<p><strong>ಫರೀದಾಬಾದ್:</strong> ಗೋರಕ್ಷಕ ಬಿಟ್ಟು ಬಜರಂಗಿ ಅವರ ತಮ್ಮ ಮಹೇಶ್ ಪಾಂಚಾಲ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡಿರುವ ಮಹೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದರು. </p>.<p>ಗೋರಕ್ಷಾ ಬಜರಂಗ ದಳದ ರಾಷ್ಟ್ರೀಯ ಅಧ್ಯಕ್ಷ ಬಜರಂಗಿ ಅಲಿಯಾಸ್ ರಾಜ್ಕುಮಾರ್ ಅವರು ನೂಹ್ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿದ್ದಾರೆ.</p>.<p>ಮಹೇಶ್ ಅವರ ಮೇಲೆ ಐವರ ಗುಂಪು ಬುಧವಾರ ರಾತ್ರಿ ಇಲ್ಲಿನ ಬಾಬಾ ಮಂಡಿ ಸಮೀಪ ದಾಳಿ ನಡೆಸಿದೆ. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದೆ ಎಂದು ತಿಳಿಸಿದರು.</p>.<p>‘ಈ ಕುರಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರ ತಂಡ ಆಸ್ಪತ್ರೆಗೆ ತೆರಳಿ ಪಾಂಚಾಲ್ ಅವರಿಂದ ಘಟನೆ ಬಗ್ಗೆ ವರದಿ ಪಡೆಯಿತು. ನಂತರ ಘಟನಾಸ್ಥಳದ ಪರಿಶೀಲನೆ ನಡೆಸಿತು’ ಎಂದು ಮಾಹಿತಿ ನೀಡಿದರು.</p>.<p>ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫರೀದಾಬಾದ್:</strong> ಗೋರಕ್ಷಕ ಬಿಟ್ಟು ಬಜರಂಗಿ ಅವರ ತಮ್ಮ ಮಹೇಶ್ ಪಾಂಚಾಲ್ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡಿರುವ ಮಹೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದರು. </p>.<p>ಗೋರಕ್ಷಾ ಬಜರಂಗ ದಳದ ರಾಷ್ಟ್ರೀಯ ಅಧ್ಯಕ್ಷ ಬಜರಂಗಿ ಅಲಿಯಾಸ್ ರಾಜ್ಕುಮಾರ್ ಅವರು ನೂಹ್ ಹಿಂಸಾಚಾರ ಪ್ರಕರಣದಲ್ಲಿ ಬಂಧನದಲ್ಲಿದ್ದಾರೆ.</p>.<p>ಮಹೇಶ್ ಅವರ ಮೇಲೆ ಐವರ ಗುಂಪು ಬುಧವಾರ ರಾತ್ರಿ ಇಲ್ಲಿನ ಬಾಬಾ ಮಂಡಿ ಸಮೀಪ ದಾಳಿ ನಡೆಸಿದೆ. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದೆ ಎಂದು ತಿಳಿಸಿದರು.</p>.<p>‘ಈ ಕುರಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರ ತಂಡ ಆಸ್ಪತ್ರೆಗೆ ತೆರಳಿ ಪಾಂಚಾಲ್ ಅವರಿಂದ ಘಟನೆ ಬಗ್ಗೆ ವರದಿ ಪಡೆಯಿತು. ನಂತರ ಘಟನಾಸ್ಥಳದ ಪರಿಶೀಲನೆ ನಡೆಸಿತು’ ಎಂದು ಮಾಹಿತಿ ನೀಡಿದರು.</p>.<p>ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>