<p><strong>ಔರಂಗಾಬಾದ್: </strong>ಮಹಾರಾಷ್ಟ್ರದ ಪರ್ಭನಿ ಮತ್ತು ಬೀಡ್ ಜಿಲ್ಲೆಗಳ ಎರಡು ಗ್ರಾಮಗಳಲ್ಲಿ ಮೃತಪಟ್ಟ ಕೋಳಿಗಳಿಗೆ ‘ಹಕ್ಕಿ ಜ್ವರ’ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶನಿವಾರ 2,000ಕ್ಕೂ ಅಧಿಕ ಪಕ್ಷಿಗಳನ್ನು ಕೊಲ್ಲಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಪರ್ಭನಿ ಜಿಲ್ಲೆಯ ಕುಪ್ತಾ ಗ್ರಾಮ ಮತ್ತು ಬೀಡ್ ಜಿಲ್ಲೆಯ ಲೋಖಂಡಿ ಸಾವರ್ಗಾಂವ್ ಗ್ರಾಮದಲ್ಲಿ ಮೃತಪಟ್ಟ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಸದ್ಯ ಈ ಗ್ರಾಮಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇಲ್ಲಿ ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ. ಅಲ್ಲದೆ ಈ ಪ್ರದೇಶದಲ್ಲಿ ಕೋಳಿ ಉತ್ಪನ್ನಗಳ ಸಾಗಣೆಯನ್ನು ಕೂಡ ನಿಲ್ಲಿಸಲಾಗಿದೆ’ ಎಂದು ಅವರು ಹೇಳಿದರು.</p>.<p>‘ಕುಪ್ತಾ ಗ್ರಾಮದಲ್ಲಿ ಶನಿವಾರ ಸುಮಾರು 468 ಪಕ್ಷಿಗಳನ್ನು ಸಾಯಿಸಲಾಗುವುದು’ ಎಂದು ಜಿಲ್ಲಾಧಿಕಾರಿ ದೀಪಕ್ ಮುಗ್ಲಿಕರ್ ಅವರು ತಿಳಿಸಿದರು.</p>.<p>ಲೋಖಂಡಿ ಸಾವರ್ಗಾಂವ್ ಗ್ರಾಮದಲ್ಲಿ 1,600 ಪಕ್ಷಿಗಳನ್ನು ಕೊಲ್ಲಲಾಗುವುದು. ಇದಕ್ಕಾಗಿ ತಂಡವನ್ನು ಕೂಡ ರಚಿಸಲಾಗಿದೆ. 2 ಮೀಟರ್ ಆಳದ ತಗ್ಗು ಅಗೆಯಲಾಗಿದ್ದು, ಅದರಲ್ಲಿ ಕ್ಯಾಲ್ಸಿಯಂ ಕಾರ್ಬೋನೇಟ್ ಸಿಂಪಡಿಸಲಾಗಿದೆ’ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿ ಡಾ. ರವಿ ಸುರೇವಾಡ ಅವರು ಮಾಹಿತಿ ನೀಡಿದರು.</p>.<p>‘ಮಹಾರಾಷ್ಟ್ರದಲ್ಲಿ ಜನವರಿ 8 ರಿಂದ ಒಟ್ಟು 3,949 ಪಕ್ಷಿಗಳ ಕಳೇಬರ ಪತ್ತೆಯಾಗಿವೆ’ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಂಗಾಬಾದ್: </strong>ಮಹಾರಾಷ್ಟ್ರದ ಪರ್ಭನಿ ಮತ್ತು ಬೀಡ್ ಜಿಲ್ಲೆಗಳ ಎರಡು ಗ್ರಾಮಗಳಲ್ಲಿ ಮೃತಪಟ್ಟ ಕೋಳಿಗಳಿಗೆ ‘ಹಕ್ಕಿ ಜ್ವರ’ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶನಿವಾರ 2,000ಕ್ಕೂ ಅಧಿಕ ಪಕ್ಷಿಗಳನ್ನು ಕೊಲ್ಲಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ಪರ್ಭನಿ ಜಿಲ್ಲೆಯ ಕುಪ್ತಾ ಗ್ರಾಮ ಮತ್ತು ಬೀಡ್ ಜಿಲ್ಲೆಯ ಲೋಖಂಡಿ ಸಾವರ್ಗಾಂವ್ ಗ್ರಾಮದಲ್ಲಿ ಮೃತಪಟ್ಟ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಸದ್ಯ ಈ ಗ್ರಾಮಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇಲ್ಲಿ ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ. ಅಲ್ಲದೆ ಈ ಪ್ರದೇಶದಲ್ಲಿ ಕೋಳಿ ಉತ್ಪನ್ನಗಳ ಸಾಗಣೆಯನ್ನು ಕೂಡ ನಿಲ್ಲಿಸಲಾಗಿದೆ’ ಎಂದು ಅವರು ಹೇಳಿದರು.</p>.<p>‘ಕುಪ್ತಾ ಗ್ರಾಮದಲ್ಲಿ ಶನಿವಾರ ಸುಮಾರು 468 ಪಕ್ಷಿಗಳನ್ನು ಸಾಯಿಸಲಾಗುವುದು’ ಎಂದು ಜಿಲ್ಲಾಧಿಕಾರಿ ದೀಪಕ್ ಮುಗ್ಲಿಕರ್ ಅವರು ತಿಳಿಸಿದರು.</p>.<p>ಲೋಖಂಡಿ ಸಾವರ್ಗಾಂವ್ ಗ್ರಾಮದಲ್ಲಿ 1,600 ಪಕ್ಷಿಗಳನ್ನು ಕೊಲ್ಲಲಾಗುವುದು. ಇದಕ್ಕಾಗಿ ತಂಡವನ್ನು ಕೂಡ ರಚಿಸಲಾಗಿದೆ. 2 ಮೀಟರ್ ಆಳದ ತಗ್ಗು ಅಗೆಯಲಾಗಿದ್ದು, ಅದರಲ್ಲಿ ಕ್ಯಾಲ್ಸಿಯಂ ಕಾರ್ಬೋನೇಟ್ ಸಿಂಪಡಿಸಲಾಗಿದೆ’ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿ ಡಾ. ರವಿ ಸುರೇವಾಡ ಅವರು ಮಾಹಿತಿ ನೀಡಿದರು.</p>.<p>‘ಮಹಾರಾಷ್ಟ್ರದಲ್ಲಿ ಜನವರಿ 8 ರಿಂದ ಒಟ್ಟು 3,949 ಪಕ್ಷಿಗಳ ಕಳೇಬರ ಪತ್ತೆಯಾಗಿವೆ’ ಎಂದು ಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>