ಭುವನೇಶ್ವರ: ಒಡಿಶಾದ ನೀಮಪಾರಾ ಕ್ಷೇತ್ರದ ಬಿಜೆಡಿ ಶಾಸಕ ಸಮೀರ್ ರಂಜನ್ ದಾಸ್ ಅವರು ಭಾನುವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಒಡಿಶಾ ರಾಜ್ಯ ಘಟಕದ ಅಧ್ಯಕ್ಷ ಮನಮೋಹನ್ ಸಮಲ್, ಪಕ್ಷದ ರಾಜ್ಯ ಉಸ್ತುವಾರಿ ವಿಜಯ್ ಪಾಲ್ ಸಿಂಗ್ ತೋಮರ್ ಅವರು ಸಮೀರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಮೀರ್ ಅವರಿಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಡಿ ಟಿಕೆಟ್ ನಿರಾಕರಿಸಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಬಿಜೆಡಿ ನಾಯಕತ್ವದಲ್ಲಿ ವಿಶ್ವಾಸವಿಲ್ಲದ ಕಾರಣ ಬಿಜೆಪಿಗೆ ಸೇರಿದ್ದೇನೆ ಎಂದು ಸಮೀರ್ ಅವರು ತಿಳಿಸಿದರು.