಯೆ: ರಾಜಕೀಯ ಬಣ್ಣ ಲೆಕ್ಕಿಸದೆ ಅಪರಾಧಿಗಳ ವಿರುದ್ಧ ಕ್ರಮ, ಮಮತಾ </a></p>.<p>ಬಂಧಿತರ ಪೈಕಿ ಭದು ಶೇಕ್ ಅವರ ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರು ಇದುವರೆಗೆ ಬಂಧಿತ ಆರೋಪಿಗಳ ಹೆಸರನ್ನು ಬಹಿರಂಗಪಡಿಸಿಲ್ಲ.</p>.<p>ಮಂಗಳವಾರ ನಸುಕಿನ ವೇಳೆ ನಡೆದ ಪೆಟ್ರೋಲ್ ಬಾಂಬ್ ದಾಳಿಯಲ್ಲಿ ಹತ್ತಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಜೀವಂತವಾಗಿ ಸುಟ್ಟುಹೋಗಿದ್ದಾರೆ.</p>.<p>ಘಟನೆಯನ್ನು ವಿರೋಧಿಸಿ ಎಡ ಪಕ್ಷಗಳು ರಾಮ್ಪುರಹಾಟ್ನಲ್ಲಿ ಪ್ರತಿಭಟನೆ ನಡೆಸಿವೆ. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿವೆ.</p>.<p><a href="https://www.prajavani.net/india-news/8-bodies-recovered-from-burnt-houses-in-bengal-village-921887.html" itemprop="url" target="_blank">ಪಶ್ಚಿಮ ಬಂಗಾಳ: ಎಂಟು ಜನರ ಸಜೀವ ದಹನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>