ಬಿಜೆಡಿಯಿಂದ ನಾವು ಬೆಂಬಲ ಕೋರಿಲ್ಲ ಎಂದು ಬಿಜೆಪಿ ಹೇಳಿದೆ. ‘ರಾಜಕೀಯದಲ್ಲಿ ಕೆಲವರು ಬೆಂಬಲ ವ್ಯಕ್ತಪಡಿಸುತ್ತಾರೆ. ಅದನ್ನು ನಾವು ಯಾಕೆ ನಿರಾಕರಿಸಬೇಕು? ಬಿಜೆಪಿ ಹೋರಾಟ ಮಾಡುತ್ತದೆ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ ಸಮಲ್ ಹೇಳಿದ್ದಾರೆ.
ಮುಂದಿನ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಬಿಜೆಡಿ ನಡುವೆ ಯಾವುದೇ ಮೈತ್ರಿ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಬಿಜೆಡಿಯ ಈ ನಿಲುವನ್ನು ಕಾಂಗ್ರೆಸ್ ಟೀಕಿಸಿದ್ದು, ಒಡಿಶಾದ ಜನರಿಗೆ ಮೋಸ ಮಾಡಿದೆ ಎಂದು ಕಿಡಿ ಕಾರಿದೆ.