<p><strong>ಕೋಯಿಕ್ಕೋಡ್:</strong> ವಿಶ್ವದಾದ್ಯಂತ ಕೋವಿಡ್-19ಗೆ ಸಾವಿರಾರು ಜನರು ಪ್ರಾಣ ಕಳೆದುಕೊಂಡಿರುವ ಬೆನ್ನಲ್ಲೇ ಇದೀಗ ಹಕ್ಕಿ ಜ್ವರದ ಭೀತಿ ಎದುರಾಗಿದೆ.</p>.<p>ಪಶ್ಚಿಮ ಕೊಡಿಯಾಥುರ್ನ ಒಂದು ಕೋಳಿ ಫಾರ್ಮ್ ಮತ್ತು ಕೋಯಿಕ್ಕೋಡ್ನ ವೆಂಗೇರಿಯಲ್ಲಿನ ಖಾಸಗಿ ನರ್ಸರಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಪಶುಸಂಗೋಪನಾ ಇಲಾಖೆ ನಿನ್ನೆ ತಿರುವನಂತಪುರದಲ್ಲಿ ಸಚಿವ ಕೆ.ರಾಜು ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿತು.</p>.<p>ಸದ್ಯ ಹಕ್ಕಿಜ್ವರವು ನಿಯಂತ್ರಣಕ್ಕೆ ಬಂದಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.</p>.<p>2016ರ ನಂತರ ರಾಜ್ಯದಲ್ಲಿ ಏಕಾಏಕಿ ಕಾಣಿಸಿಕೊಂಡಿರುವ ಮೊದಲ ಹಕ್ಕಿಜ್ವರ ಪ್ರಕರಣ ಇದಾಗಿದೆ. ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ಹಕ್ಕಿಜ್ವರದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು.</p>.<p>ಗುರುವಾರ ಹಕ್ಕಿಜ್ವರದಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಯಿತು. ಕೂಡಲೇ ನಾವು ಕಣ್ಣೂರು ಪ್ರಯೋಗಾಲಯಕ್ಕೆ ಕಳುಹಿಸಲಾಯಿತು ಮತ್ತು ಬಳಿಕ ಭೋಪಾಲ್ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಲಾಯಿತು. ಮುಖ್ಯಕಾರ್ಯದರ್ಶಿಯಿಂದ ನಾವು ಇನ್ನೂ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶು ಸಂಗೋಪನಾ ಅಧಿಕಾರಿ ಡಾ. ಕೆ. ಸಿಂಧು ತಿಳಿಸಿದ್ದಾರೆ.</p>.<p>ವರದಿಗಳ ಪ್ರಕಾರ ಕೋಳಿಗಳಲ್ಲಿ ಹಕ್ಕಿಜ್ವರವಿರುವುದು ಭೋಪಾಲ್ ಪ್ರಯೋಗಾಲಯದಿಂದ ದೃಢಪಟ್ಟಿದೆ.<br />ಸ್ಥಳೀಯ ಆಡಳಿತ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದು, ವಿಶೇಷ ತಜ್ಞರ ತಂಡ ಸೋಂಕು ಪೀಡಿತ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧ್ಯಯನ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್:</strong> ವಿಶ್ವದಾದ್ಯಂತ ಕೋವಿಡ್-19ಗೆ ಸಾವಿರಾರು ಜನರು ಪ್ರಾಣ ಕಳೆದುಕೊಂಡಿರುವ ಬೆನ್ನಲ್ಲೇ ಇದೀಗ ಹಕ್ಕಿ ಜ್ವರದ ಭೀತಿ ಎದುರಾಗಿದೆ.</p>.<p>ಪಶ್ಚಿಮ ಕೊಡಿಯಾಥುರ್ನ ಒಂದು ಕೋಳಿ ಫಾರ್ಮ್ ಮತ್ತು ಕೋಯಿಕ್ಕೋಡ್ನ ವೆಂಗೇರಿಯಲ್ಲಿನ ಖಾಸಗಿ ನರ್ಸರಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಪಶುಸಂಗೋಪನಾ ಇಲಾಖೆ ನಿನ್ನೆ ತಿರುವನಂತಪುರದಲ್ಲಿ ಸಚಿವ ಕೆ.ರಾಜು ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿತು.</p>.<p>ಸದ್ಯ ಹಕ್ಕಿಜ್ವರವು ನಿಯಂತ್ರಣಕ್ಕೆ ಬಂದಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.</p>.<p>2016ರ ನಂತರ ರಾಜ್ಯದಲ್ಲಿ ಏಕಾಏಕಿ ಕಾಣಿಸಿಕೊಂಡಿರುವ ಮೊದಲ ಹಕ್ಕಿಜ್ವರ ಪ್ರಕರಣ ಇದಾಗಿದೆ. ಪ್ರತಿದಿನ ಇನ್ನೂರು ಕೋಳಿಗಳು ಸಾಯಲು ಪ್ರಾರಂಭಿಸಿದಾಗ ಹಕ್ಕಿಜ್ವರದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು.</p>.<p>ಗುರುವಾರ ಹಕ್ಕಿಜ್ವರದಿಂದ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಯಿತು. ಕೂಡಲೇ ನಾವು ಕಣ್ಣೂರು ಪ್ರಯೋಗಾಲಯಕ್ಕೆ ಕಳುಹಿಸಲಾಯಿತು ಮತ್ತು ಬಳಿಕ ಭೋಪಾಲ್ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಲಾಯಿತು. ಮುಖ್ಯಕಾರ್ಯದರ್ಶಿಯಿಂದ ನಾವು ಇನ್ನೂ ಮಾರ್ಗಸೂಚಿಗಳನ್ನು ಸ್ವೀಕರಿಸಿಲ್ಲ ಎಂದು ಪಶು ಸಂಗೋಪನಾ ಅಧಿಕಾರಿ ಡಾ. ಕೆ. ಸಿಂಧು ತಿಳಿಸಿದ್ದಾರೆ.</p>.<p>ವರದಿಗಳ ಪ್ರಕಾರ ಕೋಳಿಗಳಲ್ಲಿ ಹಕ್ಕಿಜ್ವರವಿರುವುದು ಭೋಪಾಲ್ ಪ್ರಯೋಗಾಲಯದಿಂದ ದೃಢಪಟ್ಟಿದೆ.<br />ಸ್ಥಳೀಯ ಆಡಳಿತ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆ ವಹಿಸುತ್ತಿದ್ದು, ವಿಶೇಷ ತಜ್ಞರ ತಂಡ ಸೋಂಕು ಪೀಡಿತ ಕೋಳಿ ಸಾಕಣೆ ಕೇಂದ್ರಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧ್ಯಯನ ನಡೆಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>