<p><strong>ಭುವನೇಶ್ವರ:</strong> ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಬೆಂಬಲ ನೀಡುವುದಾಗಿ ಬಿಜೆಡಿ ಹೇಳಿದೆ.</p><p>ಒಡಿಶಾದಿಂದ ಅಶ್ವಿನಿ ವೈಷ್ಣವ್ ಅವರು ಸ್ಪರ್ಧಿಸಲಿದ್ದಾರೆ ಎಂದು ಘೋಷಣೆಯಾದ ಬೆನ್ನಲ್ಲೇ, ಬಿಜೆಡಿ ಅವರಿಗೆ ಬೆಂಬಲ ಪ್ರಕಟಿಸಿದೆ.</p>.Video | ರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ಸೋನಿಯಾಗಾಂಧಿ ಕಣಕ್ಕೆ.<p>‘ರಾಜ್ಯದ ರೈಲ್ವೆ ಹಾಗೂ ದೂರಸಂಪರ್ಕ ಅಭಿವೃದ್ಧಿಗಾಗಿ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಡಿ ಬೆಂಬಲಿಸುತ್ತದೆ’ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>2019ರಲ್ಲೂ ಬಿಜೆಡಿ ಬೆಂಬಲದಿಂದ ಅಶ್ವಿನಿ ವೈಷ್ಣವ್ ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.</p>.ರಾಜ್ಯಸಭಾ ಚುನಾವಣೆ: ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಕಣಕ್ಕೆ.<p>ಬಿಜೆಡಿಯಿಂದ ನಾವು ಬೆಂಬಲ ಕೋರಿಲ್ಲ ಎಂದು ಬಿಜೆಪಿ ಹೇಳಿದೆ. ‘ರಾಜಕೀಯದಲ್ಲಿ ಕೆಲವರು ಬೆಂಬಲ ವ್ಯಕ್ತಪಡಿಸುತ್ತಾರೆ. ಅದನ್ನು ನಾವು ಯಾಕೆ ನಿರಾಕರಿಸಬೇಕು? ಬಿಜೆಪಿ ಹೋರಾಟ ಮಾಡುತ್ತದೆ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ ಸಮಲ್ ಹೇಳಿದ್ದಾರೆ.</p><p>ಮುಂದಿನ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಬಿಜೆಡಿ ನಡುವೆ ಯಾವುದೇ ಮೈತ್ರಿ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.</p><p>ಬಿಜೆಡಿಯ ಈ ನಿಲುವನ್ನು ಕಾಂಗ್ರೆಸ್ ಟೀಕಿಸಿದ್ದು, ಒಡಿಶಾದ ಜನರಿಗೆ ಮೋಸ ಮಾಡಿದೆ ಎಂದು ಕಿಡಿ ಕಾರಿದೆ.</p> .ಪಶ್ಚಿಮ ಬಂಗಾಳ- ರಾಜ್ಯಸಭಾ ಚುನಾವಣೆ: ಸಾಗರಿಕಾ ಘೋಷ್, ಸುಷ್ಮಿತಾ ದೇವ್ ಕಣಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಬೆಂಬಲ ನೀಡುವುದಾಗಿ ಬಿಜೆಡಿ ಹೇಳಿದೆ.</p><p>ಒಡಿಶಾದಿಂದ ಅಶ್ವಿನಿ ವೈಷ್ಣವ್ ಅವರು ಸ್ಪರ್ಧಿಸಲಿದ್ದಾರೆ ಎಂದು ಘೋಷಣೆಯಾದ ಬೆನ್ನಲ್ಲೇ, ಬಿಜೆಡಿ ಅವರಿಗೆ ಬೆಂಬಲ ಪ್ರಕಟಿಸಿದೆ.</p>.Video | ರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ಸೋನಿಯಾಗಾಂಧಿ ಕಣಕ್ಕೆ.<p>‘ರಾಜ್ಯದ ರೈಲ್ವೆ ಹಾಗೂ ದೂರಸಂಪರ್ಕ ಅಭಿವೃದ್ಧಿಗಾಗಿ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಡಿ ಬೆಂಬಲಿಸುತ್ತದೆ’ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>2019ರಲ್ಲೂ ಬಿಜೆಡಿ ಬೆಂಬಲದಿಂದ ಅಶ್ವಿನಿ ವೈಷ್ಣವ್ ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.</p>.ರಾಜ್ಯಸಭಾ ಚುನಾವಣೆ: ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಕಣಕ್ಕೆ.<p>ಬಿಜೆಡಿಯಿಂದ ನಾವು ಬೆಂಬಲ ಕೋರಿಲ್ಲ ಎಂದು ಬಿಜೆಪಿ ಹೇಳಿದೆ. ‘ರಾಜಕೀಯದಲ್ಲಿ ಕೆಲವರು ಬೆಂಬಲ ವ್ಯಕ್ತಪಡಿಸುತ್ತಾರೆ. ಅದನ್ನು ನಾವು ಯಾಕೆ ನಿರಾಕರಿಸಬೇಕು? ಬಿಜೆಪಿ ಹೋರಾಟ ಮಾಡುತ್ತದೆ’ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ ಸಮಲ್ ಹೇಳಿದ್ದಾರೆ.</p><p>ಮುಂದಿನ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಬಿಜೆಡಿ ನಡುವೆ ಯಾವುದೇ ಮೈತ್ರಿ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.</p><p>ಬಿಜೆಡಿಯ ಈ ನಿಲುವನ್ನು ಕಾಂಗ್ರೆಸ್ ಟೀಕಿಸಿದ್ದು, ಒಡಿಶಾದ ಜನರಿಗೆ ಮೋಸ ಮಾಡಿದೆ ಎಂದು ಕಿಡಿ ಕಾರಿದೆ.</p> .ಪಶ್ಚಿಮ ಬಂಗಾಳ- ರಾಜ್ಯಸಭಾ ಚುನಾವಣೆ: ಸಾಗರಿಕಾ ಘೋಷ್, ಸುಷ್ಮಿತಾ ದೇವ್ ಕಣಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>